AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!

ಏರ್ ಶೋ ಮತ್ತು ಜಾಗತಿಕ ಹೂಡಿಕೆದಾರರ ಸಮಾವೇಶದಿಂದಾಗಿ ಬೆಂಗಳೂರಿಗೆ ಸಾವಿರಾರು ಜನ ಆಗಮಿಸುತ್ತಿದ್ದು, ಹೋಟೆಲ್‌ಗಳಲ್ಲಿ ಕೊಠಡಿಗಳ ಬುಕಿಂಗ್‌ಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದಾಗಿ ಹೋಟೆಲ್ ದರಗಳು ಶೇಕಡಾ 15 ರಷ್ಟು ಏರಿಕೆಯಾಗಿದ್ದು, ಕೆಲವು ಸ್ಥಳಗಳಲ್ಲಿ ವಿಮಾನ ಟಿಕೆಟ್‌ ಬೆಲೆಯನ್ನು ಮೀರಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದಂತಹ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೋಟೆಲ್‌ಗಳ ಬುಕಿಂಗ್ ಹೆಚ್ಚಾಗಿದೆ.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!
ಬೆಂಗಳೂರು ನಗರ (ಸಂಗ್ರಹ ಚಿತ್ರ)
Ganapathi Sharma
|

Updated on: Feb 08, 2025 | 9:39 AM

Share

ಬೆಂಗಳೂರು, ಫೆಬ್ರವರಿ 7: ರಕ್ಷಣಾ ಸಚಿವಾಲಯ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಮತ್ತು ರಾಜ್ಯ ಸರ್ಕಾರ ಆಯೋಜಿಸುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಗಣನೆ ಆರಂಭವಾಗಿದೆ. ಈ ಎರಡು ಕಾರ್ಯಕ್ರಮಗಳ ಕಾರಣ ಬೆಂಗಳೂರಿಗೆ ಬೇರೆ ರಾಜ್ಯಗಳ, ವಿದೇಶಗಳ ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಪರಿಣಾಮವಾಗಿ ನಗರದಾದ್ಯಂತ ಹೋಟೆಲ್ ಬುಕಿಂಗ್‌ಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದ ಅನಂತಪುರದಂತಹ ಬೆಂಗಳೂರಿಗೆ ಸಮೀಪದ ಪ್ರದೇಶಗಳಲ್ಲಿಯೂ ಹೋಟೆಲ್, ಲಾಡ್ಜ್ ಕಾಯ್ದಿರಿಸಲಾಗುತ್ತಿದೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ, ಹೋಟೆಲ್ ರೂಮ್​ಗಳ ದರ ಬೆಂಗಳೂರು-ಚೆನ್ನೈ ವಿಮಾನ ಟಿಕೆಟ್ ಬೆಲೆಯನ್ನೂ ಮೀರಿದೆ! ಇದು ಕೆಲವು ಅತಿಥಿಗಳು ನಗರಗಳ ನಡುವೆ ವಿಮಾನ ಪ್ರಯಾಣವನ್ನೇ ಉತ್ತಮ ಆಯ್ಕೆಯಾಗಿ ಪರಿಗಣಿಸಲು ಪ್ರೇರೇಪಿಸಿದೆ ಎಂದು ಮೂಲಗಳು ತಿಳಿಸಿವೆ.

ಶೇ 15 ರಷ್ಟು ಹೆಚ್ಚಾದ ಹೋಟೆಲ್, ಲಾಡ್ಜ್ ಕೊಠಡಿ ದರ

ಬೆಂಗಳೂರಿನಲ್ಲಿ ಹೋಟೆಲ್ ರೂಂ ದರಗಳು ಗಣನೀಯ ಮಟ್ಟದಲ್ಲಿ ಏರಿಕೆ ಕಂಡಿವೆ. ಅನೇಕ ಹೋಟೆಲ್​​, ಲಾಡ್ಜ್​ಗಳ ರೂಂ ಈಗಾಗಲೇ ಸಂಪೂರ್ಣವಾಗಿ ಕಾಯ್ದಿರಿಸಲಾಗಿವೆ. ಹೆಚ್ಚಾದ ಬೇಡಿಕೆಯನ್ನು ಬಂಡವಾಳ ಮಾಡಿಕೊಂಡು, ಹೋಟೆಲ್ ಮಾಲೀಕರು ಕೊಠಡಿ ಬೆಲೆಗಳನ್ನು ಗಮನಾರ್ಹವಾಗಿ ಹೆಚ್ಚಿಸಿದ್ದಾರೆ. ಕೆಲವು ಹೋಟೆಲ್‌ಗಳು ತಮ್ಮ ಸಾಮಾನ್ಯ ಬೆಲೆಗಳಿಗಿಂತ ಶೇಕಡಾ 15 ರಷ್ಟು ದರಗಳನ್ನು ಹೆಚ್ಚಿಸಿವೆ.

ಬೆಂಗಳೂರಿನಲ್ಲಿ ಈಗ ಎಷ್ಟಿದೆ ಹೋಟೆಲ್​ ರೂಂ ದರ?

ಸ್ಟಾರ್-ರೇಟೆಡ್ ಹೋಟೆಲ್‌ಗಳಲ್ಲಿನ ಕೊಠಡಿಗಳ ಬೆಲೆ ಈಗ 15,000 ರೂ. ವರಗೆ ಏರಿಕೆಯಾಗಿವೆ. ಇದು ಇನ್ನೂ ಶೇ 10 ರಿಂದ 15 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೋಟೆಲ್ ಮಾಲೀಕರ ಸಂಘದ ಸದಸ್ಯರೊಬ್ಬರು ತಿಳಿಸಿರುವುದಾಗಿ ಕೆಲವು ಪತ್ರಿಕಾ ವರದಿಗಳು ಉಲ್ಲೇಖಿಸಿವೆ.

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿಯೂ ಹೋಟೆಲ್ ದರ ಏರಿಕೆ

ಬೆಲೆ ಏರಿಕೆ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನಹಳ್ಳಿ, ಚಿಕ್ಕಬಳ್ಳಾಪುರ ಮತ್ತು ನೆರೆಯ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿಯೂ ಹೋಟೆಲ್ ಕೊಠಡಿಗಳ ದರ ಏರಿಕೆಯಾಗಿದೆ. ಹೋಟೆಲ್ ಕೊಠಡಿಗಳ ಬೇಡಿಕೆ ಬೆಂಗಳೂರಿನ ನಗರ ಮಿತಿಯನ್ನು ಮೀರಿ ವಿಸ್ತರಿಸಿದೆ ಎಂದು ಬೆಂಗಳೂರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಕಾಮತ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಉಲ್ಲೇಖಿಸಿದೆ. ಚಿಕ್ಕಬಳ್ಳಾಪುರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಕೂಡ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಇದನ್ನೂ ಓದಿ: ಏರ್ ಶೋ: ಬೆಂಗಳೂರಿನಲ್ಲಿ ಐದು ದಿನಗಳ ಕಾಲ ರೂಮ್, ಕ್ಯಾಬ್ ಸಿಗೋದು ಕಷ್ಟ!

ಯಲಹಂಕ ವಾಯುಪಡೆ ನಿಲ್ದಾಣ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿನ ರೆಸ್ಟೋರೆಂಟ್‌ಗಳು ಸಹ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾರ್ಯಕ್ರಮಕ್ಕೆ ಬರುವವರನ್ನು ಆಕರ್ಷಿಸಲು ವಿಶೇಷ ಕೊಡುಗೆಗಳು, ಕಸ್ಟಮೈಸ್ ಮಾಡಿದ ಮೆನುಗಳು ಮತ್ತು ಪ್ರಚಾರ ಪ್ಯಾಕೇಜ್‌ಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ