AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ರಾಜ್ಯದಲ್ಲಿ ಏರುತ್ತಿರುವ ತಾಪಮಾನಕ್ಕೆ ಬೆಂಗಳೂರು ಸೇರಿ ಜನ ತತ್ತರಿಸಿದ್ದಾರೆ. ಬಿಸಿಲ ಬೇಗೆ ತಣಿಸಲು ಮಣ್ಣಿನ ಮಡಿಕೆ ಮತ್ತು ಎಳನೀರಿಗೆ ಭಾರಿ ಬೇಡಿಕೆ ಬಂದಿದೆ. ಮಡಿಕೆಗಳು 300 ರಿಂದ 1500 ರೂ. ಬೆಲೆಯಲ್ಲಿದ್ದು, ಆರೋಗ್ಯಕರ ಆಯ್ಕೆಯಾಗಿದೆ. ಎಳನೀರು ಕೂಡ ಬಿಸಿಲಿಗೆ ಉತ್ತಮ ಪರಿಹಾರ. ಜನರು ನೈಸರ್ಗಿಕ ತಂಪು ವಿಧಾನಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ, ಇದು ಬೇಸಿಗೆಯಲ್ಲಿ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ.

ಬಿಸಿಲಿನ ತಾಪಕ್ಕೆ 'ಬೆಂದಕಾಳೂರು' ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಬಿಸಿಲಿನ ತಾಪಕ್ಕೆ 'ಬೆಂದಕಾಳೂರು' ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಭಾವನಾ ಹೆಗಡೆ
|

Updated on: Mar 09, 2026 | 10:36 AM

Share

ಬೆಂಗಳೂರು, ಮಾರ್ಚ್​ 09: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದಾರೆ. ಫೆಬ್ರವರಿಯಿಂದಲೇ ಆರಂಭವಾದ ಬೇಸಿಗೆಯ ತಾಪ ಇನ್ನೂ ಕಡಿಮೆಯಾಗದೇ ಇರುವ ಹಿನ್ನೆಲೆ, ತಂಪಿಗಾಗಿ ಜನರು ಮಣ್ಣಿನ ಮಡಿಕೆ ಮತ್ತು ಎಳನೀರಿನ ಮೊರೆ ಹೋಗುತ್ತಿರುವ ದೃಶ್ಯಗಳು ಮಾರುಕಟ್ಟೆಗಳಲ್ಲಿ ಕಂಡು ಬರುತ್ತಿವೆ.

ಮಣ್ಣಿನ ಮಡಿಕೆ, ಎಳನೀರಿಗೆ ಹೆಚ್ಚಿನ ಬೇಡಿಕೆ

ಬೇಸಿಗೆ ಕಾಲ ಆರಂಭವಾದಾಗಲೇ ಬೆಂಗಳೂರಿನ ಜನರು ಮಣ್ಣಿನ ಮಡಿಕೆ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಈ ಬಾರಿ ಕೂಡ ಮಣ್ಣಿನ ಮಡಿಕೆಗಳಿಗೆ ಭಾರೀ ಬೇಡಿಕೆ ಕಂಡು ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಮಡಿಕೆ ಖರೀದಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಬಣ್ಣ ಬಣ್ಣದ ಮಡಿಕೆಗಳು, ಟ್ಯಾಪ್ ಹೊಂದಿರುವ ಮಡಿಕೆಗಳು, ಮಣ್ಣಿನ ಲೋಟಗಳು ಮತ್ತು ಆಕರ್ಷಕ ವಿನ್ಯಾಸದ ಬಾಟಲ್‌ಗಳು ಜನರನ್ನು ಸೆಳೆಯುತ್ತಿವೆ. ಮಡಿಕೆಗಳ ಬೆಲೆ 300 ರೂಪಾಯಿಯಿಂದ 1500 ರೂಪಾಯಿ ವರೆಗೆ ಮಾರಾಟವಾಗುತ್ತಿದ್ದು, ಆರೋಗ್ಯಕರವಾಗಿರುವ ಕಾರಣ ಜನರು ಹೆಚ್ಚಾಗಿ ಖರೀದಿಸುತ್ತಿದ್ದಾರೆ.

ಇನ್ನೊಂದೆಡೆ, ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಎಳನೀರಿನ ಬೇಡಿಕೆಯೂ ಹೆಚ್ಚಾಗಿದೆ. ಸಾಮಾನ್ಯವಾಗಿ 20 ರಿಂದ 30 ರೂಪಾಯಿಗೆ ಸಿಗುತ್ತಿದ್ದ ಎಳನೀರು ಈಗ 60 ರಿಂದ 70 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜನರು ಎಳನೀರು ಸೇವಿಸುವತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಒಟ್ಟಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಜನರು ತಂಪು ನೀಡುವ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದು, ಮಣ್ಣಿನ ಮಡಿಕೆ ಮತ್ತು ಎಳನೀರಿನ ಮಾರಾಟದಲ್ಲಿ ಏರಿಕೆ ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಜನರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ.

ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ