AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಹೋರಾಟಗಾರರ ಆಕ್ರೋಶ

ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗಾಗಿ ಬಿಎಂಆರ್​ಸಿಎಲ್ ಬರೋಬ್ಬರಿ 11000 ಮರಗಳನ್ನು ಕಡಿಯಲು ಸಿದ್ಧತೆ ಮಾಡಿಕೊಂಡಿದೆ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು ಮಾತ್ರ, ಅಷ್ಟೊಂದು ಮರಗಳನ್ನು ಕಡಿಯುವುದಿಲ್ಲ. ಅವುಗಳ ಪೈಕಿ ಸಾಕಷ್ಟು ಮರಗಳನ್ನು ಸ್ಥಳಾಂತರ ಮಾಡುತ್ತೇವೆ ಎಂದಿದ್ದಾರೆ.

ಸಾವಿರಾರು ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಹೋರಾಟಗಾರರ ಆಕ್ರೋಶ
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Dec 13, 2024 | 9:00 AM

Share

ಬೆಂಗಳೂರು, ಡಿಸೆಂಬರ್ 13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ನೂರಾರು ಮರಗಳ ಮಾರಣಹೋಮ ಮಾಡಲಾಗಿದೆ. ಇದರಿಂದ ಈ ವರ್ಷ ಬೆಂಗಳೂರಿನಲ್ಲಿ ಜನರು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗುವಂತಾಗಿತ್ತು. ಇದೀಗ ಮತ್ತೆ ನಗರದಲ್ಲಿರುವ ಸಾವಿರಾರು ಮರಗಳನ್ನು ಕಡಿಯಲು ಸಿದ್ಧತೆ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಬರೋಬ್ಬರಿ 11,137 ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ತಿರ್ಮಾನ ಮಾಡಲಾಗಿದೆ. 1ನೇ ಕಾರಿಡಾರ್​​ ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿಲೋ ಮೀಟರ್​ ಮಾರ್ಗದಲ್ಲಿ 21 ನಿಲ್ದಾಣಗಳಿರಲಿವೆ. 2ನೇ ಕಾರಿಡಾರ್​​ ಹೊಸಹಳ್ಳಿಯಿಂದ ಕಡಬಗೆರೆಯ ವರೆಗೆ 12.50 ಕಿಲೋ ಮೀಟರ್ ಇದ್ದು, 9 ನಿಲ್ದಾಣಗಳು ಇರಲಿವೆ. ಒಟ್ಟು 44.65 ಕಿ.ಮೀ ಉದ್ದವಿರುವ ಎರಡು ಮೆಟ್ರೋ ಮಾರ್ಗ ಇರಲಿವೆ. 15,611 ಕೋಟಿ ರೂ. ವೆಚ್ಚದಲ್ಲಿ ಎರಡು ಮಾರ್ಗದ ಕಾಮಗಾರಿ ನಡೆಯಲಿದೆ.

ಬಿಎಂಆರ್​ಸಿಎಲ್ ಹೇಳುವುದೇನು?

ಅಷ್ಟೊಂದು ಮರಗಳನ್ನು ಕಡಿಯುವುದಿಲ್ಲ. 11,137 ಮರಗಳು ಮೂರನೇ ಹಂತದ ಕಾಮಗಾರಿ ಜಾಗದಲ್ಲಿ ಬರುತ್ತವೆ ಎಂಬುದಷ್ಟೇ ಮಾಹಿತಿ. ಅದರ ಅರ್ಥ ಅವುಗಳನ್ನೆಲ್ಲ ಕಡಿಯುತ್ತೇವೆ ಎಂದಲ್ಲ. ಲೆಕ್ಕ ಹಾಕಲಾಗಿರುವುದರಲ್ಲಿ ಸಣ್ಣದಾದ ಗಿಡದಿಂದ ಹಿಡಿದು ದೊಡ್ಡ ಮರದವರೆಗೆ ಲೆಕ್ಕ ಹಾಕಲಾಗಿರುತ್ತದೆ ಎಂದು ಬಿಎಂಆರ್​ಸಿಎಲ್ ಹಿರಿಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಸ್ಪಷ್ಟನೆ ನೀಡಿದ್ದಾರೆ.

ಮತ್ತೊಂದೆಡೆ, ಈ ಎರಡು ಮಾರ್ಗಗಳಲ್ಲೂ ಮರಗಳನ್ನು ಕಡಿಯಲು ಈಗಾಗಲೇ ಬಿಎಂಆರ್​ಸಿಎಲ್ ಸಿದ್ಧತೆ ಮಾಡಿಕೊಂಡಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಮರಗಳನ್ನು ಕಡಿಯುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು. ಏಕಾಏಕಿ ಮರಗಳನ್ನು ಕಡಿಯಲು ಮುಂದಾಗಬಾರದು. ಮರಗಳನ್ನು ಸ್ಥಳಾಂತರಿಸಲು ಮುಂದಾಗಬೇಕು. ಮೆಟ್ರೋಕ್ಕಾಗಿ ಕಡಿಯುವ ಮರಗಳ ಬದಲಿಗೆ ಬೇರೆಡೆ ಗಿಡಗಳನ್ನು ನೆಡಲು ಬೆಂಗಳೂರಿನಲ್ಲಿ ಜಾಗವಿಲ್ಲ ಎಂದು ಪರಿಸರ ಹೋರಾಟಗಾರ ವಿಜಯ್ ನಿಶಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸ ವರ್ಷದಿಂದ ಮೆಟ್ರೋ ಟಿಕೆಟ್ ದರ ಹೆಚ್ಚಳ ಬಹುತೇಕ ಖಚಿತ

ಒಟ್ಟಿನಲ್ಲಿ ಮೂರನೇ ಹಂತದ ನಮ್ಮ ಮೆಟ್ರೋ ಕಾಮಗಾರಿಗಾಗಿ ಬರೋಬ್ಬರಿ 11 ಸಾವಿರ ಮರಗಳನ್ನು ಕಡಿಯಲು ಮೆಟ್ರೋ ಮುಂದಾಗಿದೆ ಎಂಬುದು ಪರಿಸರ ಹೋರಾಟಗಾರರ ಆರೋಪ, ಆಕ್ರೋಶ. ಆದರೆ ನಮ್ಮ ಮೆಟ್ರೋ ಮಾತ್ರ, ಅಷ್ಟು ಮರಗಳನ್ನು ಕಡಿಯುವುದಿಲ್ಲ ಎನ್ನುತ್ತಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್