AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISKCON: ಗೀತಾ ದಾನ ಯಜ್ಞ ಕಾರ್ಯಕ್ರಮದ ಮೂಲಕ ಒಂದು ಲಕ್ಷ ಭಗವದ್ಗೀತೆ ಪ್ರತಿಗಳ ವಿತರಣೆ

ಗೀತಾ ದಾನ ಯಜ್ಞ ಕಾರ್ಯಕ್ರಮದ ಮೂಲಕ ಇಸ್ಕಾನ್ ಬೆಂಗಳೂರು ದೇವಾಲಯಗಳ ಸಮೂಹವು ಒಂದು ಲಕ್ಷ ಭಗವದ್ಗೀತೆಗಳನ್ನು ವಿತರಿಸುವ ಮಹತ್ತರವಾದ ಗುರಿಯನ್ನು ಹೊಂದಿದೆ.

ISKCON: ಗೀತಾ ದಾನ ಯಜ್ಞ ಕಾರ್ಯಕ್ರಮದ ಮೂಲಕ ಒಂದು ಲಕ್ಷ ಭಗವದ್ಗೀತೆ ಪ್ರತಿಗಳ ವಿತರಣೆ
ಗೀತಾ ದಾನ ಯಜ್ಞ ಕಾರ್ಯಕ್ರಮದಲ್ಲಿ ಒಂದು ಲಕ್ಷ ಭಗವದ್ಗೀತೆ ಪ್ರತಿಗಳನ್ನು ವಿತರಿಸಲಿರುವ ಇಸ್ಕಾನ್
TV9 Web
| Updated By: Rakesh Nayak Manchi|

Updated on:Nov 29, 2022 | 12:15 PM

Share

ಬೆಂಗಳೂರು: ತಿಂಗಳ ಅವಧಿಯ ‘ಗೀತಾ ದಾನ ಯಜ್ಞ’ (Gita Daan Yagna) ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಡಿ.3ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಇಸ್ಕಾನ್ (ISKCON) ಬೆಂಗಳೂರು ದೇವಾಲಯಗಳ ಸಮೂಹ ಒಂದು ಲಕ್ಷ ಭಗವದ್ಗೀತೆ (Bhagavad Gita)ಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ. ಈ ಅವಧಿಯಲ್ಲಿ ಭಗವದ್ಗೀತೆ ಆಧಾರಿತ ವಿಚಾರ ಸಂಕಿರಣಗಳು ಮತ್ತು ತಾತ್ವಿಕ ಚರ್ಚೆಗಳನ್ನೂ ಆಯೋಜಿಸಲಾಗುವುದು ಎಂದು ಇಸ್ಕಾನ್ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.

ನಗರದ ವಸಂತಪುರದಲ್ಲಿರುವ ಇಸ್ಕಾನ್ (ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್) ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನದಲ್ಲಿ ಗೀತಾ ಜಯಂತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್ ಅಶೋಕ ಮತ್ತು ಕೆ.ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Bangalore Power Cut: ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್, ಕೋರಮಂಗಲ ಮುಂತಾದೆಡೆ ಇನ್ನೆರಡು ದಿನ ಪವರ್ ಕಟ್

ದೇವಾಲಯದ ಸಂಕೀರ್ಣದಲ್ಲಿ ಮಕ್ಕಳು ಮತ್ತು ವಯಸ್ಕರ ವಿವಿಧ ಗುಂಪುಗಳಿಂದ ಗೀತೆಯ 700 ಶ್ಲೋಕಗಳನ್ನು ಪಠಿಸಲಾಗುತ್ತದೆ. ಖ್ಯಾತ ಭಕ್ತಿ ಗಾಯಕ ವಿದ್ಯಾಭೂಷಣ ಅವರಿಂದ ಭಗವದ್ಗೀತೆ ಪಠಣದ ಮಲ್ಟಿಮೀಡಿಯಾ ವೀಡಿಯೋ ಪ್ರಸ್ತುತಿ ಜೊತೆಗೆ ಆರು ಭಾಷೆಗಳಲ್ಲಿ ಅನುವಾದವನ್ನು ಬಿಡುಗಡೆ ಮಾಡಲಾಗುವುದು ಎಂದು ಇಸ್ಕಾನ್ ತಿಳಿಸಿದೆ. “ಭಗವದ್ಗೀತೆಯ ಸಂದೇಶವು ದೇಶ ಅಥವಾ ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಸಾರ್ವತ್ರಿಕವಾಗಿ ಅನ್ವಯಿಸುತ್ತದೆ ಮತ್ತು ಭಾರತ ಮತ್ತು ವಿದೇಶಗಳಲ್ಲಿನ ಮಹಾನ್ ವ್ಯಕ್ತಿಗಳಿಂದ ಹೆಚ್ಚು ಮೆಚ್ಚುಗೆ ಪಡೆದಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Tue, 29 November 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್