AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!

ಏರ್ ಶೋ ಮತ್ತು ಜಾಗತಿಕ ಹೂಡಿಕೆದಾರರ ಸಮಾವೇಶದಿಂದಾಗಿ ಬೆಂಗಳೂರಿಗೆ ಸಾವಿರಾರು ಜನ ಆಗಮಿಸುತ್ತಿದ್ದು, ಹೋಟೆಲ್‌ಗಳಲ್ಲಿ ಕೊಠಡಿಗಳ ಬುಕಿಂಗ್‌ಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದಾಗಿ ಹೋಟೆಲ್ ದರಗಳು ಶೇಕಡಾ 15 ರಷ್ಟು ಏರಿಕೆಯಾಗಿದ್ದು, ಕೆಲವು ಸ್ಥಳಗಳಲ್ಲಿ ವಿಮಾನ ಟಿಕೆಟ್‌ ಬೆಲೆಯನ್ನು ಮೀರಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದಂತಹ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೋಟೆಲ್‌ಗಳ ಬುಕಿಂಗ್ ಹೆಚ್ಚಾಗಿದೆ.

ಏರ್ ಶೋ, ಹೂಡಿಕೆ ಸಮಾವೇಶ: ಬೆಂಗಳೂರು ಚೆನ್ನೈ ವಿಮಾನ ಟಿಕೆಟ್​ಗಿಂತಲೂ ಹೆಚ್ಚಾಯ್ತು ಹೋಟೆಲ್ ರೂಂ ದರ!
ಬೆಂಗಳೂರು ನಗರ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 08, 2025 | 9:39 AM

Share

ಬೆಂಗಳೂರು, ಫೆಬ್ರವರಿ 7: ರಕ್ಷಣಾ ಸಚಿವಾಲಯ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಮತ್ತು ರಾಜ್ಯ ಸರ್ಕಾರ ಆಯೋಜಿಸುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ದಿನಗಣನೆ ಆರಂಭವಾಗಿದೆ. ಈ ಎರಡು ಕಾರ್ಯಕ್ರಮಗಳ ಕಾರಣ ಬೆಂಗಳೂರಿಗೆ ಬೇರೆ ರಾಜ್ಯಗಳ, ವಿದೇಶಗಳ ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಪರಿಣಾಮವಾಗಿ ನಗರದಾದ್ಯಂತ ಹೋಟೆಲ್ ಬುಕಿಂಗ್‌ಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ದೇವನಹಳ್ಳಿ ಮತ್ತು ಆಂಧ್ರಪ್ರದೇಶದ ಅನಂತಪುರದಂತಹ ಬೆಂಗಳೂರಿಗೆ ಸಮೀಪದ ಪ್ರದೇಶಗಳಲ್ಲಿಯೂ ಹೋಟೆಲ್, ಲಾಡ್ಜ್ ಕಾಯ್ದಿರಿಸಲಾಗುತ್ತಿದೆ.

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ, ಹೋಟೆಲ್ ರೂಮ್​ಗಳ ದರ ಬೆಂಗಳೂರು-ಚೆನ್ನೈ ವಿಮಾನ ಟಿಕೆಟ್ ಬೆಲೆಯನ್ನೂ ಮೀರಿದೆ! ಇದು ಕೆಲವು ಅತಿಥಿಗಳು ನಗರಗಳ ನಡುವೆ ವಿಮಾನ ಪ್ರಯಾಣವನ್ನೇ ಉತ್ತಮ ಆಯ್ಕೆಯಾಗಿ ಪರಿಗಣಿಸಲು ಪ್ರೇರೇಪಿಸಿದೆ ಎಂದು ಮೂಲಗಳು ತಿಳಿಸಿವೆ.

ಶೇ 15 ರಷ್ಟು ಹೆಚ್ಚಾದ ಹೋಟೆಲ್, ಲಾಡ್ಜ್ ಕೊಠಡಿ ದರ

ಬೆಂಗಳೂರಿನಲ್ಲಿ ಹೋಟೆಲ್ ರೂಂ ದರಗಳು ಗಣನೀಯ ಮಟ್ಟದಲ್ಲಿ ಏರಿಕೆ ಕಂಡಿವೆ. ಅನೇಕ ಹೋಟೆಲ್​​, ಲಾಡ್ಜ್​ಗಳ ರೂಂ ಈಗಾಗಲೇ ಸಂಪೂರ್ಣವಾಗಿ ಕಾಯ್ದಿರಿಸಲಾಗಿವೆ. ಹೆಚ್ಚಾದ ಬೇಡಿಕೆಯನ್ನು ಬಂಡವಾಳ ಮಾಡಿಕೊಂಡು, ಹೋಟೆಲ್ ಮಾಲೀಕರು ಕೊಠಡಿ ಬೆಲೆಗಳನ್ನು ಗಮನಾರ್ಹವಾಗಿ ಹೆಚ್ಚಿಸಿದ್ದಾರೆ. ಕೆಲವು ಹೋಟೆಲ್‌ಗಳು ತಮ್ಮ ಸಾಮಾನ್ಯ ಬೆಲೆಗಳಿಗಿಂತ ಶೇಕಡಾ 15 ರಷ್ಟು ದರಗಳನ್ನು ಹೆಚ್ಚಿಸಿವೆ.

ಬೆಂಗಳೂರಿನಲ್ಲಿ ಈಗ ಎಷ್ಟಿದೆ ಹೋಟೆಲ್​ ರೂಂ ದರ?

ಸ್ಟಾರ್-ರೇಟೆಡ್ ಹೋಟೆಲ್‌ಗಳಲ್ಲಿನ ಕೊಠಡಿಗಳ ಬೆಲೆ ಈಗ 15,000 ರೂ. ವರಗೆ ಏರಿಕೆಯಾಗಿವೆ. ಇದು ಇನ್ನೂ ಶೇ 10 ರಿಂದ 15 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೋಟೆಲ್ ಮಾಲೀಕರ ಸಂಘದ ಸದಸ್ಯರೊಬ್ಬರು ತಿಳಿಸಿರುವುದಾಗಿ ಕೆಲವು ಪತ್ರಿಕಾ ವರದಿಗಳು ಉಲ್ಲೇಖಿಸಿವೆ.

ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿಯೂ ಹೋಟೆಲ್ ದರ ಏರಿಕೆ

ಬೆಲೆ ಏರಿಕೆ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನಹಳ್ಳಿ, ಚಿಕ್ಕಬಳ್ಳಾಪುರ ಮತ್ತು ನೆರೆಯ ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿಯೂ ಹೋಟೆಲ್ ಕೊಠಡಿಗಳ ದರ ಏರಿಕೆಯಾಗಿದೆ. ಹೋಟೆಲ್ ಕೊಠಡಿಗಳ ಬೇಡಿಕೆ ಬೆಂಗಳೂರಿನ ನಗರ ಮಿತಿಯನ್ನು ಮೀರಿ ವಿಸ್ತರಿಸಿದೆ ಎಂದು ಬೆಂಗಳೂರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಕಾಮತ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಉಲ್ಲೇಖಿಸಿದೆ. ಚಿಕ್ಕಬಳ್ಳಾಪುರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಕೂಡ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಇದನ್ನೂ ಓದಿ: ಏರ್ ಶೋ: ಬೆಂಗಳೂರಿನಲ್ಲಿ ಐದು ದಿನಗಳ ಕಾಲ ರೂಮ್, ಕ್ಯಾಬ್ ಸಿಗೋದು ಕಷ್ಟ!

ಯಲಹಂಕ ವಾಯುಪಡೆ ನಿಲ್ದಾಣ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿನ ರೆಸ್ಟೋರೆಂಟ್‌ಗಳು ಸಹ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾರ್ಯಕ್ರಮಕ್ಕೆ ಬರುವವರನ್ನು ಆಕರ್ಷಿಸಲು ವಿಶೇಷ ಕೊಡುಗೆಗಳು, ಕಸ್ಟಮೈಸ್ ಮಾಡಿದ ಮೆನುಗಳು ಮತ್ತು ಪ್ರಚಾರ ಪ್ಯಾಕೇಜ್‌ಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!