AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳ; ಲಕ್ಕಿ ಡ್ರಾ ಕೂಪನ್​ನಲ್ಲಿ ಕಾರು, ರಾಯಲ್ ಎನ್ಫೀಲ್ಡ್ ಗೆದ್ದ ಅದೃಷ್ಟವಂತರು

ಕಾಂತಾರ ಸಿನಿಮಾದಿಂದ ಹೆಚ್ಚಿನ ಖ್ಯಾತಿ ಪಡೆದ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮೊದಲ ಬಹುಮಾನವಾಗಿ ಗೆದ್ದವರಿಗೆ ಮಾರುತಿ ಬ್ರಿಜಾ ಕಾರು ನೀಡಲಾಗಿದೆ. ಎರಡನೇ ಬಹುಮಾನ ರಾಯಲ್ ಎನ್ಫೀಲ್ಡ್ ಬೈಕ್, ಮೂರನೇ ಬಹುಮಾನ ಹೋಂಡಾ ಶೈನ್ ಬೈಕ್, ನಾಲ್ಕನೇ ಬಹುಮಾನ ಎಲೆಕ್ಟ್ರಿಕ್ ಸ್ಕೂಟರ್

ಬೆಂಗಳೂರು ಕಂಬಳ; ಲಕ್ಕಿ ಡ್ರಾ ಕೂಪನ್​ನಲ್ಲಿ ಕಾರು, ರಾಯಲ್ ಎನ್ಫೀಲ್ಡ್ ಗೆದ್ದ ಅದೃಷ್ಟವಂತರು
ಬೆಂಗಳೂರು ಕಂಬಳ ಲಕ್ಕಿ ಡ್ರಾ ಕೂಪನ್
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Nov 27, 2023 | 7:53 AM

ಬೆಂಗಳೂರು, ನ.27: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಬೆಂಗಳೂರು ಕಂಬಳಕ್ಕೆ (Bengaluru Kambala) ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಕಂಬಳ ಕೊನೆಗೊಂಡಿದ್ದು ಲಕ್ಷಾಂತರ ಜನರು ಕರಾವಳಿಯ ಕಂಬಳವನ್ನ ಕಣ್ತುಂಬಿಕೊಂಡಿದ್ದಾರೆ. ನಿನ್ನೆ(ನ.26) ತಡರಾತ್ರಿವರೆಗೆ ಕಂಬಳ ಕಾರ್ಯಕ್ರಮ ನಡೆದಿದ್ದು ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆಯಾಗಿದೆ. ಮಾರುತಿ ಬ್ರಿಜಾ ಕಾರು, ರಾಯಲ್ ಎನ್ಫೀಲ್ಡ್ ಬೈಕ್, ಹೋಂಡಾ ಶೈನ್ ಬೈಕ್, ಎಲೆಕ್ಟ್ರಿಕ್ ಸ್ಕೂಟರ್ ಬಹುಮಾನವಾಗಿ ಪಡೆದು ಫುಲ್ ಖುಷ್ ಆಗಿದ್ದಾರೆ.

ಕಾಂತಾರ ಸಿನಿಮಾದಿಂದ ಹೆಚ್ಚಿನ ಖ್ಯಾತಿ ಪಡೆದ ಕಂಬಳ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಲಕ್ಕಿ ಡ್ರಾ ಕೂಪನ್ ವಿಜೇತರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮೊದಲ ಬಹುಮಾನವನ್ನು ಪೂಜಾ ಎಂ ವಿ ಎಂಬುವವರು ಗೆದ್ದಿದ್ದಾರೆ. ಎರಡನೇ ಬಹುಮಾನವನ್ನು ಖುಷಿ ಪೂಜಾರಿ ಎಂಬುವವರು ಗೆದ್ದಿದ್ದಾರೆ. ಮೂರನೇ ಬಹುಮಾನ ವಿಜೇತರು ಅಮೀತ. ನಾಲ್ಕನೇ ಬಹುಮಾನ ವಿಜೇತರು ನವೀನ ಎಂ ಎಲ್.

ಬಹುಮಾನವಾಗಿ ಕಾರು, ಬೈಕು

ಇನ್ನು ಮೊದಲ ಬಹುಮಾನವಾಗಿ ಗೆದ್ದವರಿಗೆ ಮಾರುತಿ ಬ್ರಿಜಾ ಕಾರು ನೀಡಲಾಗಿದೆ. ಎರಡನೇ ಬಹುಮಾನ ರಾಯಲ್ ಎನ್ಫೀಲ್ಡ್ ಬೈಕ್, ಮೂರನೇ ಬಹುಮಾನ ಹೋಂಡಾ ಶೈನ್ ಬೈಕ್, ನಾಲ್ಕನೇ ಬಹುಮಾನ ಎಲೆಕ್ಟ್ರಿಕ್ ಸ್ಕೂಟರ್ ನೀಡಲಾಯಿತು. ಬೆಂಗಳೂರು ಕಂಬಳ ಪ್ರಯಕ್ತ ಪಾಸ್ ಪಡೆದವರು ಲಕ್ಕಿ ಡ್ರಾ ಕೂಪನ್ ನ್ನು ಬಾಕ್ಸ್ ಗೆ ಹಾಕಿದ್ದರು. ಎಂಆರ್​ಜಿ ಗ್ರೂಪ್ ಪ್ರಕಾಶ್ ಶೆಟ್ಟಿ ಅವರ ಪ್ರಯೋಜಕತ್ವದಲ್ಲಿ ಲಕ್ಕಿ ಡ್ರಾ ಬಹುಮಾನ ನೀಡಲಾಯಿತು. ಪುನೀತ್ ರಾಜ್ ಕುಮಾರ್ ವೇದಿಕೆಯಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ತೆರೆ, ಫೈನಲ್​ನಲ್ಲಿ ಚಿನ್ನ ಬೇಟೆಯಾಡಿದ ಕೋಣಗಳ ವಿವರ ಇಲ್ಲಿದೆ

ಕಂಬಳ ಕೂಟದಲ್ಲಿ ಭಾಗಿಯಾಗಿದ್ದ 178 ಜೋಡಿ ಎಲ್ಲಾ ಬಹುಮಾನ ಗೆಲ್ಲಲು ಸಾಧ್ಯವಾಗದೇ ಇದ್ರೂ ಬೆಂಗಳೂರು ಕಂಬಳದಲ್ಲಿ ನೋಡುಗರ ಮನಸ್ಸು ಗೆದ್ದಿದಂತೂ ನಿಜ. ಕಾಂತರ ಚಿತ್ರದಲ್ಲಿ ಸಿನಿ ಪ್ರಿಯರ ಮನಸ್ಸು ಗೆದ್ದಿದ್ದ ಕೋಣಗಳು‌ ಜನರ ಮನಸು ಗೆಲ್ಲುವುದರ ಜೊತೆ ಜೊತೆಗೆ ಕರಾವಳಿಯ ವೈಭವವನ್ನ ಅನಾವರಣ ಮಾಡೋ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕಂಬಳದ ಕಂಪು ಹರಡಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್