Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?
ರಾಧೆ ಪೋಸ್ಟರ್​ ಮತ್ತು ಫೇಕ್​ ಟ್ವೀಟ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 18, 2021 | 9:46 AM

ರಾಧೆ ಸಿನಿಮಾ ಉತ್ತಮ ವಿಮರ್ಶೆ ಪಡೆಯುವಲ್ಲಿ ಸೋತಿದೆ. ಈ ವಿಚಾರ ಇಟ್ಟುಕೊಂಡು ಸಾಕಷ್ಟು ಜನರು ಟ್ರೋಲ್​ ಮಾಡುತ್ತಿದ್ದರು. ಈಗ ಬೆಂಗಳೂರು ಸಿಟಿ ಪೊಲೀಸರು ಕೂಡ ಇದೇ ವಿಚಾರ ಇಟ್ಟುಕೊಂಡು ಟ್ರೋಲ್​ ಮಾಡಿದ್ದಾರೆ ಎನ್ನುವ ರೀತಿಯ ಟ್ವೀಟ್​ ಒಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದು ಫೇಕ್​ ಎನ್ನುವ ವಿಚಾರ ಬಯಲಾಗಿದೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇನ್ನು ಸಿನಿಮಾ ನೋಡಿದ ಅನೇಕರು ಸಲ್ಮಾನ್​ ಖಾನ್​ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಸಲ್ಲುಗೆ ಸಿನಿಮಾವನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂಬಿತ್ಯಾದಿ ಕಮೆಂಟ್​ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡಿದ್ದವು. ಅದೇ ರೀತಿ ಬೆಂಗಳೂರು ಸಿಟಿ ಪೊಲೀಸರು ಮಾಡಿದ ಟ್ವೀಟ್​ ಕೂಡ ಎಲ್ಲರ ಗಮನ ಸೆಳೆದಿತ್ತು.

‘ಲಾಕ್​ಡೌನ್​ ನಿಯಮ ಉಲ್ಲಂಘಿಸಿದರೆ ಪದೇಪದೇ ರಾಧೆ ಸಿನಿಮಾ ತೋರಿಸಲಾಗುತ್ತದೆ- ಬೆಂಗಳೂರು ಸಿಟಿ ಪೊಲೀಸ್​ ಕಮಿಷನರ್’​ ಎಂದಿತ್ತು. ಈ ಟ್ವೀಟ್​ಅನ್ನು ಸಿಟಿ ಪೊಲೀಸ್​ ಖಾತೆಯಿಂದಲೇ ಮಾಡಲಾಗಿದೆಯೆಂದು ಬಿಂಬಿಸಾಗಿತ್ತು. ಇದನ್ನು ಅನೇಕರು ನಂಬಿದ್ದರು ಕೂಡ. ಆದರೆ, ಇದು ಫೇಕ್​ ಟ್ವೀಟ್​.

ಟ್ವೀಟ್​ ಮಾಡಲಾದ ಡೇಟ್​ ಜನವರಿ 15, 2021 ಎಂದಿದೆ. ಆದರೆ,​ ಸಿನಿಮಾ ರಿಲೀಸ್​ ಆಗಿದ್ದು ಮೇ 13ಕ್ಕೆ. ಮೀಮ್​ ಮಾಡುವ ಉದ್ದೇಶದಿಂದ ಯಾರೋ ಈ ಟ್ವೀಟ್​ ಎಡಿಟ್​ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ