AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲೇಶ್ವರಂ ಕಡಲೆ ಪರಿಷೆಗೆ ದಿನಗಣನೆ: ಈ ಬಾರಿಯ ವಿಶೇಷವೇನು? ಇಲ್ಲಿದೆ ನೋಡಿ

Kadalekai Parishe: ಬಸವನಗುಡಿ ಕಡಲೆಕಾಯಿ ಪರಿಷೆಗೂ ಮುನ್ನ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಕಾಡುಮಲ್ಲೇಶ್ವರ ಗೆಳೆಯರ ಬಳಗವು ಆಯೋಜಿಸಿರುವ ಈ ಕಡಲೆ ಪರಿಷೆ ಯಾವಾಗ ಆರಂಭವಾಗಲಿದೆ, ಎಷ್ಟು ದಿನ ಇರಲಿದೆ, ಈ ಬಾರಿಯ ವಿಶೇಷವೇನು? ಎಲ್ಲ ವಿವರ ಇಲ್ಲಿದೆ.

ಮಲ್ಲೇಶ್ವರಂ ಕಡಲೆ ಪರಿಷೆಗೆ ದಿನಗಣನೆ: ಈ ಬಾರಿಯ ವಿಶೇಷವೇನು? ಇಲ್ಲಿದೆ ನೋಡಿ
ಸಂಗ್ರಹ ಚಿತ್ರ
Follow us
Ganapathi Sharma
|

Updated on:Nov 13, 2024 | 8:01 AM

ಬೆಂಗಳೂರು, ನವೆಂಬರ್ 13: ಬೆಂಗಳೂರಿನ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೂ ಕೆಲವೇ ದಿನಗಳ ಮುನ್ನ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಇಲ್ಲಿನ ಕಾಡುಮಲ್ಲೇಶ್ವರ ಗೆಳೆಯರ ಬಳಗವು ನವೆಂಬರ್ 15 ರಿಂದ 18 ರವರೆಗೆ ಮಲ್ಲೇಶ್ವರಂನಲ್ಲಿ ನಾಲ್ಕು ದಿನಗಳ ಕಡಲೆಕಾಯಿ ಪರಿಷೆಯನ್ನು ಆಯೋಜಿಸಿದೆ. ಕಡಲೆಕಾಯಿ ಪರಿಷೆ ಪ್ಲಾಸ್ಟಿಕ್ ಮುಕ್ತ ಹಾಗೂ ರೈತ ಸ್ನೇಹಿಯಾಗಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಈ ವರ್ಷ ಪ್ಲಾಸ್ಟಿಕ್ ಬದಲಿಗೆ ಕಾಗದ ಮತ್ತು ಬಟ್ಟೆಯ ಚೀಲಗಳನ್ನೇ ಬಳಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಮಾರು 40 ಸಾವಿರ ಕಾಗದದ ಚೀಲಗಳನ್ನು ಮಾರಾಟಗಾರರಿಗೆ ವಿತರಿಸಲಾಗುವುದು ಎಂದು ಕಾಡುಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿಕೆ ಶಿವರಾಂ ಮಾಹಿತಿ ನೀಡದ್ದಾರೆ. ವಿದ್ಯಾರ್ಥಿ ಸ್ವಯಂಸೇವಕರು ತಯಾರಿಸಿದ ಚೀಲಗಳು ಎರಡರಿಂದ ಮೂರು ಕಿಲೋ ಕಡಲೆಕಾಯಿಯನ್ನು ತುಂಬಿಸಬಲ್ಲದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಗದದ ಚೀಲಗಳು ಮಾತ್ರವಲ್ಲದೆ, ಹಳೆಯ ಸೀರೆಗಳು ಮತ್ತು ಇತರ ವಸ್ತುಗಳನ್ನು ಬಳಸಿ ಸುಮಾರು 6,000 ಬಟ್ಟೆ ಚೀಲಗಳನ್ನು ಸಿದ್ಧಪಡಿಸಲಾಗಿದೆ. ಈ ಚೀಲಗಳನ್ನು ಮಾರಾಟಗಾರರಿಗೆ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕಡಲೆಕಾಯಿ ಪರಿಷೆ ಹಿನ್ನೆಲೆ

ಕಡಲೆಕಾಯಿ ರೈತರು ತಮ್ಮ ಬೆಳೆಯನ್ನು ಜಾನುವಾರುಗಳಿಂದ ರಕ್ಷಿಸಿಕೊಳ್ಳಲು ಬಸವನನ್ನು ಪೂಜಿಸುತ್ತಾರೆ. ಜಾನುವಾರುಗಳು ಜಮೀನಿಗೆ ಬರುವಂತೆ ಮಾಡುವ ಶಕ್ತಿಗಳನ್ನು ಹತ್ತಿಕ್ಕಲು ರೈತರು ಸಾಂಪ್ರದಾಯಿಕವಾಗಿ ತಮ್ಮ ಮೊದಲ ಬೆಳೆಯನ್ನು ಬಸವ ದೇವರಿಗೆ ಅರ್ಪಿಸುತ್ತಾರೆ. ಇದರಿಂದ ಬೆಳೆ ರಕ್ಷಣೆಯಾಗುತ್ತದೆ ಎಂಬ ನಂಬಿಕೆ ಅವರದ್ದು. ಕಡಲೆ ಪರಿಷೆಯ ಜಾನಪದ ಹಿನ್ನೆಲೆಯಿದು ಎಂದು ಶಿವರಾಂ ವಿವರಿಸಿದ್ದಾರೆ.

ತಮಿಳುನಾಡು, ಆಂಧ್ರದಿಂದಲೂ ಬರಲಿದ್ದಾರೆ ರೈತರು

ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡು, ಆಂಧ್ರಪ್ರದೇಶದ ರೈತರು ಕೂಡ ಪರಿಷೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್​​ನ್ಯೂಸ್: ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್​

ಅಂದಹಾಗೆ, ಬಸವನಗುಡಿಯ ಕಡಲೆಕಾಯಿ ಪರಿಷೆ ನವೆಂಬರ್ 25ರಿಂದ ಆರಂಭವಾಗಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:59 am, Wed, 13 November 24

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್