AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

Bengaluru Metro Ticket Price: ಬೆಂಗಳೂರು ಮೆಟ್ರೋ ಟಿಕೆಟ್ ದರವನ್ನು ಶೇ 5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಒಪ್ಪಿಗೆ ನೀಡಿದೆ. ಆದರೆ ಇದು ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಕಳೆದ ವರ್ಷದ ದರ ಏರಿಕೆಯಿಂದ ಬೇಸತ್ತಿರುವ ಪ್ರಯಾಣಿಕರು ಮತ್ತೊಂದು ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ತಪ್ಪು ಲೆಕ್ಕಾಚಾರ ಸರಿಪಡಿಸಿ, ಹಿಂದೆ ಮಾಡಿದ್ದ ಹೆಚ್ಚಳವನ್ನು ಮೊದಲು ಇಳಿಸುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದರು. ಆದರೂ ಇದೀಗ ಮೆಟ್ರೋ ದರ ಏರಿಕೆಗೆ ಹಸಿರು ನಿಶಾನೆ ಲಭಿಸಿದೆ.

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?
ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?
Kiran Surya
| Edited By: |

Updated on:Feb 04, 2026 | 11:01 AM

Share

ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ101.5ರಷ್ಟು ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಮೂರು ದಿನಗಳಲ್ಲೇ ದರವನ್ನು ಶೇ.71.5ಕ್ಕೆ ಇಳಿಸಲಾಗಿತ್ತು. ಆ ಘಟನೆ ಇನ್ನೂ ಪ್ರಯಾಣಿಕರ ಮನಸ್ಸಿಂದ ಮಾಸುವ ಮೊದಲೇ ಮತ್ತೆ ದರ ಏರಿಕೆಯ ಚರ್ಚೆ ಆರಂಭವಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಶೇ 5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ಸರ್ಕಾರದ ಅಂತಿಮ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ. ಪ್ರಯಾಣಿಕರ ವಿರೋಧದ ನಡುವೆಯೂ ದರ ಏರಿಕೆಗೆ ನಿಗಮ ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.

ದರ ಏರಿಕೆ ವಿರೋಧಿಸಿದ್ದ ಸಂಸದ ತೇಜಸ್ವಿ ಸೂರ್ಯ

ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ ಅಧಿಕಾರಿಗಳು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲದ ನಡುವೆ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದರು. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರವನ್ನೂ ಬರೆದಿದ್ದರು.

ಇದನ್ನೂ ಓದಿ Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ನಿಗಮದ ಈ ನಿರ್ಧಾರದ ಕುರಿತು ಪ್ರಯಾಣಿಕರೂ ಆಕ್ರೋಶ ಹೊರಹಾಕಿದ್ದರು. ಈ ವರ್ಷ ಮಾಡಿರುವ ದರ ಏರಿಕೆ ತಪ್ಪಿನಿಂದ ಮುಂದಿನ ವರ್ಷಗಳಲ್ಲೂ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ಆಗಲಿದೆ. ಮೊದಲು ತಪ್ಪು ಲೆಕ್ಕ ಕೊಟ್ಟು ಏರಿಕೆ ಮಾಡಿರುವ ದರವನ್ನು ಇಳಿಸಲಿ,ನಂತರ ಪ್ರತಿವರ್ಷ ಬೇಕಾದರೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಎಲ್ಲಾ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ನಿಗಮ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:48 am, Wed, 4 February 26

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​