AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1.5 ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್‌ಫೈರ್ ಕಾರು ಖರೀದಿಸಲು ಎತ್ತಿನ ಗಾಡಿಯಲ್ಲಿ ಬಂದ ಬೆಂಗಳೂರಿನ ರೈತ

ಬೆಂಗಳೂರಿನ ರೈತ ಎಸ್‌ಎಸ್‌ಆರ್ ಸಂಜು ಎತ್ತಿನ ಗಾಡಿಯಲ್ಲಿ ಬಂದು ಐಷಾರಾಮಿ ಟೊಯೋಟಾ ವೆಲ್‌ಫೈರ್ ಕಾರು ಖರೀದಿಸಿ ವೈರಲ್ ಆಗಿದ್ದಾರೆ. ರೈತರೂ ಐಷಾರಾಮಿ ಕಾರು ಖರೀದಿಸಬಹುದು ಹಾಗೂ ತಮ್ಮ ಖರೀದಿಯನ್ನು ಅವಿಸ್ಮರಣೀಯವಾಗಿಸಬೇಕು ಎಂಬ ಸಂದೇಶ ನೀಡಲು ಈ ವಿಭಿನ್ನ ಶೈಲಿ ಅನುಸರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ

1.5 ಕೋಟಿ ರೂಪಾಯಿ ಮೌಲ್ಯದ ಟೊಯೋಟಾ ವೆಲ್‌ಫೈರ್ ಕಾರು ಖರೀದಿಸಲು ಎತ್ತಿನ ಗಾಡಿಯಲ್ಲಿ ಬಂದ ಬೆಂಗಳೂರಿನ ರೈತ
ವೈರಲ್​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Oct 13, 2025 | 4:38 PM

Share

ಬೆಂಗಳೂರ, ಅ.13:ಬೆಂಗಳೂರಿನ ರೈತರೊಬ್ಬರು (bangalore farmer) ಎತ್ತಿನ ಗಾಡಿಯಲ್ಲಿ ಬಂದು ಐಷಾರಾಮಿ ಕಾರು ಖರೀದಿಸಿ, ಅಚ್ಚರಿಗೊಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಎತ್ತಿನ ಗಾಡಿಯಲ್ಲಿ ಬೆಂಗಳೂರಿನ ಸಿಟಿಯನ್ನು ಸುತ್ತಿದ್ದು, ಎಲ್ಲರ ಗಮನ ಸೆಳೆದಿದೆ. ಎಸ್‌ಎಸ್‌ಆರ್ ಸಂಜು ಎಂಬ ರೈತ ಎತ್ತಿನ ಗಾಡಿಯಲ್ಲಿ ಬಂದು ಟೊಯೋಟಾ ವೆಲ್‌ಫೈರ್ ಕಾರನ್ನು ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಎಸ್‌ಎಸ್‌ಆರ್ ಸಂಜು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದ್ದು, ಈಗಾಗಲೇ ಸಂಜು ಅವರಲ್ಲಿ ಹೊಸ ಹೊಸ ಕಾರಿನ ಸಂಗ್ರಹಗಳು ಇದೆ ಎಂದು ಹೇಳಲಾಗಿದೆ. ತಾನು ಕಾರು ಖರೀದಿ ಮಾಡುವುದು ಒಂದು ಅವಿಸ್ಮರಣಿವಾಗಿರಬೇಕು. ಹಾಗೂ ರೈತರಿಗೂ ಕಾರು ಖರೀದಿ ಮಾಡಲು ಗೊತ್ತು, ಎತ್ತಿನ ಗಾಡಿ ಓಡಿಸಲು ಗೊತ್ತು ಎಂಬ ಸಂದೇಶ ತಿಳಿಸಲು ಸಂಜು ಅವರು ವಿಭಿನ್ನ ರೀತಿಯಲ್ಲಿ ಕಾರು ಖರೀದಿ ಮಾಡಲು ಬಂದಿದ್ದಾರೆ.

ಯೂಟ್ಯೂಬ್ ವೀಡಿಯೊವೊಂದರಲ್ಲಿ ರೈತ ಐಷಾರಾಮಿ ಕಾರು ಖರೀದಿಸುತ್ತಿದ್ದಾರೆ ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸಂಜು ಅವರು ಈ ವಿಡಿಯೋದಲ್ಲಿ ತಮ್ಮ ಹುಡುಗರ ಜತೆ ಬಂದು ಕಾರು ಖರೀದಿ ಮಾಡುವುದನ್ನು ಕಾಣಬಹುದು. ಎತ್ತಿನ ಗಾಡಿಯನ್ನು ಹಿಂಬಾಲಿಸಿಕೊಂಡು ಸಾಲು ಸಾಲು ಐಷರಾಮಿ ಕಾರುಗಳಾದ ಹಳದಿ ಪೋರ್ಷೆ ಪನಾಮೆರಾ, ಫೋರ್ಡ್ ಮಸ್ಟಾಂಗ್, ಮಾಸೆರಾಟಿ ಲೆವಾಂಟೆ, ಟೊಯೋಟಾ ಇನ್ನೋವಾ ಹೈಕ್ರಾಸ್ ಮತ್ತು ಟೊಯೋಟಾ ಫಾರ್ಚೂನರ್ ಬರುವುದನ್ನು ಕಾಣಬಹುದು. ಜತೆಗೆ ಈ ರೈತನಿಗೆ ರಕ್ಷಣಾ ಸಿಬ್ಬಂದಿಗಳು ಕೂಡ ಇದ್ದಾರೆ. ಈ ವಿಡಿಯೋದಲ್ಲಿ ಅವರು ಕಚೇರಿಯೊಂದರಲ್ಲಿ ಕೂತು ತನ್ನ ಹುಡುಗರಿಗೆ ಕೆಲವೊಂದು ಸೂಚನೆಯನ್ನು ನೀಡುವುದನ್ನು ಕೂಡ ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ‘ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 1 ಗಂಟೆ 45 ನಿಮಿಷ’, ಇದು ಬೆಂಗಳೂರು ಟ್ರಾಫಿಕ್ ಕಥೆ ಎಂದ ​ಮೋಹನ್‌ದಾಸ್ ಪೈ

ನಂತರ ಅಲ್ಲಿಂದ ಕುರ್ತಾ ಮತ್ತು ಧೋತಿಯನ್ನು ಧರಿಸಿ, ದಪ್ಪ ಚಿನ್ನದ ಸರವನ್ನು ಹಾಕಿಕೊಂಡು ಎತ್ತಿನಗಾಡಿಯಲ್ಲಿ ಹೋಗುವುದನ್ನು ಕಾಣಬಹುದು. ಅಲ್ಲಿಂದ ನೇರವಾಗಿ ಸಂಜು ಅವರು ಟೊಯೋಟಾ ಡೀಲರ್‌ಶಿಪ್‌ ಶೋ ರೂಮ್​​​ಗೆ ಬರುತ್ತಾರೆ. ಇವರು ಎತ್ತಿನ ಗಾಡಿಯಲ್ಲಿ ಬರುವುದನ್ನು ಕಂಡು ಬಿದಿಯಲ್ಲಿ ನಿಂತ ಜನ ಅಚ್ಚರಿಯಿಂದ ನೋಡುವದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸಂಜು ಟೊಯೋಟಾ ಡೀಲರ್‌ಶಿಪ್‌ ಮ್ಯಾನೇಜರ್​ ಜತೆಗೆ ಮಾತನಾಡುತ್ತಾ ಶೋ ರೂಮ್​ ಒಳಗಡೆ ಹೋಗುತ್ತಾರೆ. ಅಲ್ಲಿಂದ ಕಾರು ಖರೀದಿಗೆ ಬೇಕಾದ ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿ ಕಾರು ಖರೀದಿ ಮಾಡುತ್ತಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್