AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ

ಸಂಜಯನಗರದಲ್ಲಿ ತೆರೆದ ಚರಂಡಿಗೆ ಬಿದ್ದು ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಕಾಲು ಮುರಿದುಕೊಂಡಿದ್ದಾರೆ. GBA ಸಿಬ್ಬಂದಿ ಹೂಳು ಎತ್ತಿದ ನಂತರ ಚೇಂಬರ್ ಮುಚ್ಚದೇ ನಿರ್ಲಕ್ಷ್ಯ ತೋರಿದ್ದೇ ದುರ್ಘಟನೆಗೆ ಕಾರಣ. ಈ ಘಟನೆ ಮಹಾನಗರ ಪಾಲಿಕೆ ಆಡಳಿತದ ಬೇಜವಾಬ್ದಾರಿತನವನ್ನು ಎತ್ತಿ ತೋರಿಸಿದ್ದು, ಸಾರ್ವಜನಿಕ ಸುರಕ್ಷತೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ
ಸಂಜಯನಗರ GBA ನಿರ್ಲಕ್ಷ್ಯ
ಅಕ್ಷಯ್​ ಪಲ್ಲಮಜಲು​​
|

Updated on: Jul 18, 2026 | 1:18 PM

Share

ಬೆಂಗಳೂರು, ಜು.18: ರಾಜಧಾನಿಯ ಸಂಜಯನಗರದಲ್ಲಿ ಮಹಾನಗರ ಜಂಟಿ ಆಡಳಿತ (ಜಿಬಿಎ) ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮತ್ತೊಂದು ಸಾರ್ವಜನಿಕ ಅವಘಡ ಸಂಭವಿಸಿದೆ. ಚರಂಡಿಯ ಹೂಳು ಎತ್ತಿದ ಬಳಿಕ ಚೇಂಬರ್ ಅನ್ನು ಮುಚ್ಚದೇ ಹಾಗೇ ಬಿಟ್ಟಿದ್ದರಿಂದಾಗಿ, ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕರ್ನಾಟಕ ರಾಜ್ಯ ಕರಕುಶಲ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಆರು ಅಡಿ ಆಳದ ಚರಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ನಿನ್ನೆ ರಾತ್ರಿ ಸಂಜಯನಗರದ ಡಾಲರ್ಸ್ ಕಾಲೋನಿ ಬಳಿ ಈ ಆಘಾತಕಾರಿ ಘಟನೆ ನಡೆದಿದ್ದು, ರಾಘವೇಂದ್ರ ಶೆಟ್ಟಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಬಿಎ ಸಿಬ್ಬಂದಿಗಳು ಇತ್ತೀಚೆಗೆ ಚರಂಡಿಯ ಹೂಳು ಎತ್ತಿ ಸ್ವಚ್ಛಗೊಳಿಸಿದ್ದರು. ಆದರೆ, ನಿಯಮದ ಪ್ರಕಾರ ಚೇಂಬರ್ ಅನ್ನು ಸರಿಯಾಗಿ ಮುಚ್ಚದೇ ಉದಾಸೀನತೆ ತೋರಿದ್ದರು. ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ಮುಖ್ಯರಸ್ತೆಯ ಫುಟ್‌ಪಾತ್ ಮೇಲೆ ಬೇಳೂರು ರಾಘವೇಂದ್ರ ಶೆಟ್ಟಿ ಅವರು ನಡೆದುಕೊಂಡು ಹೋಗುತ್ತಿದ್ದಾಗ, ಕತ್ತಲಲ್ಲಿ ತೆರೆದಿದ್ದ ಚರಂಡಿ ಕಾಣದೇ ನೇರವಾಗಿ ಒಳಗೆ ಬಿದ್ದಿದ್ದಾರೆ.

ಸುಮಾರು 6 ಅಡಿ ಆಳದ ಚರಂಡಿಗೆ ಬಿದ್ದ ರಭಸಕ್ಕೆ ರಾಘವೇಂದ್ರ ಶೆಟ್ಟಿ ಅವರ ಕಾಲಿನ ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಅವರನ್ನು ಸ್ಥಳೀಯರು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಬಿಎ ಅಧಿಕಾರಿಗಳ ಜೀವವಿರೋಧಿ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಸಂಜಯನಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ.

ಸಾರ್ವಜನಿಕರ ಪ್ರಾಣಕ್ಕೆ ಕುತ್ತು ತರುತ್ತಿರುವ ಜಿಬಿಎ ಕಮಿಷನರ್, ಸಂಬಂಧಪಟ್ಟ ಇಲಾಖೆಯ ಮುಖ್ಯ ಎಂಜಿನಿಯರ್, ಕಾಮಗಾರಿ ನಡೆಸಿದ ಕಂಟ್ರಾಕ್ಟರ್ ಹಾಗೂ ನಿರ್ಲಕ್ಷ್ಯಕ್ಕೆ ಕಾರಣರಾದ ನಗರಾಭಿವೃದ್ಧಿ ಸಚಿವರ ಮೇಲೂ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: “ಬಟ್ಟೆ ಗಂಟು ಬಿಚ್ಚಿದರೆ ರಕ್ತ ವಾಂತಿ ಮಾಡಿ ಸಾಯ್ತೀಯಾ” ಎಂದು ಹೆದರಿಸಿ ಬಂಗಾರ, ನಗದು ದೋಚಿದ ಬೆಂಗಳೂರಿನ ನಕಲಿ ಸ್ವಾಮೀಜಿ

ಸಾರ್ವಜನಿಕರ ತೀವ್ರ ಆಕ್ರೋಶ:

ರಾಜಧಾನಿಯ ಫುಟ್‌ಪಾತ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಜಿಬಿಎ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕರು ಓಡಾಡುವ ಫುಟ್‌ಪಾತ್‌ಗಳ ಮೇಲೆ ಬೀದಿ ವ್ಯಾಪಾರಿಗಳು ಅಕ್ರಮವಾಗಿ ಜಾಗ ಆಕ್ರಮಿಸಿಕೊಳ್ಳುತ್ತಿದ್ದಾರೆ, ಮತ್ತೊಂದೆಡೆ ಅಧಿಕಾರಿಗಳು ಇಂತಹ ಅಪಾಯಕಾರಿ ಚರಂಡಿಗಳನ್ನು ತೆರೆದಿಟ್ಟು ಪಾದಚಾರಿಗಳ ಪ್ರಾಣದ ಜೊತೆ ಆಟವಾಡುತ್ತಿದ್ದಾರೆ. ಕೂಡಲೇ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಇಡೀ ನಗರದಾದ್ಯಂತ ಫುಟ್‌ಪಾತ್‌ಗಳನ್ನು ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ವಿಕಾಸ್ ಟಿವಿ9 ಕನ್ನಡ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ