AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?
ರಾಧೆ ಪೋಸ್ಟರ್​ ಮತ್ತು ಫೇಕ್​ ಟ್ವೀಟ್​
ರಾಜೇಶ್ ದುಗ್ಗುಮನೆ
| Edited By: |

Updated on: May 18, 2021 | 9:46 AM

Share

ರಾಧೆ ಸಿನಿಮಾ ಉತ್ತಮ ವಿಮರ್ಶೆ ಪಡೆಯುವಲ್ಲಿ ಸೋತಿದೆ. ಈ ವಿಚಾರ ಇಟ್ಟುಕೊಂಡು ಸಾಕಷ್ಟು ಜನರು ಟ್ರೋಲ್​ ಮಾಡುತ್ತಿದ್ದರು. ಈಗ ಬೆಂಗಳೂರು ಸಿಟಿ ಪೊಲೀಸರು ಕೂಡ ಇದೇ ವಿಚಾರ ಇಟ್ಟುಕೊಂಡು ಟ್ರೋಲ್​ ಮಾಡಿದ್ದಾರೆ ಎನ್ನುವ ರೀತಿಯ ಟ್ವೀಟ್​ ಒಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದು ಫೇಕ್​ ಎನ್ನುವ ವಿಚಾರ ಬಯಲಾಗಿದೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇನ್ನು ಸಿನಿಮಾ ನೋಡಿದ ಅನೇಕರು ಸಲ್ಮಾನ್​ ಖಾನ್​ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಸಲ್ಲುಗೆ ಸಿನಿಮಾವನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂಬಿತ್ಯಾದಿ ಕಮೆಂಟ್​ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡಿದ್ದವು. ಅದೇ ರೀತಿ ಬೆಂಗಳೂರು ಸಿಟಿ ಪೊಲೀಸರು ಮಾಡಿದ ಟ್ವೀಟ್​ ಕೂಡ ಎಲ್ಲರ ಗಮನ ಸೆಳೆದಿತ್ತು.

‘ಲಾಕ್​ಡೌನ್​ ನಿಯಮ ಉಲ್ಲಂಘಿಸಿದರೆ ಪದೇಪದೇ ರಾಧೆ ಸಿನಿಮಾ ತೋರಿಸಲಾಗುತ್ತದೆ- ಬೆಂಗಳೂರು ಸಿಟಿ ಪೊಲೀಸ್​ ಕಮಿಷನರ್’​ ಎಂದಿತ್ತು. ಈ ಟ್ವೀಟ್​ಅನ್ನು ಸಿಟಿ ಪೊಲೀಸ್​ ಖಾತೆಯಿಂದಲೇ ಮಾಡಲಾಗಿದೆಯೆಂದು ಬಿಂಬಿಸಾಗಿತ್ತು. ಇದನ್ನು ಅನೇಕರು ನಂಬಿದ್ದರು ಕೂಡ. ಆದರೆ, ಇದು ಫೇಕ್​ ಟ್ವೀಟ್​.

ಟ್ವೀಟ್​ ಮಾಡಲಾದ ಡೇಟ್​ ಜನವರಿ 15, 2021 ಎಂದಿದೆ. ಆದರೆ,​ ಸಿನಿಮಾ ರಿಲೀಸ್​ ಆಗಿದ್ದು ಮೇ 13ಕ್ಕೆ. ಮೀಮ್​ ಮಾಡುವ ಉದ್ದೇಶದಿಂದ ಯಾರೋ ಈ ಟ್ವೀಟ್​ ಎಡಿಟ್​ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?