AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಕೊರತೆ

ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಮಕ್ಕಳ ಆಸ್ಪತ್ರೆಗೆ ನಿತ್ಯ ನೂರಾರು ಜನರು ಚಿಕಿತ್ಸೆಗೆ ಬರುತ್ತಾರೆ. ಬಡ ಪೋಷಕರು ಉಚಿತ ಚಿಕಿತ್ಸೆ ಎಂದು ಮಕ್ಕಳನ್ನು ಕರೆದುಕೊಂಡು ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಆದರೆ, ಸಣ್ಣಪುಟ್ಟ ಸ್ಕ್ಯಾನ್​​ಗೂ ಸಾವಿರಾರು ರೂಪಾಯಿ ಖರ್ಚ ಮಾಡಬೇಕಾದ ಸ್ಥಿತಿ ಈ ಆಸ್ಪತ್ರೆಯಲ್ಲಿದೆ.

ಬೆಂಗಳೂರು: ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್ ಕೊರತೆ
ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆ
ವಿನಯ್​ ಕಾಶಪ್ಪನವರ್​
| Edited By: |

Updated on: Aug 10, 2024 | 5:46 PM

Share

ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ ಇಂದಿರಾಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಎಂಆರ್​​​ಐ ಸ್ಕ್ಯಾನಿಂಗ್ ಇಲ್ಲದೇ ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಉಚಿತ ಅಥವಾ ಕಡಿಮೆ ದರದಲ್ಲಿ ಮಾಡಿಸಬಹುದಾದ ಸ್ಕ್ಯಾನಿಂಗ್‌ಗೆ ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಹಣ ತೆತ್ತು ರೋಗಿಗಳು ಸುಸ್ತಾಗಿದ್ದಾರೆ. ಇಂದಿಗೂ ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳ ಅಲೆದಾಟ ನಿಂತಿಲ್ಲ. ಎಂಆರ್​​​ಐ ಸ್ಕ್ಯಾನಿಂಗ್ ಸೌಲಭ್ಯ ದೊರೆಯದೇ ಬಡ ರೋಗಿಗಳು ಪರದಾಡುವಂತಾಗಿದೆ.

ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ನಿತ್ಯ ನೂರಾರು ಜನರು ಚಿಕಿತ್ಸೆಗೆ ಬರುತ್ತಾರೆ. ಉಚಿತ ಚಿಕಿತ್ಸೆ ದೊರೆಯುತ್ತದೆ ಎಂದು ನಿತ್ಯ ಬಡ ಪೋಷಕರು ಮಕ್ಕಳನ್ನು ಕರೆದುಕೊಂಡು ಈ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆದರೆ ಸಣ್ಣಪುಟ್ಟ ಸ್ಕ್ಯಾನ್​​ಗೂ ಸಾವಿರಾರೂ ರೂಪಾಯಿ ಖರ್ಚು ಮಾಡಬೇಕಾಗಿ ಬರುತ್ತಿದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನಿಂಗ್​​​ಗೆ ಬೇಡಿಕೆ ಇದೆ. ಆದರೆ ಇಲ್ಲಿ ಸ್ಕ್ಯಾನಿಂಗ್ ಸೆಂಟರ್ ಇಲ್ಲದ ಕಾರಣ ಪೋಷಕರು ಸಾವಿರಾರು ರೂಪಾಯಿ ಖರ್ಚು ಮಾಡಿ ಹೊರಗಡೆ ಸ್ಕ್ಯಾನ್ ಮಾಡಿಸಲು ಹೋಗಬೇಕಾದ ಸ್ಥಿತಿ ಎದುರಾಗಿದೆ. ಎಂಆರ್​​​ಐ ಸ್ಕ್ಯಾನಿಂಗ್ ಸೆಂಟರ್​​ಗಾಗಿ ಆಸ್ಪತ್ರೆ ಹಲವು ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಇಟ್ಟರೂ ಸಿಕ್ಕಿಲ್ಲ. ಹೀಗಾಗಿ ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಉಚಿತ ಅಥವಾ ಕಡಿಮೆ ದರದಲ್ಲಿ ಮಾಡಿಸಬಹುದಾದ ಸ್ಕ್ಯಾನಿಂಗ್‌ಗೆ ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಹಣ ತೆತ್ತು ರೋಗಿಗಳು ಸುಸ್ತಾಗಿದ್ದಾರೆ. ಇಂದಿಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಎಂಆರ್​​​ಐ ಸ್ಕ್ಯಾನಿಂಗ್ ಸೌಲಭ್ಯ ಇಲ್ಲದೆ ಖಾಸಗಿ ಲ್ಯಾಬ್‌ಗಳಿಗೆ ರೋಗಿಗಳ ಅಲೆದಾಟ ನಿಂತಿಲ್ಲ. ನಿತ್ಯ 300 ರಿಂದ 350 ಮಕ್ಕಳು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಾರೆ.

ಇದನ್ನೂ ಓದಿ: ಡೆಂಗ್ಯೂ ಕಂಟ್ರೋಲ್​ಗೆ ಮುಂಬೈ ಮಾದರಿ ಫಾಲೋ ಮಾಡಲು ಮುಂದಾದ ಬಿಬಿಎಂಪಿ; ಇಕೋ ಬಯೋ ಟ್ರ್ಯಾಪ್‌ ಬಳಕೆಗೆ ಪ್ಲಾನ್

ಈ ಆಸ್ಪತ್ರೆಗೆ ಬರುವ ರೋಗಿಗಳು ಆಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇರಿದಂತೆ ಬೇರೆ ಎಲ್ಲ ರೀತಿಯ ಸ್ಕ್ಯಾನಿಂಗ್ ಮಾಡಿಸಲು ಖಾಸಗಿ ಲ್ಯಾಬ್‌ ಮೊರೆ ಹೋಗುತ್ತಿದ್ದು ಸಾವಿರಾರು ರೂಪಾಯಿ ಖರ್ಚು ಮಾಡಬೇಕಿದೆ. ಇದು ಬಡ ರೋಗಿಗಳಿಗೆ ದೊಡ್ಡ ಹೊರೆಯಾಗಿದೆ.

ಎಂಆರ್​ಐ ಸ್ಕ್ಯಾನಿಂಗ್ ವ್ಯವಸ್ಥೆ ಒದಗಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಇಂದಿರಾಗಾಂಧಿ ಆಸ್ಪತ್ರೆಯ ಡಾ. ಪ್ರಹ್ಲಾದ್ ತಿಳಿಸಿದ್ದಾರೆ. ಸರ್ಕಾರ ಇನ್ನಾದರೂ ಎಚ್ಚೆತ್ತು ಈ ಸೌಲಭ್ಯ ಒದಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ