AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್ನು ನೋವೆಂದು ಬಾಸ್​ಗೆ ಮೆಸೇಜ್ ಹಾಕಿ ಹತ್ತೇ ನಿಮಿಷಕ್ಕೆ ಹೃದಯಾಘಾತದಿಂದ ಬೆಂಗಳೂರಿನ ವ್ಯಕ್ತಿ ಸಾವು

40 year old youth dies of cardiac arrest: ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ಯುವಕರೊಬ್ಬರು ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಸಾಯುವ ಹತ್ತು ನಿಮಿಷ ಮುನ್ನವಷ್ಟೇ ತನಗೆ ವಿಪರೀತ ಬೆನ್ನು ನೋವಿದೆ. ರಜೆ ಕೊಡಿ ಎಂದು ಬಾಸ್​ಗೆ ಮೆಸೇಜ್ ಹಾಕಿದ್ದರು. ತಮ್ಮ ಸಹೋದ್ಯೋಗಿಯ ದಿಢೀರ್ ಸಾವು ಕಂಡು ಶಾಕ್ ಆದ ಮ್ಯಾನೇಜರ್, ಲೈಫ್ ಎಷ್ಟು ಅನಿಶ್ಚಿತ ಎಂದು ಸೋಷಿಯಲ್ ಮೀಡಿಯಾದಲ್ಲಿ ವ್ಯಥೆ ಪಟ್ಟಿದ್ದಾರೆ.

ಬೆನ್ನು ನೋವೆಂದು ಬಾಸ್​ಗೆ ಮೆಸೇಜ್ ಹಾಕಿ ಹತ್ತೇ ನಿಮಿಷಕ್ಕೆ ಹೃದಯಾಘಾತದಿಂದ ಬೆಂಗಳೂರಿನ ವ್ಯಕ್ತಿ ಸಾವು
ಹೃದಯಸ್ತಂಭನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 14, 2025 | 7:34 PM

Share

ಬೆಂಗಳೂರು, ಸೆಪ್ಟೆಂಬರ್ 14: ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ಲೇ ಇದೆ. 30-40 ವರ್ಷ ವಯಸ್ಸಿನ ಯುವಕರು ದಿಢೀರ್ ಹೃದಯಸ್ತಂಭನದಿಂದ (cardiac arrest) ನಿಧನ ಹೊಂದುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮ್ಯಾನೇಜರ್​ಗೆ ಬೆನ್ನು ನೋವಿದೆ ಎಂದು ಮೆಸೇಜ್ ಹಾಕಿ ಹತ್ತೇ ನಿಮಿಷಕ್ಕೆ ಹೃದಯಸ್ತಂಭನಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ತಂಡದ ಮ್ಯಾನೇಜರ್ ಈ ಘಟನೆಯನ್ನು ತಮ್ಮ ಎಕ್ಸ್ ಅಕೌಂಟ್​ನಲ್ಲಿ ಹಂಚಿಕೊಂಡಿದ್ದಾರೆ. ಮೃತ ಉದ್ಯೋಗಿಯ ಹೆಸರು ಶಂಕರ್ ಎಂದೆನ್ನಲಾಗಿದೆ.

‘ಸರ್, ತುಂಬಾ ಬೆನ್ನು ನೋವಿದೆ. ಇವತ್ತು ಬರೋಕ್ಕಾಗಲ್ಲ. ದಯವಿಟ್ಟು ರಜೆ ಕೊಡಿ ಎಂದು ನನ್ನ ಸಹೋದ್ಯೋಗಿ ಶಂಕರ್ ಬೆಳಗ್ಗೆ 8:37ಕ್ಕೆ ನನಗೆ ಮೆಸೇಜ್ ಮಾಡಿದರು. ಇಂಥ ರಜೆ ಮನವಿಗಳು ಸಾಮಾನ್ಯವಾದ್ದರಿಂದ ರೆಸ್ಟ್ ತಗೊಳ್ಳಿ ಎಂದು ನಾನೂ ಸಹಜವಾಗಿ ಉತ್ತರಿಸಿದೆ…

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಧಗಧಗನೆ ಹೊತ್ತಿ ಉರಿದ ಕಾರು

‘ಬೆಳಗ್ಗೆ 11 ಗಂಟೆಗೆ ನನಗೆ ಆಘಾತ ಕೊಡುವಂಥ ಕರೆ ಬಂತು. ಶಂಕತ್ ನಿಧನರಾದರು ಎಂದು ಕರೆ ಮಾಡಿದವರು ತಿಳಿಸಿದರು. ಮೊದಲಿಗೆ ನಂಬಲಾಗಲಿಲ್ಲ. ಮನೆಯ ವಿಳಾಸ ಪಡೆದು ಹೋದೆವು. ಆತ ಬದುಕಿರಲಿಲ್ಲ’ ಎಂದು ಕೆ.ವಿ. ಅಯ್ಯರ್ ತಮ್ಮ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.

ಕೆವಿ ಅಯ್ಯರ್ ಅವರ ಪೋಸ್ಟ್

ಸಿಗರೇಟ್, ಹೆಂಡ ಮುಟ್ಟುತ್ತಿರಲಿಲ್ಲ…

ಶಂಕರ್​ಗೆ 40 ವರ್ಷ ವಯಸ್ಸಾಗಿತ್ತು. ಬಹಳ ಆರೋಗ್ಯವಂತರಾಗಿದ್ದರು. ಫಿಟ್ನೆಸ್ ಕಾಯ್ದುಕೊಂಡಿದ್ದರು. ಸ್ಮೋಕಿಂಗ್ ಮಾಡುತ್ತಿರಲಿಲ್ಲ. ಹೆಂಡದಿಂದ ದೂರ ಇದ್ದರು. ಅವರಿಗೆ ಹೃದಯ ಸ್ತಂಭನ ಆಗಿರುವುದು ಅಚ್ಚರಿ ಎನಿಸಬಹುದು. ನಟ ಪುನೀತ್ ರಾಜಕುಮಾರ್ ಸೇರಿದಂತೆ ಸಾಕಷ್ಟು ಫಿಟ್ ಅಂಡ್ ಫೈನ್ ಯುವಜನರು ಈ ರೀತಿ ಕಾರ್ಡಿಯಾಕ್ ಅರೆಸ್ಟ್, ಹಾರ್ಟ್ ಅಟ್ಯಾಕ್​ಗಳಿಂದ ಮೃತಪಡುತ್ತಿರುವುದು ಸರ್ವೇಸಾಮಾನ್ಯ ಎಂಬಂತಾಗಿದೆ.

ಇದನ್ನೂ ಓದಿ: ಪಾನಿಪೂರಿ ತಿನ್ನೋ ವೇಳೆ ಗಲಾಟೆ: ಸಲ್ಮಾನ್ ಕೊಟ್ಟ ಒಂದೇ ಪಂಚ್​​​​ಗೆ ಉಸಿರು ಚೆಲ್ಲಿದ ಭೀಮ

‘ಚೆನ್ನಾಗಿ ಪ್ರಜ್ಞೆ ಇರುವ ವ್ಯಕ್ತಿ ಮೆಸೇಜ್ ಮಾಡಿ ಕೇವಲ ಹತ್ತೇ ನಿಮಿಷದಲ್ಲಿ ಕೊನೆಯುಸಿರು ಎಳೆಯುತ್ತಾರೆ ಎಂದರೆ ಶಾಕ್ ಎನಿಸುತ್ತದೆ. ಜೀವನ ಅದೆಷ್ಟು ಅನಿಶ್ಚಿತ. ನಿಮ್ಮ ಜೀವನದಲ್ಲಿ ಮುಂದಿನ ಕ್ಷಣ ಏನಾಗುತ್ತೆ ಎಂದು ನಿಮಗೆ ಗೊತ್ತೇ ಇರುವುದಿಲ್ಲ. ನಿಮ್ಮ ಸುತ್ತಲಿನ ಜನರ ಮೇಲೆ ದಯೆ ಇರಲಿ. ಜೀವನ ಇರುವವರೆಗೂ ಖುಷಿ ಖುಷಿಯಾಗಿರಿ’ ಎಂದು ಅಯ್ಯರ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ