AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೋಟೆಲುಗಳಲ್ಲಿ ರಾತ್ರಿ ಹೊತ್ತು ಸಹ ಸಿಗಲಿದೆ ಊಟ-ತಿಂಡಿ: ರಾಜ್ಯ ಸರ್ಕಾರ ಹೊಸ ಆದೇಶ, ಇನ್ನೂ ಏನೇನು ತೆರೆದಿರುತ್ತೆ?

ಸರ್ಕಾರದ ಅಧಿಸೂಚನೆ ಪ್ರಕಾರ ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇದೇ ಮೊದಲ ಬಾರಿಗೆ 24/7 ಹೋಟೆಲ್ ತೆರೆಯಲು ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ.

ಇನ್ಮುಂದೆ ಹೋಟೆಲುಗಳಲ್ಲಿ ರಾತ್ರಿ ಹೊತ್ತು ಸಹ ಸಿಗಲಿದೆ ಊಟ-ತಿಂಡಿ: ರಾಜ್ಯ ಸರ್ಕಾರ ಹೊಸ ಆದೇಶ, ಇನ್ನೂ ಏನೇನು ತೆರೆದಿರುತ್ತೆ?
ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Apr 19, 2022 | 4:39 PM

Share

ಬೆಂಗಳೂರು: ಕೊರೊನಾ ಮತ್ತು ಬೆಲೆ ಏರಿಕೆ ಬಿಸಿಗೆ ಥಂಡಾ ಹೊಡೆದಿರುವ ಹೋಟೆಲುಗಳಿಗೆ ರಾಜ್ಯ ಸರ್ಕಾರ ಆಶಾದಾಯಕ ಸುದ್ದಿ ನೀಡಿದೆ. ಹೆಚ್ಚು ಸಮಯ ವ್ಯಾಪಾರ ನಡೆಸುವುದಕ್ಕೆ ಅನುಕೂಲವಾಗಲು ಇನ್ನು ಮುಂದೆ ಇಡೀ ದಿನ- ಇಡೀ ರಾತ್ರಿ (24/7) ಹೋಟೆಲ್ ಗಳು ಓಪನ್ ಆಗಿರಲಿವೆ. ಅಂದರೆ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಸಹ ಊಟ-ತಿಂಡಿ ಸಿಗಲಿದೆ (night hotels). ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ (Bangalore hotels). ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರ ಅನುಕೂಲಕ್ಕಾಗಿ ಈ ವ್ಯವಸ್ಥೆ ಅನುಕೂಲವಾಗಲಿದೆ. ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಇದೀಗ ಪೊಲೀಸ್ ಇಲಾಖೆಯ ಅನುಮತಿಗಾಗಿ ಕಾಯುತ್ತಿದೆ.

2021ರಲ್ಲಿ ಸರ್ಕಾರವು ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಿತ್ತು. ಆದರೆ ಕೋವಿಡ್ ಕಾರಣದಿಂದ ಸೇವೆ ತಡೆ ಹಿಡಿಯಲಾಗಿತ್ತು. ಈಗ ಕೋವಿಡ್ ಕಡಿಮೆಯಾದ ಹಿನ್ನೆಲೆ ಸೇವೆ ಆರಂಭ ಕೋರಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಕೋರಿ ಹೋಟೆಲ್‌ ಸಂಘದಿಂದ ಪತ್ರ ಬರೆಯಲಾಗಿದೆ. ಪೊಲೀಸ್ ಇಲಾಖೆ ಅನುಮತಿ ಬಳಿಕ 24/7 ಸೇವೆ ಆರಂಭವಾಗಲಿದೆ ಎಂದು ಹೋಟೆಲು ಸಂಘ ತಿಳಿಸಿದೆ.

RTE ಶುಲ್ಕ ಮರುಪಾವತಿ ಮಾಡದ ಸರ್ಕಾರ; ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಪ್ರವೇಶ ನಿಲ್ಲಿಸಲು ಚಿಂತನೆ ಬೆಂಗಳೂರು: ವಾರ್ಷಿಕ ಮಾನ್ಯತೆ ನವೀಕರಣ ನೆಪವೊಡ್ಡಿ RTE ಶುಲ್ಕ ಮರುಪಾವತಿಗೆ ತಡೆಯೊಡ್ಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಒಕ್ಕೂಟವು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಗೆ ಪತ್ರ ಬರೆದಿದ್ದು, ಖಾಸಗಿ ಶಾಲೆಗಳಲ್ಲಿ RTE ಪ್ರವೇಶ ನಿಲ್ಲಿಸಲು ಚಿಂತನೆ ನಡೆದಿದೆ ಎಂದು ಎಚ್ಚರಿಸಿದೆ.

2022-23ನೇ ಶೈಕ್ಷಣಿಕ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಮಕ್ಕಳ ಪ್ರವೇಶ ಪಡೆಯದಿರಲು ನಿರ್ಧಾರ ಮಾಡಲಾಗಿದೆ. ಆರ್​ ಟಿಇ ಪ್ರವೇಶ ಸ್ಥಗೊತಗೊಳಿಸದೆ, ಮುಂದಿವರಿಸಬೇಕು ಎಂತಾದರೆ ಕೂಡಲೇ RTE ಹಣ ಬಿಡುಗಡೆ ಮಾಡುವಂತೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯ ಮಾಡಿದೆ. ಇಲ್ಲವಾದ್ರೆ ರಾಜ್ಯದ 11 ಸಾವಿರ ಖಾಸಗಿ ಶಾಲೆಗಳಲ್ಲಿ RTE ಸ್ಥಗಿತಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಪತ್ರದಲ್ಲಿ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಸಿದ್ದಾರೆ.

Also Read:

ಅಸೆಂಬ್ಲಿ ಚುನಾವಣೆ ಹೊಸ್ತಿಲಲ್ಲಿ ಸಿಎಂ ಬೊಮ್ಮಾಯಿ ಸಂಪುಟ ಪ್ರಸವ ನಿಜವಾ, ಸುಳ್ಳಾ!? -ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

ಇದೂ ಓದಿ: ಕರೆಂಟ್ ಹೋಗಲ್ಲ, ಯೋಚನೆ ಮಾಡಬೇಡಿ: ಇಂಧನ ಸಚಿವ ಸುನಿಲ್ ಕುಮಾರ್

Published On - 4:27 pm, Tue, 19 April 22

Follow Us
TV9 Web
TV9 Web

TV9 Kannada

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು