AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಹೋಟೆಲುಗಳಲ್ಲಿ ರಾತ್ರಿ ಹೊತ್ತು ಸಹ ಸಿಗಲಿದೆ ಊಟ-ತಿಂಡಿ: ರಾಜ್ಯ ಸರ್ಕಾರ ಹೊಸ ಆದೇಶ, ಇನ್ನೂ ಏನೇನು ತೆರೆದಿರುತ್ತೆ?

ಸರ್ಕಾರದ ಅಧಿಸೂಚನೆ ಪ್ರಕಾರ ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇದೇ ಮೊದಲ ಬಾರಿಗೆ 24/7 ಹೋಟೆಲ್ ತೆರೆಯಲು ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ.

ಇನ್ಮುಂದೆ ಹೋಟೆಲುಗಳಲ್ಲಿ ರಾತ್ರಿ ಹೊತ್ತು ಸಹ ಸಿಗಲಿದೆ ಊಟ-ತಿಂಡಿ: ರಾಜ್ಯ ಸರ್ಕಾರ ಹೊಸ ಆದೇಶ, ಇನ್ನೂ ಏನೇನು ತೆರೆದಿರುತ್ತೆ?
ಸಾಂದರ್ಭಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Apr 19, 2022 | 4:39 PM

Share

ಬೆಂಗಳೂರು: ಕೊರೊನಾ ಮತ್ತು ಬೆಲೆ ಏರಿಕೆ ಬಿಸಿಗೆ ಥಂಡಾ ಹೊಡೆದಿರುವ ಹೋಟೆಲುಗಳಿಗೆ ರಾಜ್ಯ ಸರ್ಕಾರ ಆಶಾದಾಯಕ ಸುದ್ದಿ ನೀಡಿದೆ. ಹೆಚ್ಚು ಸಮಯ ವ್ಯಾಪಾರ ನಡೆಸುವುದಕ್ಕೆ ಅನುಕೂಲವಾಗಲು ಇನ್ನು ಮುಂದೆ ಇಡೀ ದಿನ- ಇಡೀ ರಾತ್ರಿ (24/7) ಹೋಟೆಲ್ ಗಳು ಓಪನ್ ಆಗಿರಲಿವೆ. ಅಂದರೆ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಸಹ ಊಟ-ತಿಂಡಿ ಸಿಗಲಿದೆ (night hotels). ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ (Bangalore hotels). ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರ ಅನುಕೂಲಕ್ಕಾಗಿ ಈ ವ್ಯವಸ್ಥೆ ಅನುಕೂಲವಾಗಲಿದೆ. ಸರ್ಕಾರದ ಆದೇಶವನ್ನು ಸ್ವಾಗತಿಸಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಇದೀಗ ಪೊಲೀಸ್ ಇಲಾಖೆಯ ಅನುಮತಿಗಾಗಿ ಕಾಯುತ್ತಿದೆ.

2021ರಲ್ಲಿ ಸರ್ಕಾರವು ಎಲ್ಲಾ ಹೋಟೆಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ಗಳು ದಿನದ 24 ಗಂಟೆಯೂ ತೆರೆಯಲು ಅವಕಾಶ ಕಲ್ಪಿಸಿತ್ತು. ಆದರೆ ಕೋವಿಡ್ ಕಾರಣದಿಂದ ಸೇವೆ ತಡೆ ಹಿಡಿಯಲಾಗಿತ್ತು. ಈಗ ಕೋವಿಡ್ ಕಡಿಮೆಯಾದ ಹಿನ್ನೆಲೆ ಸೇವೆ ಆರಂಭ ಕೋರಿ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಕೋರಿ ಹೋಟೆಲ್‌ ಸಂಘದಿಂದ ಪತ್ರ ಬರೆಯಲಾಗಿದೆ. ಪೊಲೀಸ್ ಇಲಾಖೆ ಅನುಮತಿ ಬಳಿಕ 24/7 ಸೇವೆ ಆರಂಭವಾಗಲಿದೆ ಎಂದು ಹೋಟೆಲು ಸಂಘ ತಿಳಿಸಿದೆ.

RTE ಶುಲ್ಕ ಮರುಪಾವತಿ ಮಾಡದ ಸರ್ಕಾರ; ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಪ್ರವೇಶ ನಿಲ್ಲಿಸಲು ಚಿಂತನೆ ಬೆಂಗಳೂರು: ವಾರ್ಷಿಕ ಮಾನ್ಯತೆ ನವೀಕರಣ ನೆಪವೊಡ್ಡಿ RTE ಶುಲ್ಕ ಮರುಪಾವತಿಗೆ ತಡೆಯೊಡ್ಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಒಕ್ಕೂಟವು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಗೆ ಪತ್ರ ಬರೆದಿದ್ದು, ಖಾಸಗಿ ಶಾಲೆಗಳಲ್ಲಿ RTE ಪ್ರವೇಶ ನಿಲ್ಲಿಸಲು ಚಿಂತನೆ ನಡೆದಿದೆ ಎಂದು ಎಚ್ಚರಿಸಿದೆ.

2022-23ನೇ ಶೈಕ್ಷಣಿಕ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಆರ್​ ಟಿಇ ಮಕ್ಕಳ ಪ್ರವೇಶ ಪಡೆಯದಿರಲು ನಿರ್ಧಾರ ಮಾಡಲಾಗಿದೆ. ಆರ್​ ಟಿಇ ಪ್ರವೇಶ ಸ್ಥಗೊತಗೊಳಿಸದೆ, ಮುಂದಿವರಿಸಬೇಕು ಎಂತಾದರೆ ಕೂಡಲೇ RTE ಹಣ ಬಿಡುಗಡೆ ಮಾಡುವಂತೆ ಖಾಸಗಿ ಶಾಲಾ ಒಕ್ಕೂಟ ಒತ್ತಾಯ ಮಾಡಿದೆ. ಇಲ್ಲವಾದ್ರೆ ರಾಜ್ಯದ 11 ಸಾವಿರ ಖಾಸಗಿ ಶಾಲೆಗಳಲ್ಲಿ RTE ಸ್ಥಗಿತಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಪತ್ರದಲ್ಲಿ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಸಿದ್ದಾರೆ.

Also Read:

ಅಸೆಂಬ್ಲಿ ಚುನಾವಣೆ ಹೊಸ್ತಿಲಲ್ಲಿ ಸಿಎಂ ಬೊಮ್ಮಾಯಿ ಸಂಪುಟ ಪ್ರಸವ ನಿಜವಾ, ಸುಳ್ಳಾ!? -ಟಿವಿ 9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

ಇದೂ ಓದಿ: ಕರೆಂಟ್ ಹೋಗಲ್ಲ, ಯೋಚನೆ ಮಾಡಬೇಡಿ: ಇಂಧನ ಸಚಿವ ಸುನಿಲ್ ಕುಮಾರ್

Published On - 4:27 pm, Tue, 19 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ