AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?

ಜೀವನದಲ್ಲಿ ಹಠಬೇಕು, ಸಾಧಿಸುವವರೆಗೆ ಅಥವಾ ಗೆಲ್ಲುವವರೆಗೆ ಪ್ರಯತ್ನ ಬಿಡಬಾರದು ಎಂಬುದಕ್ಕೆ ವರುಣ್ ಅಗರ್ವಾಲ್ ಜೀವಂತ ಉದಾಹರಣೆ ನೋಡಿ. ಬೆಂಗಳೂರು ಮೂಲದ ವರುಣ್ ತಾನು ಖಿನ್ನತೆಯಿಂದ ಹೊರಬಂದ ಕಥೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರ ಪ್ರಯತ್ನಕ್ಕೆ ಹಾಗೂ ಅವರ ಹೋರಾಟಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ

4 ವರ್ಷಗಳ ಕಾಲ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ, ಅದರಿಂದ ಹೊರಬಂದದ್ದು ಹೇಗೆ ಗೊತ್ತಾ?
ವೈರಲ್​ ಪೋಸ್ಟ್
ಅಕ್ಷಯ್​ ಪಲ್ಲಮಜಲು​​
|

Updated on:Oct 13, 2025 | 11:29 AM

Share

ಬೆಂಗಳೂರು, ಅ.13: ಬೆಂಗಳೂರು (Bangalore) ಮೂಲದ ವ್ಯಕ್ತಿಯೊಬ್ಬರು ತಾನು ಖಿನ್ನತೆಯಿಂದ ಹೊರಬಂದ ಕಥೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್​ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ತಮ್ಮ ಎಕ್ಸ್​​ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಮಾನಸಿಕ ಆರೋಗ್ಯ, ಅದರಿಂದ ಆಗಿರುವ ನಷ್ಟ, ಈ ಖಿನ್ನತೆಯಿಂದ ಹೊರಗೆ ಬರಲು ನಾಲ್ಕು ವರ್ಷಗಳ ಕಾಲ ನಿರಂತರ ಹೋರಾಟದ ಬಗ್ಗೆ ಹಂಚಿಕೊಂಡಿದ್ದಾರೆ. ವರುಣ್ ಅಗರ್ವಾಲ್ ( Varun Agarwal) ಎಂಬುವವರು ತಮ್ಮ ಜೀವನದಲ್ಲಾದ ಕರಾಳ ಕ್ಷಣವನ್ನು ಹಾಗೂ ಭಯಾನಕತೆಯನ್ನು ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ. ತನ್ನ ನೈಜ ಜೀವನದ ಕೊನೆಯ ಕೆಲವು ವರ್ಷಗಳು ನಷ್ಟ ಮತ್ತು ಹತಾಶೆಗಳು ಹೇಗಿತ್ತು ಎಂಬುದನ್ನು ಹಂಚಿಕೊಂಡಿದ್ದಾರೆ. ವೈದ್ಯಕೀಯ ಚಿಕಿತ್ಸೆಯ ನಂತರ ಖಿನ್ನತೆಯಿಂದ ಹೊರ ಬರುಲು ತಾನು ಮಾಡಿದ ಹೋರಾಟದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಎಕ್ಸ್​​ನಲ್ಲಿ ಹೀಗೆ ಬರೆದುಕೊಂಡಿದ್ದಾರೆ, “ಎಲ್ಲರಿಗೂ ನಮಸ್ಕಾರ, ನಾನು ಮತ್ತೆ ಬಂದಿದ್ದೇನೆ, ಕಳೆದ ನಾಲ್ಕರಿಂದ ಐದು ವರ್ಷಗಳು ಕಷ್ಟಕರವಾದ ಜೀವನ ನಡೆಸಿದ್ದೇನೆ. ನಾನು ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ, ಅಲ್ಲಿಂದ ತನ್ನ ಜೀವನದಲ್ಲಿ ಹೇಗೆ ಕತ್ತಲು ಆವರಿಸಿತ್ತು ಎಂಬುದನ್ನು ವಿವರವಾಗಿ ಇಲ್ಲಿ ತಿಳಿಸಿದ್ದಾರೆ. ಬಹಳ ಕಡಿಮೆ ಅವಧಿಯಲ್ಲಿ, ನಾನು ನನ್ನ ಕೆಲಸ, ನನ್ನ ಹೆಸರು, ನನ್ನ ಗುರುತು, ನನ್ನ ನೆಟ್‌ವರ್ಕ್ ಅನ್ನು ಕಳೆದುಕೊಂಡೆ. ಇದು ನಾಲ್ಕರಿಂದ ಐದು ವರ್ಷಗಳ ಕಾಲ ಮುಂದುವರಿದಿತ್ತು. ಈ ನೋವಿನ ನಡುವೆ ನನ್ನ ಸಹೋದರನನ್ನು ಕೋವಿಡ್‌ನಿಂದ ಕಳೆದುಕೊಂಡೆ” ಎಂದು ವರುಣ್ ಅಗರ್ವಾಲ್ ಹೇಳಿಕೊಂಡಿದ್ದಾರೆ.

ವೈರಲ್​​​ ಪೋಸ್ಟ್ ಇಲ್ಲಿದೆ ನೋಡಿ:

ತನ್ನ ಮಾನಸಿಕ ನೋವಿನ ಕರಾಳತೆ ಎಷ್ಟಿತ್ತು ಎಂಬುದನ್ನು ವಿವರಿಸಿದ್ದಾರೆ. ಖಿನ್ನತೆಯು ನನ್ನ ಜೀವನದಲ್ಲಿ ನಾನು ಎದುರಿಸಿದ ಅತ್ಯಂತ ಕಠಿಣ ವಿಷಯಗಳಲ್ಲಿ ಒಂದಾಗಿದೆ. ಹಾಸಿಗೆಯಿಂದ ಏಳುಲು ಕಷ್ಟವಾಗಿತ್ತು. ಯಾವುದೇ ಕೆಲಸ ಮಾಡಲು ಆಗುತ್ತಿರಲಿಲ್ಲ. ಒಂದೇ ಕಡೆ ಇರುವ ಕಾರಣ ಏನೇನೋ ಯೋಚನೆ, ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಎಂಬ ಆಲೋಚನೆ ಕೂಡ ಬಂದಿತ್ತು. ನನಗೆ ಅದು ನರಕದಲ್ಲಿರುವಂತೆ ಅನ್ನಿಸುತ್ತಿತ್ತು. ಈ ನಾಲ್ಕು ವರ್ಷಗಳ ಕಾಲ ಪ್ರತಿ ಸೆಕೆಂಡ್, ಪ್ರತಿ ಗಂಟೆ, ಪ್ರತಿ ದಿನ ಮತ್ತು ಪ್ರತಿ ವಾರ ಇದನ್ನು ಊಹಿಸಲಾಗುತ್ತಿಲ್ಲ ಎಂದು ಹೇಳಿದ್ದಾರೆ. ಅರುಣ್ ನಂತರದಲ್ಲಿ ತನ್ನ ಜೀವನದಲ್ಲಿ ಆಗಿರುವ ಬದಲಾವಣೆ ಬಗ್ಗೆ ಹಂಚಿಕೊಂಡಿದ್ದಾರೆ. ಈ ನಾಲ್ಕು ವರ್ಷಗಳಲ್ಲಿ ನಾನು ಅನುಭವಿಸಿದ ನೋವುಗಳಿಂದ ಹೊರ ಬರಲು ಅನೇಕ ರೀತಿಯಲ್ಲಿ ಪ್ರಯತ್ನಪಡಟ್ಟಿದ್ದೇನೆ. ಖಿನ್ನತೆಗೆ ಒಳಗಾಗುವ ಮೊದಲು ನಾನು ಪಡೆದ ಎಲ್ಲವನ್ನು ಈ ಖಿನ್ನತೆಯಿಂದ ಕಳೆದುಕೊಂಡೆ, ಮತ್ತೆ ಅದನ್ನು ಪಡೆಯಲು ಒದ್ದಾಡಿದ್ದೇನೆ ಎಂದು ವರಣ್ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮ್ಯಾಪಲ್ಸ್ ಆ್ಯಪ್​ನಲ್ಲಿ ಸಿಗುತ್ತೆ ಬೆಂಗಳೂರು ಟ್ರಾಫಿಕ್ ಸಿಗ್ನಲ್ ಟೈಮಿಂಗ್ಸ್ ಲೈವ್ ಮಾಹಿತಿ! ದೇಶದಲ್ಲೇ ಮೊದಲು

ಆದರೆ ಒಂದು ಮಾತ್ರ ಸತ್ಯ, ನಾನು ಇನ್ನೂ ಜೀವಂತವಾಗಿದ್ದೇನೆ. ಸತ್ತಿಲ್ಲ ಎಂಬುದು ನನಗೆ ಮನವರಿಕೆಯಾಗಿತ್ತು. ಯಾಕೆ ಎಲ್ಲದಕ್ಕೂ ಯೋಚನೆ ಮಾಡಬೇಕು. ಮತ್ತೆ ಅದೇ ಕೆಲಸ ಪಡೆಯಬೇಕು, ನನ್ನವರನ್ನು ಮರಳಿ ಪಡೆಯಬೇಕು ಎಂಬ ಹಂಬಲ ಹೆಚ್ಚಾಯಿತು. ಅಲ್ಲಿಂದ ನನ್ನ ಹೊಸ ಜೀವನ ಆರಂಭವಾಗಿತ್ತು. ಈ ಖಿನ್ನತೆಯಿಂದ ನನ್ನ ಜೀವನ ಇಲ್ಲಿಗೆ ಮುಗಿಯಿತು ಎಂದು ಅನ್ನಿಸಿದ್ದು ನಿಜ, ಯಮ ಬಳಿ ಹೋಗಿ ಬಂತೆ ಅನ್ನಿಸಿತ್ತು. ಆದರೆ ನಾನು ಹೋರಾಟ ಮಾಡಿದೆ. ಜೀವನವನ್ನು ಗೆಲ್ಲಬೇಕು ಎಂಬ ಹಠ ನನಗೆ ಈ ಕಾಯಿಲೆ ನೀಡಿದ ದೊಡ್ಡ ಪಾಠ ಎಂದು ಹೇಳಿದ್ದಾರೆ.

ಇನ್ನು ಈ ಪೋಸ್ಟ್​​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ನೀವು ಯಾರೆಂದು ನನಗೆ ತಿಳಿದಿಲ್ಲ, ಆದರೆ ನಿಮ್ಮ ಪೋಸ್ಟ್ ನನ್ನ ಕಣ್ಣಿಗೆ ಬಿತ್ತು. ಪ್ರೀಯ ಅಪರಿಚಿತರೇ, ನಾನು ನಿಮಗಾಗಿ ಪ್ರಾರ್ಥಿಸುತ್ತೇನೆ, ನೀವು ಮತ್ತೆ ಎಲ್ಲವನ್ನು ಪಡೆಯಬೇಕು ಎಂಬುದು ನನ್ನ ಬಯಕೆ ಎಂದು ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದಾರೆ. ಹಾಯ್ ವರುಣ್ ಈಗ ಎಲ್ಲವೂ ಸರಿಯಾಗಿದೆ ಎಂದು ನಾನು ಭಾವಿಸುತ್ತೇನೆ. ನನಗೆ ತಿಂಗಳುಗಟ್ಟಲೆ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದವು, ಹಾಗಾಗಿ ಅದರ ನೋವು ಹೇಗಿರುತ್ತದೆ ಎಂಬುದು ನನಗೆ ತಿಳಿದಿದೆ. ನೀವು ಖಂಡಿತ ಮತ್ತೆ ಮೊದಲಿನಂತೆ ಆಗುತ್ತಿರಿ, ಎಲ್ಲದಕ್ಕೂ ಸಮಯ ಬೇಕು ಎಂದು ಮತ್ತೊಬ್ಬ ಬಳಕೆದಾರ ಕಮೆಂಟ್ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Mon, 13 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ