Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ

ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ
ಸಾಂದರ್ಭಿಕ ಚಿತ್ರ (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)
Follow us
Ganapathi Sharma
|

Updated on: Apr 19, 2023 | 5:47 PM

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ (Karnataka Assembly Elections 2023) ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ (Liquor) ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ. ಕಳೆದ 15 ದಿನಗಳಿಂದ ಮದ್ಯಕ್ಕೆ ಶೇ 20 ರಷ್ಟು ಬೇಡಿಕೆ ಹೆಚ್ಚಳವಾಗಿದೆ. ಆದರೆ ಇದಕ್ಕೆ ತಕ್ಕ ಪೂರೈಕೆಯಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಸಂಹಿತೆ ಜಾರಿ ನಂತರ ನಿಯಮಾವಳಿ ಬಿಗಿಗೊಳಿಸಿದ ಕಾರಣ ಬಾರ್ ಹಾಗೂ ರೆಸ್ಟೋರೆಂಟ್​​ಗಳಿಗೆ ಬೇಕಾದಷ್ಟು ಪ್ರಮಾಣದಲ್ಲಿ ಮದ್ಯ ಸಿಗುತ್ತಿಲ್ಲ ಎನ್ನಲಾಗಿದೆ.

ಬೆಲೆಯೂ ಹೆಚ್ಚಳ

ಪೂರೈಕೆ ಕೊರತೆಯಾಗಿರುವುದರಿಂದ ಮದ್ಯದ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಬಿಯರ್ ಬೆಲೆ ಶೇ 10ರಿಂದ 15ರಷ್ಟು ಹೆಚ್ಚಳವಾಗಿದೆ. ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರು ಹೊರ ರಾಜ್ಯಗಳಿಂದ ಮದ್ಯ ತರಿಸಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿರುವುದರಿಂದ ದರ ಹೆಚ್ಚಳವಾಗಿದೆ ಎನ್ನಲಾಗಿದೆ.

ಸದ್ಯ ಶೇ 80 ರಷ್ಟು ಮದ್ಯ ಸ್ಟಾಕ್ ಇದ್ದು ಶೇ 20 ರಷ್ಟು ಪೂರೈಕೆ ಕಡಿಮೆಯಾಗಿದೆ. ಈ ಹಿಂದೆ ಒಂದು ತಿಗಳಿಗೆ 6 ಸಾವಿರ ಕೋಟಿಯಷ್ಟು ವಹಿವಾಟು ನಡೆಯುತ್ತಿತ್ತು. ಇದರಲ್ಲಿ ಸರ್ಕಾರಕ್ಕೆ ಎರಡೂವರೆ ಸಾವಿರ ಕೋಟಿ ರೂ.ನಷ್ಟು ವರಮಾನವನ್ನು ಸರ್ಕಾರಕ್ಕೆ ನೀಡುತ್ತಿದ್ದೆವು. ಸದ್ಯ 5 ಸಾವಿರ ಕೋಟಿ ರೂ.ನಷ್ಟು ವಹಿವಾಟು ನಡೆಯುತ್ತಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮಿತಿಮೀರಿದ ಸೇಂದಿ, ಮದ್ಯದ ಹಾವಳಿ: ಇದಕ್ಕೆ ಕಡಿವಾಣ ಹಾಕಿದವರಿಗಷ್ಟೇ ನಮ್ಮ ವೋಟ್ ಅಂತಿದ್ದಾರೆ ಮಹಿಳೆಯರು!

ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ವಶಪಡಿಸಿಕೊಳ್ಳುತ್ತಿರುವುದರಿಂದ ಶೇ 25ರಷ್ಟು ನಷ್ಟ ಉಂಟಾಗುತ್ತಿದೆ. ಹೀಗಾಗಿ ಗೋವಾ, ತಮಿಳುನಾಡು, ಆಂದ್ರದಿಂದ ಮದ್ಯ ತರಿಸಿಕೊಳ್ಳುತ್ತಿದ್ದು, ಇದರಿಂದ ಕರ್ನಾಟಕಕ್ಕೆ ನಷ್ಟ ಆಗುತ್ತಿದೆ. ಬೇಡಿಕೆ ಶೇ 20 ರಷ್ಟು ಜಾಸ್ತಿಯಾಗಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ