AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಹೆಂಡತಿ ಹೊಡೀತಾಳೆ! ಕಾಪಾಡಿ ನನ್ನನ್ನು ಎಂದು ಪ್ರಧಾನಿ ಮೋದಿಗೆ ಮೊರೆಯಿಟ್ಟ ಬೆಂಗಳೂರಿನ ಪತಿರಾಯ

ಅಯ್ಯೋ ಪಾಪ.. ಈ ಗಂಡನ ಪಾಡು ಯಾರಿಗೂ ಬರಬಾರದು. ಈತನನ್ನು 2 ವರ್ಷದಿಂದ ಹೆಂಡತಿ ಹೊಡೆಯುತ್ತಿದ್ದಾಳಂತೆ. ಹೀಗಂತ 2 ವರ್ಷದ ಹಿಂದೆ ಬೆಂಗಳೂರು ಪೊಲೀಸರಿಗೆ ಮತ್ತು ಈಗ ಪ್ರಧಾನಿ ಮೋದಿಗೆ ಆತ ದೂರಿದ್ದಾರೆ.

ಅಯ್ಯೋ ಹೆಂಡತಿ ಹೊಡೀತಾಳೆ! ಕಾಪಾಡಿ ನನ್ನನ್ನು ಎಂದು ಪ್ರಧಾನಿ ಮೋದಿಗೆ ಮೊರೆಯಿಟ್ಟ ಬೆಂಗಳೂರಿನ ಪತಿರಾಯ
ಅಯ್ಯೋ, ನನ್ನ ಹೆಂಡತಿ ಹೊಡೀತಾಳೆ! ಕಾಪಾಡಿ ನನ್ನನ್ನು ಎಂದು ಪ್ರಧಾನಿ ಮೋದಿಗೆ ಮೊರೆಯಿಟ್ಟ ಬೆಂಗಳೂರಿನ ಪತಿರಾಯ ಏನು ಮಾಡಿದ ನೋಡಿ?
TV9 Web
| Edited By: ಸಾಧು ಶ್ರೀನಾಥ್​|

Updated on:Nov 02, 2022 | 5:02 PM

Share

ಬೆಂಗಳೂರು: ಪತಿ-ಪತ್ನಿಯರ ನಡುವೆ ಜಗಳ ಸಾಮಾನ್ಯ. ಪತಿ (Husband) ಪತ್ನಿಗೆ (Wife) ಥಳಿಸುವುದು, ಅವಳು ನನ್ನ ಮಾತು ಕೇಳುವುದಿಲ್ಲ ಎಂದು ಗಂಡ ಅಲವತ್ತುಕೊಳ್ಳುವುದು ಸಾಮಾನ್ಯವಾಗಿ ನೋಡಿದ್ದೇವೆ. ಆದರೆ ಇಲ್ಲಿ ಪಾತ್ರಗಳು ಬದಲಾಗಿವೆ. ಹೆಂಡತಿ ಹೊಡೀತಾಳೆ ಸ್ವಾಮಿ. ನನ್ನ ಮಾತನ್ನೇ ಕೇಳುವುದಿಲ್ಲ ಎಂದು ಪತಿರಾಯನೇ ಬೊಬ್ಬಿಡುತ್ತಿದ್ದಾನೆ. ಇಂತಹ ಪ್ರಕರಣಗಳು ಬಹಳಷ್ಟು ಬಾರಿ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದ ಮುಂದೆ ಹೋಗುತ್ತದೆ. ಹೆಚ್ಚಿನ ಪ್ರಕರಣಗಳು ಅಲ್ಲಿ ನಿರ್ಣಯವಾಗುತ್ತದೆ. ಅಥವಾ ಒಟ್ಟಿಗೆ ಇರಲು ಭಾವನಾತ್ಮಕ ಸಲಹೆಯೂ ನೀಡುತ್ತಾರೆ. ಆದರೆ.. ಇಲ್ಲೊಂದು ವಿಚಿತ್ರ ನಡೆದಿದೆ. ಪ್ರಕರಣ ಏನು ಎಂದು ತಿಳಿದರೆ ನಿಮ್ಮನ್ನು ನಗಿಸುವುದು ಖಂಡಿತ.

ಇದೊಂದು ರೀತಿ ಹರಾಸ್​ಮೆಂಟ್ ಪ್ರಕರಣ (Harassment). ಆದರೆ ಗಂಡ ಹೆಂಡತಿಗೆ ಕಿರುಕುಳ ನೀಡುತ್ತಾನೆ ಎಂದು ನೀವು ಭಾವಿಸಿದರೆ ಅದು ತಪ್ಪು. ಇಲ್ಲಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಪತಿಗೆ ಪತ್ನಿ ಕಿರುಕುಳ ನೀಡಲಾರಂಭಿಸಿದ್ದಾಳೆ ಎಂದು ಸಂತ್ರಸ್ತ ದೂರಿದ್ದಾರೆ. ಮತ್ತು ಆಕೆಯಿಂದ ತನ್ನನ್ನು ರಕ್ಷಿಸಲು, ಮುಕ್ತವಾಗಿಸಲು ಪ್ರಧಾನಿ ಕಚೇರಿಗೆ (PMO) ಟ್ಯಾಗ್​ ಮಾಡಿ, ಪ್ರಧಾನಿ ಮೋದಿಗೆ ದೂರು ನೀಡಿದ್ದಾರೆ.

ತನ್ನ ಹೆಂಡತಿ ತನಗೆ ಕಿರುಕುಳ ನೀಡುತ್ತಿದ್ದಾಳೆ ಎಂಬುದು ಆತನ ದೂರು. ಸಾಮಾಜಿಕ ಮಾಧ್ಯಮ ಟ್ವಿಟ್ಟರ್​ ಮೂಲಕ ಪಿಎಂಒ, ಕಾನೂನು ಸಚಿವ ಕಿರಣ್ ರಿಜುಜು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ, ಅಲವತ್ತುಕೊಂಡಿದ್ದಾರೆ. ಈ ಮಧ್ಯೆ ಗಂಡನ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸರು (Bangalore City Police) ಅವರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆ ಪೋಸ್ಟ್ ಈಗ ವೈರಲ್ ಆಗಿದೆ.

ಬೆಂಗಳೂರಿನ ಯದುನಂದನ್ ಆಚಾರ್ಯ ಅವರು ತಮ್ಮ ಪತ್ನಿ ವಿರುದ್ಧ ಪಿಎಂಒಗೆ ದೂರು ನೀಡಿದ್ದಾರೆ. ತನ್ನ ಪತ್ನಿ ಪದೇ ಪದೇ ತನಗೆ ಕಿರುಕುಳ, ಹಲ್ಲೆ, ಹಿಂಸೆ ಮಾಡುತ್ತಿದ್ದಾಳೆ ಎಂದು ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಆಕೆಯಿಂದ ತನಗೆ ಜೀವ ಬೆದರಿಕೆ ಇದೆ ಎಂದೂ ಆತ ಆತಂಕ ವ್ಯಕ್ತಪಡಿಸಿದ್ದಾರೆ. ತನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ಯಾರಾದರೂ ನನಗೆ ಸಹಾಯ ಮಾಡಬಹುದೇ? ನನ್ನ ಹೆಂಡತಿ ನನ್ನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದಳು. ಕೈಬೆರಳುಗಳು ಕಟ್ ಆಗಿಬವೆ ನೋಡಿ ಎಂದು ಫೋಟೋ ಸಹಿತ ಹಾಕಿದ್ದಾರೆ. ನೀವು ಹೇಳುತ್ತಿರುವ ನಾರಿ ಶಕ್ತಿ ಇದೇನಾ? ಇದಕ್ಕಾಗಿ ನಾನು ಅವಳ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಬಹುದೇ? ಎಂದು ಯದುನಂದನ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿ, ಅಲವತ್ತುಕೊಂಡಿದ್ದಾರೆ.

Published On - 4:58 pm, Wed, 2 November 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು