AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
Jagadisha B
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 10:01 AM

Share

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್