AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಪೂರ್ತಿ ಆಗುವ ಮಾಲಿನ್ಯ ಗಣೇಶ ಹಬ್ಬದಂದೇ ನೆನಪಾಗುವುದೇಕೆ? ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶ್ನೆ

ಗಣೇಶ ಆಚರಣೆಗೆ ನಿರ್ಬಂಧ ಹೇರಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿರುವ ಅವರು, ಗಣಪತಿ ಹಬ್ಬದ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಆಚರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವರ್ಷಪೂರ್ತಿ ಆಗುವ ಮಾಲಿನ್ಯ ಗಣೇಶ ಹಬ್ಬದಂದೇ ನೆನಪಾಗುವುದೇಕೆ? ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶ್ನೆ
ಗಣೇಶ
TV9 Web
| Updated By: Praveen Sahu|

Updated on:Sep 07, 2021 | 8:57 PM

Share

ಬೆಂಗಳೂರು: ಅರಿಶಿನ ಗಣಪತಿ ಮಾತ್ರ ಪ್ರತಿಷ್ಠಾಪಿಸಿ ಎಂಬ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿಯನ್ನು ತಿರಸ್ಕರಿಸಿದ್ದಾಗಿ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ತಿಳಿಸಿದೆ. ಈಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು, ವರ್ಷಪೂರ್ತಿ ವಿವಿಧ ಕಾರಣಗಳಿಂದಾಗಿ ಪರಿಸರ ಮಾಲಿನ್ಯವಾಗುತ್ತದೆ. ಆದರೆ ಗಣಪತಿ ಹಬ್ಬ ಬಂದಾಗ ಮಾತ್ರ ಮಾಲಿನ್ಯದ ಎಂದು ನೆನಪಿಗೆ ಬರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ? ಅಲ್ಲದೇ, ಈ ರೀತಿ ಬುದ್ದಿವಾದ ಹೇಳುವುದನ್ನೂ ಬಿಡುವಂತೆ ಅವರು ಮನವಿ ಮಾಡಿದ್ದಾರೆ. ಎನ್.ಡಿ.ಎ. ಆಕ್ಟ್ ಉಲ್ಲಂಘಿಸಿ ನಾವು ಗಣಪತಿಯನ್ನ ಕೂರಿಸುತ್ತೇವೆ. ಸರ್ಕಾರ ಪ್ರಕರಣ ದಾಖಲಿಸಿದರೂ ನಾವು ಹೆದರುವುದಿಲ್ಲ ಎಂದು ಅವರು ತಮ್ಮ ನಿಲುವನ್ನು ತಿಳಿಸಿದ್ದಾರೆ.

ಒಂದಾನುವೇಳೆ ಸರ್ಕಾರ ಕೊವಿಡ್ ಲಸಿಕಾ ಅಭಿಯಾನಕ್ಕೆ ಅವಕಾಶ ಮಾಡಿಕೊಟ್ಟರೆ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಅಭಿಯಾನ ನಡೆಸಲಿದೆ. ಈಗಾಗಲೇ ಶಾಲೆಗಳು ಆರಂಭವಾಗಿವೆ. ಉದ್ಯಮಗಳು ಸಹಜ ಸ್ಥಿತಿಗೆ ಜನಜೀವನ ಹಿಂತಿರುಗುತ್ತಿದೆ. ಕೊವಿಡ್ ನಿಯಮ ಪಾಲನೆ ಮಾಡುವ ಕುರಿತು ಜನರಲ್ಲಿ ಜಾಗೃತಿ ಬಂದಿದೆ. ಈಗಾಗಲೇ ಸಾರ್ವಜನಿಕರು ಸರ್ಕಾರದ ನಿಯಮ ಪಾಲನೆ ಮಾಡುತ್ತಿದ್ದಾರೆ. ಹೀಗಿದ್ದರೂ ಗಣೇಶ ಆಚರಣೆಗೆ ನಿರ್ಬಂಧ ಹೇರಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿರುವ ಅವರು, ಗಣಪತಿ ಹಬ್ಬದ ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಆಚರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 

ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್

ವಿನಾಯಕ ಚತುರ್ಥಿಗೆ ಈ ಬಾರಿ ಮುಹೂರ್ತ ಯಾವುದು, ಗಣೇಶನನ್ನು ಕೂಡಿಸುವುದು ಹೇಗೆ, ಪೂಜಾ ವಿಧಾನ ಹೇಗೆ?

Published On - 3:21 pm, Wed, 1 September 21

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​