AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 3,154 ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ 20ರಷ್ಟು ಹೆಚ್ಚಳವಾಗಿದೆ. ಊಟ, ದೋಸೆ ಹಾಗೂ ಕಾಫಿ-ಟೀ ಬೆಲೆಗಳಲ್ಲಿ 5 ರಿಂದ 20 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದ್ದು, ಅನಿವಾರ್ಯವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ
ಸಾಂದರ್ಭಿಕ ಚಿತ್ರImage Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on: May 05, 2026 | 7:44 AM

Share

ಬೆಂಗಳೂರು, ಮೇ 5: ಬೆಂಗಳೂರಿನ (Bengauru) ಹೋಟೆಲ್ ಊಟ-ತಿಂಡಿ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಹೋಟೆಲ್ ಆಹಾರ ಪದಾರ್ಥಗಳ ಮೇಲೆ ಬೀರಿದೆ.

ಬೆಂಗಳೂರಿನಲ್ಲಿ ಸಿಲಿಂಡರ್ ದರ ಎಷ್ಟಿದೆ?

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ಸಿಲಿಂಡರ್ ದರ ಈಗ 3,154 ರೂ. ತಲುಪಿದೆ. ಇಂಧನ ಬೆಲೆಯ ಈ ಬೃಹತ್ ಏರಿಕೆಯಿಂದ ಕಂಗಾಲಾಗಿರುವ ಹೋಟೆಲ್ ಮಾಲೀಕರು, ಅನಿವಾರ್ಯವಾಗಿ ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದ್ದಾರೆ.

ಉದಾಹರಣೆಗೆ, ಬೆಂಗಳೂರಿನ ಗಾಂಧಿನಗರದ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾದ ‘ರಸಪಾಕ’ದಲ್ಲಿ ಈಗಾಗಲೇ ದರ ಏರಿಕೆ ಜಾರಿಗೆ ಬಂದಿದೆ.

  • ಊಟ: 100 ರೂ. ನಿಂದ 120 ರೂ. ಗೆ ಏರಿಕೆ
  • ದೋಸೆ: 75 ರೂ. ನಿಂದ 85 ರೂ. ಗೆ ಏರಿಕೆ
  • ಪೂರಿ: 60 ರೂ. ನಿಂದ 75 ರೂ. ಗೆ ಏರಿಕೆ
  • ಟೀ: 20 ರೂ. ನಿಂದ 25 ರೂ. ಗೆ ಏರಿಕೆ

ಗ್ರಾಹಕರು ಮತ್ತು ಸಂಘದ ಪ್ರತಿಕ್ರಿಯೆ ಏನು?

ಕೆಲಸದ ನಿಮಿತ್ತ ಹೊರಗಡೆ ಬಂದಾಗ ಹೋಟೆಲ್ ಆಹಾರವೇ ನಮಗೆ ಆಧಾರ. ಹೀಗೆ ಪದೇ ಪದೇ ಬೆಲೆ ಏರಿಸುತ್ತಿದ್ದರೆ ಸಾಮಾನ್ಯ ಗ್ರಾಹಕರ ಜೇಬಿಗೆ ದೊಡ್ಡ ಕತ್ತರಿ ಬೀಳಲಿದೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್, ಬೆಲೆ ಏರಿಕೆ ಮಾಡುವುದು ಆಯಾ ಹೋಟೆಲ್ ಮಾಲೀಕರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಯುದ್ಧದ ಎಫೆಕ್ಟ್ ಈಗ ಬೆಂಗಳೂರಿಗರ ತಟ್ಟೆಯ ಮೇಲೆ ಪ್ರಭಾವ ಬೀರಿದೆ.

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ