AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಹೋರಾಟಗಾರರ ಆಕ್ರೋಶ

ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗಾಗಿ ಬಿಎಂಆರ್​ಸಿಎಲ್ ಬರೋಬ್ಬರಿ 11000 ಮರಗಳನ್ನು ಕಡಿಯಲು ಸಿದ್ಧತೆ ಮಾಡಿಕೊಂಡಿದೆ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು ಮಾತ್ರ, ಅಷ್ಟೊಂದು ಮರಗಳನ್ನು ಕಡಿಯುವುದಿಲ್ಲ. ಅವುಗಳ ಪೈಕಿ ಸಾಕಷ್ಟು ಮರಗಳನ್ನು ಸ್ಥಳಾಂತರ ಮಾಡುತ್ತೇವೆ ಎಂದಿದ್ದಾರೆ.

ಸಾವಿರಾರು ಮರಗಳ ಮಾರಣ ಹೋಮ ಆರೋಪ: ನಮ್ಮ ಮೆಟ್ರೋ ವಿರುದ್ಧ ಪರಿಸರ ಹೋರಾಟಗಾರರ ಆಕ್ರೋಶ
ನಮ್ಮ ಮೆಟ್ರೋ
Kiran Surya
| Updated By: Ganapathi Sharma|

Updated on: Dec 13, 2024 | 9:00 AM

Share

ಬೆಂಗಳೂರು, ಡಿಸೆಂಬರ್ 13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ನೂರಾರು ಮರಗಳ ಮಾರಣಹೋಮ ಮಾಡಲಾಗಿದೆ. ಇದರಿಂದ ಈ ವರ್ಷ ಬೆಂಗಳೂರಿನಲ್ಲಿ ಜನರು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗುವಂತಾಗಿತ್ತು. ಇದೀಗ ಮತ್ತೆ ನಗರದಲ್ಲಿರುವ ಸಾವಿರಾರು ಮರಗಳನ್ನು ಕಡಿಯಲು ಸಿದ್ಧತೆ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಬರೋಬ್ಬರಿ 11,137 ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ತಿರ್ಮಾನ ಮಾಡಲಾಗಿದೆ. 1ನೇ ಕಾರಿಡಾರ್​​ ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿಲೋ ಮೀಟರ್​ ಮಾರ್ಗದಲ್ಲಿ 21 ನಿಲ್ದಾಣಗಳಿರಲಿವೆ. 2ನೇ ಕಾರಿಡಾರ್​​ ಹೊಸಹಳ್ಳಿಯಿಂದ ಕಡಬಗೆರೆಯ ವರೆಗೆ 12.50 ಕಿಲೋ ಮೀಟರ್ ಇದ್ದು, 9 ನಿಲ್ದಾಣಗಳು ಇರಲಿವೆ. ಒಟ್ಟು 44.65 ಕಿ.ಮೀ ಉದ್ದವಿರುವ ಎರಡು ಮೆಟ್ರೋ ಮಾರ್ಗ ಇರಲಿವೆ. 15,611 ಕೋಟಿ ರೂ. ವೆಚ್ಚದಲ್ಲಿ ಎರಡು ಮಾರ್ಗದ ಕಾಮಗಾರಿ ನಡೆಯಲಿದೆ.

ಬಿಎಂಆರ್​ಸಿಎಲ್ ಹೇಳುವುದೇನು?

ಅಷ್ಟೊಂದು ಮರಗಳನ್ನು ಕಡಿಯುವುದಿಲ್ಲ. 11,137 ಮರಗಳು ಮೂರನೇ ಹಂತದ ಕಾಮಗಾರಿ ಜಾಗದಲ್ಲಿ ಬರುತ್ತವೆ ಎಂಬುದಷ್ಟೇ ಮಾಹಿತಿ. ಅದರ ಅರ್ಥ ಅವುಗಳನ್ನೆಲ್ಲ ಕಡಿಯುತ್ತೇವೆ ಎಂದಲ್ಲ. ಲೆಕ್ಕ ಹಾಕಲಾಗಿರುವುದರಲ್ಲಿ ಸಣ್ಣದಾದ ಗಿಡದಿಂದ ಹಿಡಿದು ದೊಡ್ಡ ಮರದವರೆಗೆ ಲೆಕ್ಕ ಹಾಕಲಾಗಿರುತ್ತದೆ ಎಂದು ಬಿಎಂಆರ್​ಸಿಎಲ್ ಹಿರಿಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಸ್ಪಷ್ಟನೆ ನೀಡಿದ್ದಾರೆ.

ಮತ್ತೊಂದೆಡೆ, ಈ ಎರಡು ಮಾರ್ಗಗಳಲ್ಲೂ ಮರಗಳನ್ನು ಕಡಿಯಲು ಈಗಾಗಲೇ ಬಿಎಂಆರ್​ಸಿಎಲ್ ಸಿದ್ಧತೆ ಮಾಡಿಕೊಂಡಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಮರಗಳನ್ನು ಕಡಿಯುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು. ಏಕಾಏಕಿ ಮರಗಳನ್ನು ಕಡಿಯಲು ಮುಂದಾಗಬಾರದು. ಮರಗಳನ್ನು ಸ್ಥಳಾಂತರಿಸಲು ಮುಂದಾಗಬೇಕು. ಮೆಟ್ರೋಕ್ಕಾಗಿ ಕಡಿಯುವ ಮರಗಳ ಬದಲಿಗೆ ಬೇರೆಡೆ ಗಿಡಗಳನ್ನು ನೆಡಲು ಬೆಂಗಳೂರಿನಲ್ಲಿ ಜಾಗವಿಲ್ಲ ಎಂದು ಪರಿಸರ ಹೋರಾಟಗಾರ ವಿಜಯ್ ನಿಶಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸ ವರ್ಷದಿಂದ ಮೆಟ್ರೋ ಟಿಕೆಟ್ ದರ ಹೆಚ್ಚಳ ಬಹುತೇಕ ಖಚಿತ

ಒಟ್ಟಿನಲ್ಲಿ ಮೂರನೇ ಹಂತದ ನಮ್ಮ ಮೆಟ್ರೋ ಕಾಮಗಾರಿಗಾಗಿ ಬರೋಬ್ಬರಿ 11 ಸಾವಿರ ಮರಗಳನ್ನು ಕಡಿಯಲು ಮೆಟ್ರೋ ಮುಂದಾಗಿದೆ ಎಂಬುದು ಪರಿಸರ ಹೋರಾಟಗಾರರ ಆರೋಪ, ಆಕ್ರೋಶ. ಆದರೆ ನಮ್ಮ ಮೆಟ್ರೋ ಮಾತ್ರ, ಅಷ್ಟು ಮರಗಳನ್ನು ಕಡಿಯುವುದಿಲ್ಲ ಎನ್ನುತ್ತಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ