AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ

ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್​ಪೆಕ್ಟರ್, ಎಸಿಪಿ ಜೀಪಿಗೂ ಇನ್ಮುಂದೆ ಡ್ಯಾಶ್ ಕ್ಯಾಮೆರಾ!ಬೆಂಗಳೂರು ಕಮಿಷನರ್ ಮಹತ್ವದ ನಿರ್ಧಾರ
ಬಿ ದಯಾನಂದ್​
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 05, 2024 | 10:01 AM

ಬೆಂಗಳೂರು, ಏ.05: ಹೊಯ್ಸಳ ವಾಹನಕ್ಕೆ ಡ್ಯಾಶ್​ ಕ್ಯಾಮೆರಾ ಅಳವಡಿಕೆ ಸಕ್ಸಸ್ ಹಿನ್ನೆಲೆ ಇನ್ಸ್​ಪೆಕ್ಟರ್​​ ಮತ್ತು ಎಸಿಪಿ ಜೀಪ್​​​ಗೂ ಇನ್ಮುಂದೆ ಡ್ಯಾಶ್​ ಕ್ಯಾಮೆರಾ ಅಳವಡಿಸಲು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್(B Dayananda) ಅವರು ಮಹತ್ವದ ನಿರ್ಧಾರ ಕೈಗೊಂಡಿರುವ ಕುರಿತು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಹೌದು, ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನು ಹೊಯ್ಸಳದಲ್ಲಿ  ಘಟನೆಗಳ ಮಾಹಿತಿ, ಸ್ಪಾಟ್​ ರೀಚ್ ಆದ ಸಮಯ,ಎಲ್ಲದರ ಚಿತ್ರೀಕರಣ ಆಗಿತ್ತು. ಈ ಮೂಲಕ ಹೊಯ್ಸಳದ ಸಂಪೂರ್ಣ ಸಂಪರ್ಕ ಕಮಾಂಡ್​ ಸೆಂಟರ್​​ನಲ್ಲಿದ್ದು, ಪೊಲೀಸ್​​ ಸಿಬ್ಬಂದಿಯ ಕರ್ತವ್ಯ ಲೋಪದ ಬಗ್ಗೆಯೂ ಪರಿಶೀಲನೆ ನಡೆಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಇನ್ಸ್​ಪೆಕ್ಟರ್, ಎಸಿಪಿ ಜೀಪ್​ಗೂ ಕ್ಯಾಮೆರಾ ಅಳವಡಿಕೆ ಮಾಡುವುದಾಗಿ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ಆನೇಕಲ್​ ಬಳಿ ಹಿಟ್​​ ಆ್ಯಂಡ್​ ರನ್​ಗೆ ಸವಾರ ಬಲಿ

ಬೆಂಗಳೂರು: ಆನೇಕಲ್ ಪಟ್ಟಣದ ಮಿರ್ಜಾರಸ್ತೆಯ ಪೊಲೀಸ್ ಕ್ವಾಟ್ರಸ್ ಮುಂಭಾಗದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಬೈಕ್​ ಸವಾರ ಬಲಿಯಾದ ಧಾರುಣ ಘಟನೆ ನಡೆದಿದೆ. ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಪರಾರಿಯಾಗಿದ್ದಾನೆ. ಇನ್ನು ಪೊಲೀಸರು ಮೃತ ಬೈಕ್ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ವಾಹನ ಡಿಕ್ಕಿ ರಭಸಕ್ಕೆ ಸವಾರನ ತಲೆ ಭಾಗ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಮೂಲಕ ಆನೇಕಲ್​ನ ಮಿರ್ಜಾ ರಸ್ತೆಯಲ್ಲಿ ಒಂದೇ ವಾರದಲ್ಲಿ 2 ಅಪಘಾತ ಸಂಭವಿಸಿದಂತಾಗಿದೆ. 3-4 ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದರು. ಅಪಘಾತ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Fri, 5 April 24

ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು