AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಫೀವರ್ ಜೊತೆಗೆ ಮಕ್ಕಳನ್ನು ಕಾಡುತ್ತಿದೆ ಕಾಲು ಬಾಯಿ ರೋಗ!

ಬೆಂಗಳೂರಿನಲ್ಲಿ ಕೈ-ಬಾಯಿ-ಕಾಲು ರೋಗದ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಈ ರೋಗವು ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಬೇಗನೆ ಹರಡುತ್ತದೆ. ಕೈ, ಕಾಲು ಮತ್ತು ಬಾಯಿಯ ಸುತ್ತ ಕೆಂಪು ಗುಳ್ಳೆಗಳು ರೋಗದ ಪ್ರಮುಖ ಲಕ್ಷಣ. ವೈದ್ಯರ ಸಲಹೆಯಂತೆ, ಈ ಲಕ್ಷಣಗಳು ಕಂಡುಬಂದರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ವೈದ್ಯರು ಸಲಹೆ ನೀಡಿದ್ದಾರೆ. ಚಳಿಗಾಲದಲ್ಲಿ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಎಚ್ಚರಿಕೆ ಅಗತ್ಯ.

ವೈರಲ್ ಫೀವರ್ ಜೊತೆಗೆ ಮಕ್ಕಳನ್ನು ಕಾಡುತ್ತಿದೆ ಕಾಲು ಬಾಯಿ ರೋಗ!
ಕಾಲು ಬಾಯಿ ರೋಗ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on: Dec 22, 2024 | 12:02 PM

Share

ಬೆಂಗಳೂರು, ಡಿಸೆಂಬರ್​ 22: ಹವಾಮಾನ ಬದಲಾವಣೆಯಿಂದ ವೈರಲ್ ಫೀವರ್​​ ಜೊತೆಗೆ ಮಕ್ಕಳನ್ನು ಕಾಲು ಬಾಯಿ ರೋಗ (Foot and mouth disease) ಕಾಡುತ್ತಿದೆ. ನಗರದ ಹಲವು ಅಪಾರ್ಟ್​ಮೆಂಟ್ ಹಾಗೂ ಶಾಲೆಗಳಲ್ಲಿ ಕೈ ಬಾಯಿ ಕಾಲು ರೋಗ ಹರಡುತ್ತಿದೆ. ಇದರಿಂದ ಪೋಷಕರು ಆತಂಕಗೊಂಡಿದ್ದಾರೆ.

ಚಳಿಗಾಲದ ಸಮಯದಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ ಸದ್ಯ ರಾಜ್ಯದಲ್ಲಿಯೂ ಕೈ ಬಾಯಿ ಕಾಲು ರೋಗ ಪ್ರಕರಣಗಳು ಅತಿ ಹೆಚ್ಚು ಪತ್ತೆಯಾಗುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. 15 ವರ್ಷ ವಯಸ್ಸಕ್ಕಿಂತ ಕಡಿಮೆ ವಯಸ್ಸಿನ ಶಾಲಾ ಮಕ್ಕಳಲ್ಲಿ ಹೆಚ್ಚಾಗಿ ಇದು ಕಂಡು ಬರುತ್ತಿದ್ದು ಮಕ್ಕಳ ತುಟಿ, ಕಾಲು, ಕೈ ಸುತ್ತ ಕೆಂಪು ಗುಳ್ಳೆಗಳು ಕಂಡು ಬರುತ್ತಿವೆ. ಕೆಂಪು ಗುಳ್ಳೆಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಕಾಣಿ. ಗುಳ್ಳೆಗಳು ಕಂಡು ಬಂದಲ್ಲಿ, ಪೋಷಕರು ಮಕ್ಕಳನ್ನು ಒಂದು ವಾರಗಳ ಕಾಲ ಶಾಲೆಗೆ ಕಳುಹಿಸ ಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಗೊರಕೆಯಿಂದ ನಿದ್ರೆ ಬರುತ್ತಿಲ್ಲವೇ? ಈ ಸಿಂಪಲ್​ ಸಲಹೆ ಅನುಸರಿಸಿ

ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ರೋಗವು ಎಂಜಿಲು, ಉಸಿರು, ಸ್ಪರ್ಶದ ಮೂಲಕ ಇದು ಬೇಗ ಮಕ್ಕಳಿಗೆ ಹರಡುತ್ತಿದ್ದು ಸೂಕ್ತ ಎಚ್ಚರಿಕೆ ವಹಿಸುವಂತೆ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರಿಗೆ ವಾಣಿ ವಿಲಾಸ್ ಆಸ್ಪತ್ರೆ ಮಕ್ಕಳ ತಜ್ಞ ಡಾ. ಶಿವಪ್ರಕಾಶ್ ಸೂಚನೆ ನೀಡಿದ್ದಾರೆ. ರೋಗದ ಲಕ್ಷಣಗಳು

ಮಗುವಿನ ಬಾಯಿ ಸುತ್ತ ಕೆಂಪು ಗುಳ್ಳೆ , ಅದೇ ರೀತಿ ಕೈ ಕಾಲುಗಳಲ್ಲಿ ತುರಿಕೆ ತರಿಸುವ ಗುಳ್ಳೆಗಳು ರೋಗದ ಪ್ರಮುಖ ಲಕ್ಷಣವಾಗಿದೆ. ರೋಗ ಕಾಣಿಸಿಕೊಂಡ ಮಗುವಿನಿಂದ ಬಹುಬೇಗ ಮತ್ತೊಂದು ಮಗುವಿಗೆ ರೋಗ ಹರಡುವ ಸಾಧ್ಯತೆ ಇದೆ.

ಚಳಿಗಾಲ ಆಗಿರುವುದರಿಂದ ಮಕ್ಕಳು ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹೀಗಾಗಿ ವೈದ್ಯರು ಚಳಿಗಾಲ ಮುಗಿಯುವವರೆಗೂ ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಸೂರತ್‌ನಲ್ಲಿ ಗೋಮಯ ರಾಖಿಗಳ ಮೂಲಕ ಪರಿಸರ ಸ್ನೇಹಿ ರಕ್ಷಾಬಂಧನ ಆಚರಣೆ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ