AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ

ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ.

Liquor Sales: ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಶಾಕ್; ಬೇಡಿಕೆಗೆ ತಕ್ಕಷ್ಟು ಸಿಗುತ್ತಿಲ್ಲ ಮದ್ಯ
ಸಾಂದರ್ಭಿಕ ಚಿತ್ರ (ಮದ್ಯಪಾನ ಆರೋಗ್ಯಕ್ಕೆ ಹಾನಿಕರ)
ಗಣಪತಿ ಶರ್ಮಾ
|

Updated on: Apr 19, 2023 | 5:47 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ಮದ್ಯ ಪ್ರಿಯರಿಗೆ ಶಾಕ್
  • ಬೇಟಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಮದ್ಯ
  • ದರ ಹೆಚ್ಚಳದಿಂದ ಮದ್ಯ ಪ್ರಿಯರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ (Karnataka Assembly Elections 2023) ಕಾವು ಜೋರಾಗುತ್ತಿದ್ದಂತೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದ್ಯ ಪ್ರಿಯರಿಗೆ ಆಘಾತ ಎದುರಾಗಿದೆ. ಮದ್ಯಕ್ಕೆ (Liquor) ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ ಎನ್ನಲಾಗಿದೆ. ಕಳೆದ 15 ದಿನಗಳಿಂದ ಮದ್ಯಕ್ಕೆ ಶೇ 20 ರಷ್ಟು ಬೇಡಿಕೆ ಹೆಚ್ಚಳವಾಗಿದೆ. ಆದರೆ ಇದಕ್ಕೆ ತಕ್ಕ ಪೂರೈಕೆಯಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಸಂಹಿತೆ ಜಾರಿ ನಂತರ ನಿಯಮಾವಳಿ ಬಿಗಿಗೊಳಿಸಿದ ಕಾರಣ ಬಾರ್ ಹಾಗೂ ರೆಸ್ಟೋರೆಂಟ್​​ಗಳಿಗೆ ಬೇಕಾದಷ್ಟು ಪ್ರಮಾಣದಲ್ಲಿ ಮದ್ಯ ಸಿಗುತ್ತಿಲ್ಲ ಎನ್ನಲಾಗಿದೆ.

ಬೆಲೆಯೂ ಹೆಚ್ಚಳ

ಪೂರೈಕೆ ಕೊರತೆಯಾಗಿರುವುದರಿಂದ ಮದ್ಯದ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಬಿಯರ್ ಬೆಲೆ ಶೇ 10ರಿಂದ 15ರಷ್ಟು ಹೆಚ್ಚಳವಾಗಿದೆ. ಬಾರ್ ಹಾಗೂ ರೆಸ್ಟೋರೆಂಟ್ ಮಾಲೀಕರು ಹೊರ ರಾಜ್ಯಗಳಿಂದ ಮದ್ಯ ತರಿಸಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿರುವುದರಿಂದ ದರ ಹೆಚ್ಚಳವಾಗಿದೆ ಎನ್ನಲಾಗಿದೆ.

ಸದ್ಯ ಶೇ 80 ರಷ್ಟು ಮದ್ಯ ಸ್ಟಾಕ್ ಇದ್ದು ಶೇ 20 ರಷ್ಟು ಪೂರೈಕೆ ಕಡಿಮೆಯಾಗಿದೆ. ಈ ಹಿಂದೆ ಒಂದು ತಿಗಳಿಗೆ 6 ಸಾವಿರ ಕೋಟಿಯಷ್ಟು ವಹಿವಾಟು ನಡೆಯುತ್ತಿತ್ತು. ಇದರಲ್ಲಿ ಸರ್ಕಾರಕ್ಕೆ ಎರಡೂವರೆ ಸಾವಿರ ಕೋಟಿ ರೂ.ನಷ್ಟು ವರಮಾನವನ್ನು ಸರ್ಕಾರಕ್ಕೆ ನೀಡುತ್ತಿದ್ದೆವು. ಸದ್ಯ 5 ಸಾವಿರ ಕೋಟಿ ರೂ.ನಷ್ಟು ವಹಿವಾಟು ನಡೆಯುತ್ತಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮಿತಿಮೀರಿದ ಸೇಂದಿ, ಮದ್ಯದ ಹಾವಳಿ: ಇದಕ್ಕೆ ಕಡಿವಾಣ ಹಾಕಿದವರಿಗಷ್ಟೇ ನಮ್ಮ ವೋಟ್ ಅಂತಿದ್ದಾರೆ ಮಹಿಳೆಯರು!

ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ವಶಪಡಿಸಿಕೊಳ್ಳುತ್ತಿರುವುದರಿಂದ ಶೇ 25ರಷ್ಟು ನಷ್ಟ ಉಂಟಾಗುತ್ತಿದೆ. ಹೀಗಾಗಿ ಗೋವಾ, ತಮಿಳುನಾಡು, ಆಂದ್ರದಿಂದ ಮದ್ಯ ತರಿಸಿಕೊಳ್ಳುತ್ತಿದ್ದು, ಇದರಿಂದ ಕರ್ನಾಟಕಕ್ಕೆ ನಷ್ಟ ಆಗುತ್ತಿದೆ. ಬೇಡಿಕೆ ಶೇ 20 ರಷ್ಟು ಜಾಸ್ತಿಯಾಗಿದೆ ಎಂದು ಬಾರ್ ಮಾಲೀಕರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!