AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ

ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ
ಸಾಂದರ್ಭಿಕ ಚಿತ್ರ (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)
Ganapathi Sharma
|

Updated on: Apr 19, 2023 | 5:47 PM

Share

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ (Karnataka Assembly Elections 2023) ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ (Liquor) ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ. ಕಳೆದ 15 ದಿನಗಳಿಂದ ಮದ್ಯಕ್ಕೆ ಶೇ 20 ರಷ್ಟು ಬೇಡಿಕೆ ಹೆಚ್ಚಳವಾಗಿದೆ. ಆದರೆ ಇದಕ್ಕೆ ತಕ್ಕ ಪೂರೈಕೆಯಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಸಂಹಿತೆ ಜಾರಿ ನಂತರ ನಿಯಮಾವಳಿ ಬಿಗಿಗೊಳಿಸಿದ ಕಾರಣ ಬಾರ್ ಹಾಗೂ ರೆಸ್ಟೋರೆಂಟ್​​ಗಳಿಗೆ ಬೇಕಾದಷ್ಟು ಪ್ರಮಾಣದಲ್ಲಿ ಮದ್ಯ ಸಿಗುತ್ತಿಲ್ಲ ಎನ್ನಲಾಗಿದೆ.

ಬೆಲೆಯೂ ಹೆಚ್ಚಳ

ಪೂರೈಕೆ ಕೊರತೆಯಾಗಿರುವುದರಿಂದ ಮದ್ಯದ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಬಿಯರ್ ಬೆಲೆ ಶೇ 10ರಿಂದ 15ರಷ್ಟು ಹೆಚ್ಚಳವಾಗಿದೆ. ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರು ಹೊರ ರಾಜ್ಯಗಳಿಂದ ಮದ್ಯ ತರಿಸಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿರುವುದರಿಂದ ದರ ಹೆಚ್ಚಳವಾಗಿದೆ ಎನ್ನಲಾಗಿದೆ.

ಸದ್ಯ ಶೇ 80 ರಷ್ಟು ಮದ್ಯ ಸ್ಟಾಕ್ ಇದ್ದು ಶೇ 20 ರಷ್ಟು ಪೂರೈಕೆ ಕಡಿಮೆಯಾಗಿದೆ. ಈ ಹಿಂದೆ ಒಂದು ತಿಗಳಿಗೆ 6 ಸಾವಿರ ಕೋಟಿಯಷ್ಟು ವಹಿವಾಟು ನಡೆಯುತ್ತಿತ್ತು. ಇದರಲ್ಲಿ ಸರ್ಕಾರಕ್ಕೆ ಎರಡೂವರೆ ಸಾವಿರ ಕೋಟಿ ರೂ.ನಷ್ಟು ವರಮಾನವನ್ನು ಸರ್ಕಾರಕ್ಕೆ ನೀಡುತ್ತಿದ್ದೆವು. ಸದ್ಯ 5 ಸಾವಿರ ಕೋಟಿ ರೂ.ನಷ್ಟು ವಹಿವಾಟು ನಡೆಯುತ್ತಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮಿತಿಮೀರಿದ ಸೇಂದಿ, ಮದ್ಯದ ಹಾವಳಿ: ಇದಕ್ಕೆ ಕಡಿವಾಣ ಹಾಕಿದವರಿಗಷ್ಟೇ ನಮ್ಮ ವೋಟ್ ಅಂತಿದ್ದಾರೆ ಮಹಿಳೆಯರು!

ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ವಶಪಡಿಸಿಕೊಳ್ಳುತ್ತಿರುವುದರಿಂದ ಶೇ 25ರಷ್ಟು ನಷ್ಟ ಉಂಟಾಗುತ್ತಿದೆ. ಹೀಗಾಗಿ ಗೋವಾ, ತಮಿಳುನಾಡು, ಆಂದ್ರದಿಂದ ಮದ್ಯ ತರಿಸಿಕೊಳ್ಳುತ್ತಿದ್ದು, ಇದರಿಂದ ಕರ್ನಾಟಕಕ್ಕೆ ನಷ್ಟ ಆಗುತ್ತಿದೆ. ಬೇಡಿಕೆ ಶೇ 20 ರಷ್ಟು ಜಾಸ್ತಿಯಾಗಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್