AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು.

ಲಾಕ್​ಡೌನ್​ ನಿಯಮ ಮೀರಿದ್ರೆ ರಾಧೆ ಚಿತ್ರವನ್ನು ಪದೇಪದೇ ತೋರಿಸಲಾಗುತ್ತದೆ; ಬೆಂಗಳೂರು ಸಿಟಿ ಪೊಲೀಸ್​ ಹೀಗೆ ಟ್ವೀಟ್​ ಮಾಡಿದ್ದು ನಿಜವೇ?
ರಾಧೆ ಪೋಸ್ಟರ್​ ಮತ್ತು ಫೇಕ್​ ಟ್ವೀಟ್​
ರಾಜೇಶ್ ದುಗ್ಗುಮನೆ
| Edited By: |

Updated on: May 18, 2021 | 9:46 AM

Share

ರಾಧೆ ಸಿನಿಮಾ ಉತ್ತಮ ವಿಮರ್ಶೆ ಪಡೆಯುವಲ್ಲಿ ಸೋತಿದೆ. ಈ ವಿಚಾರ ಇಟ್ಟುಕೊಂಡು ಸಾಕಷ್ಟು ಜನರು ಟ್ರೋಲ್​ ಮಾಡುತ್ತಿದ್ದರು. ಈಗ ಬೆಂಗಳೂರು ಸಿಟಿ ಪೊಲೀಸರು ಕೂಡ ಇದೇ ವಿಚಾರ ಇಟ್ಟುಕೊಂಡು ಟ್ರೋಲ್​ ಮಾಡಿದ್ದಾರೆ ಎನ್ನುವ ರೀತಿಯ ಟ್ವೀಟ್​ ಒಂದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದು ಫೇಕ್​ ಎನ್ನುವ ವಿಚಾರ ಬಯಲಾಗಿದೆ.

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’ ಸಿನಿಮಾ ಸಾಕಷ್ಟು ನಿರೀಕ್ಷೆಗಳೊಂದಿಗೆ ತೆರೆಗೆ ಬಂದಿತ್ತು. ಮೊದಲ ದಿನ ಸಿನಿಮಾ ನೋಡೋಕೆ ಸಿನಿಪ್ರಿಯರು ಮುಗಿಬಿದ್ದಿದ್ದರಿಂದ ಜೀ5 ಸರ್ವರ್​​ ಕ್ರ್ಯಾಶ್​ ಆಗಿತ್ತು. ಇಷ್ಟೆಲ್ಲ ಅಬ್ಬರದ ನಡುವೆಯೂ ವಿಮರ್ಶೆ ವಿಚಾರದಲ್ಲಿ ರಾಧೆ  ಸೋತಿತ್ತು. ರಾಧೆ ಚಿತ್ರಕ್ಕೆ ಐಎಂಡಿಬಿ 10 ಅಂಕಕ್ಕೆ ಕೇವಲ 2.4 ರೇಟಿಂಗ್​ ನೀಡಿತ್ತು.

ಇನ್ನು ಸಿನಿಮಾ ನೋಡಿದ ಅನೇಕರು ಸಲ್ಮಾನ್​ ಖಾನ್​ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಸಲ್ಲುಗೆ ಸಿನಿಮಾವನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ ಎಂಬಿತ್ಯಾದಿ ಕಮೆಂಟ್​ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡಿದ್ದವು. ಅದೇ ರೀತಿ ಬೆಂಗಳೂರು ಸಿಟಿ ಪೊಲೀಸರು ಮಾಡಿದ ಟ್ವೀಟ್​ ಕೂಡ ಎಲ್ಲರ ಗಮನ ಸೆಳೆದಿತ್ತು.

‘ಲಾಕ್​ಡೌನ್​ ನಿಯಮ ಉಲ್ಲಂಘಿಸಿದರೆ ಪದೇಪದೇ ರಾಧೆ ಸಿನಿಮಾ ತೋರಿಸಲಾಗುತ್ತದೆ- ಬೆಂಗಳೂರು ಸಿಟಿ ಪೊಲೀಸ್​ ಕಮಿಷನರ್’​ ಎಂದಿತ್ತು. ಈ ಟ್ವೀಟ್​ಅನ್ನು ಸಿಟಿ ಪೊಲೀಸ್​ ಖಾತೆಯಿಂದಲೇ ಮಾಡಲಾಗಿದೆಯೆಂದು ಬಿಂಬಿಸಾಗಿತ್ತು. ಇದನ್ನು ಅನೇಕರು ನಂಬಿದ್ದರು ಕೂಡ. ಆದರೆ, ಇದು ಫೇಕ್​ ಟ್ವೀಟ್​.

ಟ್ವೀಟ್​ ಮಾಡಲಾದ ಡೇಟ್​ ಜನವರಿ 15, 2021 ಎಂದಿದೆ. ಆದರೆ,​ ಸಿನಿಮಾ ರಿಲೀಸ್​ ಆಗಿದ್ದು ಮೇ 13ಕ್ಕೆ. ಮೀಮ್​ ಮಾಡುವ ಉದ್ದೇಶದಿಂದ ಯಾರೋ ಈ ಟ್ವೀಟ್​ ಎಡಿಟ್​ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ಓದಿ: Salman Khan: ನೆಲಕಚ್ಚಿದ ರಾಧೆ; ಸಲ್ಮಾನ್​ ವೃತ್ತಿಜೀವನದಲ್ಲೇ ಅತ್ಯಂತ ಕಳಪೆ ಸಿನಿಮಾ

Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ