AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಬೆಂಗಳೂರು ಜನರಿಗೆ ಡಬಲ್ ಶಾಕ್: ಹಾಲು, ಕರೆಂಟ್ ದರ ಏರಿಕೆ ಜೊತೆಗೆ ಕಸಕ್ಕೂ ಕಟ್ಟಬೇಕು ಟ್ಯಾಕ್ಸ್

Bangalore BBMP Garbage Tax: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಬೆಂಗಳೂರು ಜನತೆಗೆ ಏಪ್ರಿಲ್ ಒಂದರಿಂದ ಮತ್ತೊಂದು ಆಘಾತ ಎದುರಾಗಿದೆ. ಈಗಾಗಲೇ ಘೋಷಣೆಯಾಗಿರುವಂತೆ ಹಾಲು, ವಿದ್ಯುತ್ ದರ ಏರಿಕೆ ಏಪ್ರಿಲ್ ಒಂದರಿಂದ ಜಾರಿಗೆ ಬರಲಿದೆ. ಅದರ ಜತೆ ಜತೆಗೇ ಬಿಸಾಡುವ ಕಸಕ್ಕೂ ತೆರಿಗೆ ಪಾವತಿಸಬೇಕಾಗಲಿದೆ. ಬಿಬಿಎಂಪಿ ಕಸ ತೆರಿಗೆ ಮಂಗಳವಾರದಿಂದ ಜಾರಿಗೆ ಬರಲಿದೆ.

ನಾಳೆಯಿಂದ ಬೆಂಗಳೂರು ಜನರಿಗೆ ಡಬಲ್ ಶಾಕ್: ಹಾಲು, ಕರೆಂಟ್ ದರ ಏರಿಕೆ ಜೊತೆಗೆ ಕಸಕ್ಕೂ ಕಟ್ಟಬೇಕು ಟ್ಯಾಕ್ಸ್
ಸಾಂದರ್ಭಿಕ ಚಿತ್ರ
Follow us
ಶಾಂತಮೂರ್ತಿ
| Updated By: Ganapathi Sharma

Updated on: Mar 31, 2025 | 1:15 PM

ಬೆಂಗಳೂರು, ಮಾರ್ಚ್ 31: ಏಪ್ರಿಲ್ 1 ರಿಂದ ಬೆಂಗಳೂರು ನಿವಾಸಿಗಳಿಗೆ ಡಬಲ್ ಡಬಲ್ ಶಾಕ್ ಎದುರಾಗಲಿದೆ. ಹಾಲು, ವಿದ್ಯುತ್ ದರ ಏರಿಕೆ ಜಾರಿಗೆ ಬರಲಿದೆ. ಅದರೊಂದಿಗೆ, ಕಸಕ್ಕೂ ತೆರಿಗೆ (Garbage Tax) ಪಾವತಿ ಮಾಡಬೇಕಾಗಿ ಬರಲಿದೆ. ಮನೆ, ಅಂಗಡಿ ಮುಂಗಟ್ಟಿನ ಕಸಕ್ಕೂ ತೆರಿಗೆ ಪಾವತಿ ಮಾಡಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆ (BBMP) ಸೂಚಿಸಿದೆ. ಈ ವಿಚಾರವಾಗಿ ಬಿಬಿಎಂಪಿ ಬಜೆಟ್​​​ನಲ್ಲೂ ಘೋಷಣೆ ಮಾಡಲಾಗಿದೆ. ಈ ಮೂಲಕ 600 ಕೋಟಿ ರೂಪಾಯಿ ಆದಾಯ ಸಂಗ್ರಹಕ್ಕೆ ಬಿಬಿಎಂಪಿ ಗುರಿ ಹಾಕಿಕೊಂಡಿದೆ.

ಎಷ್ಟಿರಲಿದೆ ಬಿಬಿಎಂಪಿ ಕಸ ತೆರಿಗೆ?

ಅಂಗಡಿ-ಮುಂಗಟ್ಟುಗಳಲ್ಲಿ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ತೆರಿಗೆ ವಸೂಲಿಗೆ ಪಾಲಿಕೆ ಸಜ್ಜಾಗಿದೆ. ಪ್ರತಿ ತಿಂಗಳು ಕಸ ಸಂಗ್ರಹ ಹಾಗೂ ವಿಲೇವಾರಿ ವೆಚ್ಚ ಹೆಚ್ಚಾಗುತ್ತಿದ್ದು, ಈ ಕಾರಣದಿಂದ ತೆರಿಗೆ ವಿಧಿಸಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ. ಕಟ್ಟಡದ ವಿಸ್ತೀರ್ಣದ ಆಧಾರತದ ಮೇಲೆ ಕಸದ ಶುಲ್ಕ ನಿಗದಿಪಡಿಸಲಾಗುತ್ತದೆ. ಆಸ್ತಿ ತೆರಿಗೆ ಜೊತೆಯೇ ಕಸ ತೆರಿಗೆಯನ್ನೂ ಪಾಲಿಕೆ ಸಂಗ್ರಹ ಮಾಡಲಿದೆ.

ಕಸ ತೆರಿಗೆ: ಕಟ್ಟಡಗಳ ಗಾತ್ರದ ಮೇಲೆ ನಿರ್ಧಾರ

ಕಟ್ಟಡದ ವಿಸ್ತೀರ್ಣದ ಮೇಲೆ ತೆರಿಗೆ ನಿಗದಿಪಡಿಸಲಾಗುತ್ತದೆ. ಬಿಬಿಎಂಪಿ ಮೂಲಗಳ ಪ್ರಕಾರ, 600 ಚದರ ಅಡಿವರೆಗಿನ ಕಟ್ಟಡಗಳಿಗೆ ತಿಂಗಳಿಗೆ 10 ರೂ. ತೆರಿಗೆ ವಿಧಿಸಿಲಾಗುತ್ತದೆ. 600 ಚದರ ಅಡಿಯಿಂದ 1000 ಚದರ ಅಡಿವರೆಗಿನ ಕಟ್ಟಡಗಳಿಗೆ ತಿಂಗಳಿಗೆ 50 ರೂ. ತೆರಿಗೆ ನಿಗದಿಪಡಿಸಲಾಗುತ್ತದೆ. ಸಾವಿರದಿಂದ 2 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 100 ರೂ, 2 ಸಾವಿರದಿಂದ 3 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 150 ರೂ, 3 ಸಾವಿರ ದಿಂದ 4 ಸಾವಿರ ಚದರ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 200 ರೂ. ಹಾಗೂ 4 ಸಾವಿರ ಚದರ ಅಡಿಗಳ ಮೇಲ್ಪಟ್ಟ ಕಟ್ಟಡಗಳಿಗೆ ತಿಂಗಳಿಗೆ 400 ರೂ. ಕಸ ತೆರಿಗೆ ವಿಧಿಸಲಾಗುತ್ತದೆ.

ಇದನ್ನೂ ಓದಿ
Image
ಇಂದು ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ
Image
ರಂಜಾನ್​ ಹಬ್ಬ: ಮಾ.31 ರಂದು ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್
Image
ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಪೊಲೀಸರ ತಲೆ ಮೇಲೆ ಸ್ಮಾರ್ಟ್​ ಹ್ಯಾಟ್​

ಇದನ್ನೂ ಓದಿ: ಬೆಂಗಳೂರು: ಮನೆ ಕಸಕ್ಕೂ ಕಟ್ಟಬೇಕು ತೆರಿಗೆ? ವಾರ್ಷಿಕ 600 ಕೋಟಿ ರೂ. ಸಂಗ್ರಹಕ್ಕೆ ಯೋಚನೆ

ಬೆಂಗಳೂರಿನಲ್ಲಿ ‘ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆ (BSWML)’ ಪ್ರತೀ ಮನೆ ಬಾಗಿಲಿಗೆ ತೆರಳಿ ತ್ಯಾಜ್ಯ ಸಂಗ್ರಹಿಸುವುದು ಮತ್ತು ವಿಲೇವಾರಿ ಮಾಡುತ್ತದೆ. ಹೀಗಾಗಿ ಈ ಶುಲ್ಕ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ತಿಳಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು