AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Clinic: ಗಬ್ಬೆದ್ದು ನಾರುತ್ತಿದೆ ಪಾಲಿಕೆಯ ಇಂದಿರಾ ಕ್ಲಿನಿಕ್; ಕಿತ್ತುಬಂದ ಸೀಟ್, ಮರೀಚಿಕೆಯಾದ ಶುಚಿತ್ವ

ದೂರ ದೂರದ ಊರುಗಳಿಂದ ಬರೋ ಪ್ರಯಾಣಿಕರಿಗೆ ತಕ್ಷಣ ವೈದ್ಯಕೀಯ ನೆರವು ನೀಡಬೇಕಿದ್ದ ಇಂದಿರಾ ಕ್ಲಿನಿಕ್ ಕಟ್ಟಡ ದುಸ್ಥಿತಿ ತಲುಪಿದೆ. ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ್ದ ಈ ಕ್ಲಿನಿಕ್, ಇದೀಗ ಸೂಕ್ತ ನಿರ್ವಹಣೆಯಿಲ್ಲದೇ ಸೊರಗುತ್ತಿದೆ. ಒಂದೆಡೆ ಪ್ರವೇಶದ್ವಾರದ ಮುಂಭಾಗದಲ್ಲಿ ಸೀಟ್ ಕಿತ್ತುಬಂದಿದ್ರೆ, ಎಲ್ಲೆಂದರಲ್ಲಿ ಮೂತ್ರ ವಿರ್ಸಜನೆ ಮಾಡಿರೋದರಿಂದ ಕ್ಲಿನಿಕ್ ಆವರಣ ಗಬ್ಬೆದ್ದು ನಾರುತ್ತಿದೆ.

Indira Clinic: ಗಬ್ಬೆದ್ದು ನಾರುತ್ತಿದೆ ಪಾಲಿಕೆಯ ಇಂದಿರಾ ಕ್ಲಿನಿಕ್; ಕಿತ್ತುಬಂದ ಸೀಟ್, ಮರೀಚಿಕೆಯಾದ ಶುಚಿತ್ವ
ಇಂದಿರಾ ಕ್ಲಿನಿಕ್
TV9 Web
| Edited By: |

Updated on: Dec 26, 2023 | 7:57 AM

Share

ಬೆಂಗಳೂರು, ಡಿ.26: ಬೆಂಗಳೂರಿನ ಜನರಿಗೆ ನೆರವಾಗಲಿ ಎಂದು ಇಂದಿರಾ ಕ್ಲಿನಿಕ್​ಗಳನ್ನು ತೆರೆಯಲಾಗಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಏನಾದ್ರೂ ತುರ್ತು ಚಿಕಿತ್ಸೆ ಬೇಕಿದ್ರೆ ಸಹಾಯ ಸಿಗಲಿ ಅಂತಾ ನಿರ್ಮಿಸಲಾಗಿದೆ. ಆದರೆ ಇದೀಗ ನಿರ್ವಹಣೆಯಿಲ್ಲದೇ ಇಂದಿರಾ ಕ್ಲಿನಿಕ್ ಕಟ್ಟಡ ದುಸ್ಥಿತಿ ತಲುಪಿದೆ. ಜನರಿಗೆ ಚಿಕಿತ್ಸೆ ಕೊಡೋ ಬದಲು ಆಸ್ಪತ್ರೆಗೆ ಚಿಕಿತ್ಸೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಬೆಂಗಳೂರಿನ ಹೃದಯ ಭಾಗವಾಗಿರೋ ಮೆಜೆಸ್ಟಿಕ್ ನಲ್ಲಿ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಓಡಾಡುತ್ತಾರೆ. ಬೇರೆ ಬೇರೆ ಕಡೆಯಿಂದ ಬರೋ ಪ್ರಯಾಣಿಕರಿಗೆ, ಸೇವೆಯಲ್ಲಿರೋ ಬಿಎಂಟಿಸಿ ಚಾಲಕರು, ನಿರ್ವಾಹಕರಿಗೆ ತುರ್ತು ಚಿಕಿತ್ಸೆ ಸಿಗಲಿ ಎಂದು ಪಾಲಿಕೆ ಇದೇ ಬಸ್ ನಿಲ್ದಾಣದ ಬಳಿ ನಿರ್ಮಿಸಿದ್ದ ಇಂದಿರಾ ಕ್ಲಿನಿಕ್ ಇದೀಗ ಹಳ್ಳ ಹಿಡಿತಿದೆ.

2017 ರಲ್ಲಿ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ, ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ್ದ ಈ ಕ್ಲಿನಿಕ್, ಇದೀಗ ಸೂಕ್ತ ನಿರ್ವಹಣೆಯಿಲ್ಲದೇ ಸೊರಗುತ್ತಿದೆ. ಒಂದೆಡೆ ಪ್ರವೇಶದ್ವಾರದ ಮುಂಭಾಗದಲ್ಲಿ ಸೀಟ್ ಕಿತ್ತುಬಂದಿದ್ರೆ, ಎಲ್ಲೆಂದರಲ್ಲಿ ಮೂತ್ರ ವಿರ್ಸಜನೆ ಮಾಡಿರೋದರಿಂದ ಕ್ಲಿನಿಕ್ ಆವರಣ ಗಬ್ಬೆದ್ದು ನಾರುತ್ತಿದೆ. ಪ್ರಯಾಣಿಕರಿಗೆ ತುರ್ತು ಸೇವೆ ನೀಡಬೇಕಿದ್ದ ಕ್ಲಿನಿಕ್ ಸಮಯ ನಿಗಧಿ ಮಾಡಿದ್ರೂ ಸರಿಯಾಗಿ ತೆಗೆಯುತ್ತಿಲ್ಲ ಅಂತಾ ಜನರು ಕಿಡಿಕಾರುತ್ತಿದ್ದಾರೆ.

ಸದ್ಯ ದೂರ ದೂರದ ಊರುಗಳಿಂದ ಬರೋ ಪ್ರಯಾಣಿಕರಿಗೆ ತಕ್ಷಣ ವೈದ್ಯಕೀಯ ನೆರವು ನೀಡಬೇಕಿದ್ದ ಈ ಕ್ಲಿನಿಕ್, ಇದೀಗ ಶೋಚನೀಯ ಸ್ಥಿತಿ ತಲುಪಿದ್ರು ಅಧಿಕಾರಿಗಳು ಮೌನವಹಿಸಿದ್ದಾರೆ. ಪಾಲಿಕೆ ಹಾಗೂ ಆರೋಗ್ಯಾಧಿಕಾರಿಗಳು ಇತ್ತ ಗಮನಹರಿಸಿ ಪ್ರಯಾಣಿಕರಿಗೆ ಸೇವೆ ನೀಡುವಂತೆ ವಾತಾವರಣ ನಿರ್ಮಿಸಬೇಕಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಯುವ ಸಮುದಾಯದ ಮತಬೇಟೆಗೆ ಇಳಿದ ಕಾಂಗ್ರೆಸ್, ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಇಂದಿರಾ ಕ್ಯಾಂಟೀನ್‌ ಜನಪ್ರಿಯತೆ ಪಡೆದ ಬೆನ್ನಲ್ಲೇ ಮುಂದುವರೆದ ಭಾಗವಾಗಿ ಕಾಂಗ್ರೆಸ್ ಸರ್ಕಾರ 2017ರಲ್ಲಿ ಇಂದಿರಾ ಕ್ಲಿನಿಕ್‌ಗಳನ್ನು ನಗರದ ಎರಡು ಕಡೆ ಪ್ರಾಯೋಗಿಕವಾಗಿ ಆರಂಭಿಸಿತ್ತು. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ಯಶವಂತಪುರ ಬಸ್ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಇಂದಿರಾ ಕ್ಲಿನಿಕ್‌ಗಳನ್ನು ಆರಂಭಿಸಲಾಗಿತ್ತು. ಆದರೆ ಈ ಇಂದಿರಾ ಕ್ಲಿನಿಕ್‌ಗಳು ನಿರ್ವಾಹಣೆ ಇಲ್ಲದೆ ಹೋಗಿವೆ. ಶುಚಿತ್ವ ಇಲ್ಲ. ಜನರು ಈ ಕ್ಲಿನಿಕ್​ಗೆ ಹೋಗಲು ಭಯಪಡುವಂತಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ