AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಡ್ ಕಾಲ್ ಕೊಟ್ಟು ಹುಡುಗರನ್ನು ಪಟಾಯಿಸುತ್ತಾಳೆ, ಆಮೇಲೆ ನಡೆಯೋದೇ ಬೇರೆ! ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಮಿಸ್ಡ್​ ಕಾಲ್ ಕೊಟ್ಟು ಕೊಟ್ಟೇ ಬೆಂಗಳೂರಿನ ಯುವಕರನ್ನು ಪರಿಚಯ ಮಾಡಿಕೊಂಡು ನಂತರ ವಿಶ್ವಾಸ ಗಳಿಸಿ ಮಂಚಕ್ಕೆ ಕರೆದು ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್​ನಾಕ್ ಮಹಿಳೆ ಹಾಗೂ ಆಕೆಯ ಗ್ಯಾಂಗನ್ನು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಅಸಲಿಗೆ ಆ ಮಹಿಳೆ ಏನು ಮಾಡುತ್ತಿದ್ದಳು, ಆಮೇಲೆ ನಡೆದಿದ್ದೇನು? ಇಲ್ಲಿದೆ ವಿವರ.

ಮಿಸ್ಡ್ ಕಾಲ್ ಕೊಟ್ಟು ಹುಡುಗರನ್ನು ಪಟಾಯಿಸುತ್ತಾಳೆ, ಆಮೇಲೆ ನಡೆಯೋದೇ ಬೇರೆ! ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 15, 2024 | 9:45 AM

Share

ಬೆಂಗಳೂರು, ಆಗಸ್ಟ್ 15: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಜ್ಮಾ ಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳಾಗಿದ್ದಾರೆ.

ನಜ್ಮಾ ಕೌಸರ್ ಯುವಕರನ್ನು ಗುರಿಯಾಗಿಸಿ ಮಿಸ್ಡ್ ಕಾಲ್ ಕೊಡುತ್ತಿದ್ದಳು. ಬೆಂಗಳೂರಿನ ಯುವಕರನ್ನೇ ಗುರಿಯಾಗಿಸುತ್ತಿದ್ದಳು. ನಂತರ ಅವರು ಕರೆ ಮಾಡಿದಾಗ ಪರಿಚಯ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದಳು. ಇವಳ ಕೃತ್ಯದಲ್ಲಿ ಮಹಮ್ಮದ್ ಆಶೀಕ್, ಖಲೀಲ್ ಕೂಡ ಶಾಮೀಲಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಚಯವಾದ ಯುವಕರು ಬೆಂಗಳೂರಿನವರು ಎಂದು ಗೊತ್ತಾಗುತ್ತಿದ್ದಂತೆ ಬಹಳ ಸಲಗೆಯಿಂದ ಮಾತನಾಡುತ್ತಿದ್ದ ನಜ್ಮಾ, ಮೊದಮೊದಲಿಗೆ ಕಷ್ಟ ಸುಖ ಮಾತನಾಡಿಕೊಂಡು ಸಣ್ಣ ಮೊತ್ತದ ಹಣ ಪಡೆಯುತ್ತಿದ್ದಳು. ನಂತರ ಅದನ್ನು ಹಿಂತಿರುಗಿಸುತ್ತಿದ್ದಳು. ಒಂದು ಬಾರಿ ಯುವಕರ ವಿಶ್ವಾಸ ಗಳಿಸಿದ ನಂತರ ಅವರನ್ನು ಖೆಡ್ಡಾಕ್ಕೆ ಕೆಡವಲು ಪ್ಲಾನ್ ಸಿದ್ಧವಾಗುತ್ತಿತ್ತು.

‘ಯಾರೂ ಇಲ್ಲ ಮನೆಗೆ ಬಾ’

ಪರಿಚಯವಾದ ಯುವಕರನ್ನು ಲೈಂಗಿಕವಾಗಿ ಪ್ರಚೋದನೆಯಾಗುವಂತೆ ಮಾತನಾಡಿ ಬಲೆಗೆ ಬೀಳಿಸುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲ ಬಾ, ಮನೆಯಲ್ಲೇ ಏಕಾಂತದಲ್ಲಿ ಕಾಲ ಕಳೆಯೋಣ ಎಂದು ಬಲೆ ಬೀಸುತ್ತಿದ್ದಳು. ನಂಬಿ ಬಂದ ಯುವಕರನ್ನು ಸೀದಾ ಮನೆಯ ಬೆಡ್ ರೂಂಗೆ ಕರೆದೊಯ್ಯುತ್ತಿದ್ದಳು.

ಬೆಡ್​ರೂಂಗೆ ಹೋದ ಯುವಕರಿಗೆ ಕಾದಿತ್ತು ಶಾಕ್

ನಜ್ಮಾ ಕೋರಿಕೆಯಂತೆ ಬೆಡ್​ ರೂಂಗೆ ಯುವಕರು ತೆರಳುತ್ತಿದ್ದಂತೆಯೇ ಆಕೆಯ ಗ್ಯಾಂಗ್ ಎಂಟ್ರಿಯಾಗುತ್ತಿತ್ತು. ‘ಯಾರೋ ನೀನು? ಏಕೆ ಬಂದಿದ್ದೀಯಾ? ರೇಪ್ ಮಾಡಲು ಬಂದಿದ್ದಿಯಾ?’ ಎಂದು ಅವಾಜ್ ಹಾಕ್ತಿದ್ದ ಗ್ಯಾಂಗ್ ಹಣ ಕೊಡುವಂತೆ ಪೀಡಿಸುತ್ತು. ಹಣ ಕೊಡದಿದ್ದರೆ ರೇಪ್ ಕೇಸ್ ಹಾಕಿಸುತ್ತೇವೆಂದು ಧಮ್ಕಿ ಹಾಕಿ ವಸೂಲಿ ಮಾಡುತ್ತಿದ್ದರು.

ಸಿಕ್ಕಿಬಿದ್ದಿದ್ದು ಹೇಗೆ?

ಕಳೆದ ವಾರ ಕೊರಿಯರ್ ಬಾಯ್ ಯುವಕನೊಬ್ಬನಿಗೆ ಗ್ಯಾಂಗ್ ಹನಿಟ್ರ್ಯಾಪ್ ಮಾಡಿತ್ತು. ಸಂತ್ರಸ್ತ ಯುವಕ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ಕೊಟ್ಟಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರತಿ ದಿನ ರಸ್ತೆಗಿಳಿಯುತ್ತಿವೆ 2000 ಹೊಸ ವಾಹನ! ವಾಯು ಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಆತ ನೀಡಿದ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ನಜ್ಮಾ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಬಲೆಗೆ ಬೀಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!