AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!

ಏರ್ ಶೋ ಮತ್ತು ಜಾಗತಿಕ ಹೂಡಿಕೆದಾರರ ಸಮಾವೇಶದಿಂದಾಗಿ ಬೆಂಗಳೂರಿಗೆ ಸಾವಿರಾರು ಜನ ಆಗಮಿಸುತ್ತಿದ್ದು, ಹೋಟೆಲ್‌ಗಳಲ್ಲಿ ಕೊಠಡಿಗಳ ಬುಕಿಂಗ್‌ಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದಾಗಿ ಹೋಟೆಲ್ ದರಗಳು ಶೇಕಡಾ 15 ರಷ್ಟು ಏರಿಕೆಯಾಗಿದ್ದು, ಕೆಲವು ಸ್ಥಳಗಳಲ್ಲಿ ವಿಮಾನ ಟಿಕೆಟ್‌ ಬೆಲೆಯನ್ನು ಮೀರಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದಂತಹ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೋಟೆಲ್‌ಗಳ ಬುಕಿಂಗ್ ಹೆಚ್ಚಾಗಿದೆ.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!
ಬೆಂಗಳೂರು ನಗರ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 08, 2025 | 9:39 AM

Share

ಬೆಂಗಳೂರು, ಫೆಬ್ರವರಿ 7: ರಕ್ಷಣಾ ಸಚಿವಾಲಯ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಮತ್ತು ರಾಜ್ಯ ಸರ್ಕಾರ ಆಯೋಜಿಸುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಗಣನೆ ಆರಂಭವಾಗಿದೆ. ಈ ಎರಡು ಕಾರ್ಯಕ್ರಮಗಳ ಕಾರಣ ಬೆಂಗಳೂರಿಗೆ ಬೇರೆ ರಾಜ್ಯಗಳ, ವಿದೇಶಗಳ ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಪರಿಣಾಮವಾಗಿ ನಗರದಾದ್ಯಂತ ಹೋಟೆಲ್ ಬುಕಿಂಗ್‌ಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದ ಅನಂತಪುರದಂತಹ ಬೆಂಗಳೂರಿಗೆ ಸಮೀಪದ ಪ್ರದೇಶಗಳಲ್ಲಿಯೂ ಹೋಟೆಲ್, ಲಾಡ್ಜ್ ಕಾಯ್ದಿರಿಸಲಾಗುತ್ತಿದೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ, ಹೋಟೆಲ್ ರೂಮ್​ಗಳ ದರ ಬೆಂಗಳೂರು-ಚೆನ್ನೈ ವಿಮಾನ ಟಿಕೆಟ್ ಬೆಲೆಯನ್ನೂ ಮೀರಿದೆ! ಇದು ಕೆಲವು ಅತಿಥಿಗಳು ನಗರಗಳ ನಡುವೆ ವಿಮಾನ ಪ್ರಯಾಣವನ್ನೇ ಉತ್ತಮ ಆಯ್ಕೆಯಾಗಿ ಪರಿಗಣಿಸಲು ಪ್ರೇರೇಪಿಸಿದೆ ಎಂದು ಮೂಲಗಳು ತಿಳಿಸಿವೆ.

ಶೇ 15 ರಷ್ಟು ಹೆಚ್ಚಾದ ಹೋಟೆಲ್, ಲಾಡ್ಜ್ ಕೊಠಡಿ ದರ

ಬೆಂಗಳೂರಿನಲ್ಲಿ ಹೋಟೆಲ್ ರೂಂ ದರಗಳು ಗಣನೀಯ ಮಟ್ಟದಲ್ಲಿ ಏರಿಕೆ ಕಂಡಿವೆ. ಅನೇಕ ಹೋಟೆಲ್​​, ಲಾಡ್ಜ್​ಗಳ ರೂಂ ಈಗಾಗಲೇ ಸಂಪೂರ್ಣವಾಗಿ ಕಾಯ್ದಿರಿಸಲಾಗಿವೆ. ಹೆಚ್ಚಾದ ಬೇಡಿಕೆಯನ್ನು ಬಂಡವಾಳ ಮಾಡಿಕೊಂಡು, ಹೋಟೆಲ್ ಮಾಲೀಕರು ಕೊಠಡಿ ಬೆಲೆಗಳನ್ನು ಗಮನಾರ್ಹವಾಗಿ ಹೆಚ್ಚಿಸಿದ್ದಾರೆ. ಕೆಲವು ಹೋಟೆಲ್‌ಗಳು ತಮ್ಮ ಸಾಮಾನ್ಯ ಬೆಲೆಗಳಿಗಿಂತ ಶೇಕಡಾ 15 ರಷ್ಟು ದರಗಳನ್ನು ಹೆಚ್ಚಿಸಿವೆ.

ಬೆಂಗಳೂರಿನಲ್ಲಿ ಈಗ ಎಷ್ಟಿದೆ ಹೋಟೆಲ್​ ರೂಂ ದರ?

ಸ್ಟಾರ್-ರೇಟೆಡ್ ಹೋಟೆಲ್‌ಗಳಲ್ಲಿನ ಕೊಠಡಿಗಳ ಬೆಲೆ ಈಗ 15,000 ರೂ. ವರಗೆ ಏರಿಕೆಯಾಗಿವೆ. ಇದು ಇನ್ನೂ ಶೇ 10 ರಿಂದ 15 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೋಟೆಲ್ ಮಾಲೀಕರ ಸಂಘದ ಸದಸ್ಯರೊಬ್ಬರು ತಿಳಿಸಿರುವುದಾಗಿ ಕೆಲವು ಪತ್ರಿಕಾ ವರದಿಗಳು ಉಲ್ಲೇಖಿಸಿವೆ.

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿಯೂ ಹೋಟೆಲ್ ದರ ಏರಿಕೆ

ಬೆಲೆ ಏರಿಕೆ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನಹಳ್ಳಿ, ಚಿಕ್ಕಬಳ್ಳಾಪುರ ಮತ್ತು ನೆರೆಯ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿಯೂ ಹೋಟೆಲ್ ಕೊಠಡಿಗಳ ದರ ಏರಿಕೆಯಾಗಿದೆ. ಹೋಟೆಲ್ ಕೊಠಡಿಗಳ ಬೇಡಿಕೆ ಬೆಂಗಳೂರಿನ ನಗರ ಮಿತಿಯನ್ನು ಮೀರಿ ವಿಸ್ತರಿಸಿದೆ ಎಂದು ಬೆಂಗಳೂರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಕಾಮತ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಉಲ್ಲೇಖಿಸಿದೆ. ಚಿಕ್ಕಬಳ್ಳಾಪುರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಕೂಡ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಇದನ್ನೂ ಓದಿ: ಏರ್ ಶೋ: ಬೆಂಗಳೂರಿನಲ್ಲಿ ಐದು ದಿನಗಳ ಕಾಲ ರೂಮ್, ಕ್ಯಾಬ್ ಸಿಗೋದು ಕಷ್ಟ!

ಯಲಹಂಕ ವಾಯುಪಡೆ ನಿಲ್ದಾಣ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿನ ರೆಸ್ಟೋರೆಂಟ್‌ಗಳು ಸಹ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾರ್ಯಕ್ರಮಕ್ಕೆ ಬರುವವರನ್ನು ಆಕರ್ಷಿಸಲು ವಿಶೇಷ ಕೊಡುಗೆಗಳು, ಕಸ್ಟಮೈಸ್ ಮಾಡಿದ ಮೆನುಗಳು ಮತ್ತು ಪ್ರಚಾರ ಪ್ಯಾಕೇಜ್‌ಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?