AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 3,154 ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ 20ರಷ್ಟು ಹೆಚ್ಚಳವಾಗಿದೆ. ಊಟ, ದೋಸೆ ಹಾಗೂ ಕಾಫಿ-ಟೀ ಬೆಲೆಗಳಲ್ಲಿ 5 ರಿಂದ 20 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದ್ದು, ಅನಿವಾರ್ಯವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಹೋಟೆಲ್ ಊಟ-ತಿಂಡಿ ತಿನ್ನೋರಿಗೆ ಶಾಕ್! ತಿಂಡಿ-ತಿನಿಸು, ಕಾಫಿ-ಚಹಾ ದರ ಮತ್ತೆ ಏರಿಕೆ
ಸಾಂದರ್ಭಿಕ ಚಿತ್ರImage Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on: May 05, 2026 | 7:44 AM

Share

ಬೆಂಗಳೂರು, ಮೇ 5: ಬೆಂಗಳೂರಿನ (Bengauru) ಹೋಟೆಲ್ ಊಟ-ತಿಂಡಿ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ಯುದ್ಧದ ಭೀತಿ ಹಾಗೂ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದಿಂದಾಗಿ ವಾಣಿಜ್ಯ ಎಲ್‌ಪಿಜಿ (Commercial LPG) ಸಿಲಿಂಡರ್ ದರದಲ್ಲಿ ಭಾರಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ಹೋಟೆಲ್ ಆಹಾರ ಪದಾರ್ಥಗಳ ಮೇಲೆ ಬೀರಿದೆ.

ಬೆಂಗಳೂರಿನಲ್ಲಿ ಸಿಲಿಂಡರ್ ದರ ಎಷ್ಟಿದೆ?

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆಯಾಗಿದ್ದು, 19 ಕೆಜಿ ತೂಕದ ಸಿಲಿಂಡರ್ ದರ ಈಗ 3,154 ರೂ. ತಲುಪಿದೆ. ಇಂಧನ ಬೆಲೆಯ ಈ ಬೃಹತ್ ಏರಿಕೆಯಿಂದ ಕಂಗಾಲಾಗಿರುವ ಹೋಟೆಲ್ ಮಾಲೀಕರು, ಅನಿವಾರ್ಯವಾಗಿ ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದ್ದಾರೆ.

ಉದಾಹರಣೆಗೆ, ಬೆಂಗಳೂರಿನ ಗಾಂಧಿನಗರದ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾದ ‘ರಸಪಾಕ’ದಲ್ಲಿ ಈಗಾಗಲೇ ದರ ಏರಿಕೆ ಜಾರಿಗೆ ಬಂದಿದೆ.

  • ಊಟ: 100 ರೂ. ನಿಂದ 120 ರೂ. ಗೆ ಏರಿಕೆ
  • ದೋಸೆ: 75 ರೂ. ನಿಂದ 85 ರೂ. ಗೆ ಏರಿಕೆ
  • ಪೂರಿ: 60 ರೂ. ನಿಂದ 75 ರೂ. ಗೆ ಏರಿಕೆ
  • ಟೀ: 20 ರೂ. ನಿಂದ 25 ರೂ. ಗೆ ಏರಿಕೆ

ಗ್ರಾಹಕರು ಮತ್ತು ಸಂಘದ ಪ್ರತಿಕ್ರಿಯೆ ಏನು?

ಕೆಲಸದ ನಿಮಿತ್ತ ಹೊರಗಡೆ ಬಂದಾಗ ಹೋಟೆಲ್ ಆಹಾರವೇ ನಮಗೆ ಆಧಾರ. ಹೀಗೆ ಪದೇ ಪದೇ ಬೆಲೆ ಏರಿಸುತ್ತಿದ್ದರೆ ಸಾಮಾನ್ಯ ಗ್ರಾಹಕರ ಜೇಬಿಗೆ ದೊಡ್ಡ ಕತ್ತರಿ ಬೀಳಲಿದೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್, ಬೆಲೆ ಏರಿಕೆ ಮಾಡುವುದು ಆಯಾ ಹೋಟೆಲ್ ಮಾಲೀಕರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಯುದ್ಧದ ಎಫೆಕ್ಟ್ ಈಗ ಬೆಂಗಳೂರಿಗರ ತಟ್ಟೆಯ ಮೇಲೆ ಪ್ರಭಾವ ಬೀರಿದೆ.

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ