AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಚಲಾಯಿಸುವಾಗ ಅತಿಯಾದ ಮೊಬೈಲ್ ಬಳಕೆ; 10 ತಿಂಗಳಲ್ಲಿ 38 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲು

ಬೆಂಗಳೂರಿನಲ್ಲಿ ಟ್ರಾಫಿಕ್​ ಜಾಮ್​​ನಲ್ಲಿ ಕಾಲ ಕಳೆಯುವ ವಾಹನ ಸವಾರರು, ವಿಶೇಷವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಮೊಬೈಲ್​ ಗೀಳಿಗೆ ಬಿದ್ದಿದ್ದಾರೆ. ಚಾಲನೆ ವೇಳೆ ಸಾಮಾಜಿಕ ಜಾಲತಾಣ ವೀಕ್ಷಣೆ ಮಾಡುತ್ತಿರುವುದರಿಂದ ಇತರ ಪ್ರಯಾಣಿಕರು ಮತ್ತು ಪಾದಾಚಾರಿಗಳ ಸುರಕ್ಷತೆಗೆ ಧಕ್ಕೆ ಬರುವ ಸಾಧ್ಯತೆ ಇದೆ. ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಈ ಕುರಿತು ಕಠಿಣ ಕ್ರಮಗಳ ಅಗತ್ಯವಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೆಂಗಳೂರು: ವಾಹನ ಚಲಾಯಿಸುವಾಗ ಅತಿಯಾದ ಮೊಬೈಲ್ ಬಳಕೆ; 10 ತಿಂಗಳಲ್ಲಿ 38 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲು
ವಾಹನ ಚಲಾಯಿಸುವಾಗ ಅತಿಯಾದ ಮೊಬೈಲ್ ಬಳಕೆ
ಭಾವನಾ ಹೆಗಡೆ
|

Updated on:Nov 11, 2025 | 8:34 AM

Share

ಬೆಂಗಳೂರು, ನವೆಂಬರ್ 11: ಬೆಂಗಳೂರಿನಲ್ಲಿ ಗಂಟೆಗಟ್ಟಲೆ ಟ್ರಾಫಿಕ್​​ ಜಾಮ್​​ನಲ್ಲೇ  (Bengaluru Traffic) ಕಾಲ ಕಳೆಯುವುದು ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಸಾಮಾನ್ಯವಾಗಿದೆ. ಈ ಸಮಯದಲ್ಲಿ ಟೈಮ್​ ಪಾಸ್​ ಮಾಡಲು ಮೊಬೈಲ್ ಹಿಡಿದು ಕೂರುತ್ತಾರೆ. ಹೀಗೆ ಮೊಬೈಲ್​ ಗೀಳಿಗೆ ಬಿದ್ದಿರುವ ವಾಹನ ಸವಾರರು ಅಪಾಯಕಾರಿ ಪ್ರವೃತ್ತಿಗೆ ಜಾರುತ್ತಿದ್ದಾರೆ. ಈ ಕುರಿತಂತೆ ಬೆಂಗಳೂರು ಟ್ರಾಫಿಕ್​ ಪೊಲೀಸರ ಅಂಕಿ ಅಂಶ ಎಲ್ಲರನ್ನು ಆತಂಕಕ್ಕೆ ದೂಡುತ್ತಿದೆ.

10 ತಿಂಗಳಲ್ಲಿ 38 ಸಾವಿರಕ್ಕೂ ಹೆಚ್ಚು ಪ್ರಕರಣ

​​ ಬೆಂಗಳೂರಿನ ಆಟೋ ಮತ್ತು ಕ್ಯಾಬ್ ಚಾಲಕರಲ್ಲಿ ಸ್ಕ್ರೀನ್ ವ್ಯಸನವು ರಸ್ತೆ ಸುರಕ್ಷತೆಗೆ ಧಕ್ಕೆ ತರುತ್ತಿದೆ. ಸಂಚಾರ ಪೊಲೀಸರು 2025 ರ ಜನವರಿ ಮತ್ತು ಅಕ್ಟೋಬರ್​​​​ ನಡುವೆ ಒಟ್ಟಾರೆಯಾಗಿ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಯ 38,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ನೇವಿಗೇಷನ್​ಗೆ ಮಾತ್ರವಲ್ಲದೆ ಸಾಮಾಜಿಕ ಜಾಲತಾಣದ ಇನ್ಸ್​​ಟಾಗ್ರಾಮ್​​​​​ ರೀಲ್ಸ್​​, ಯೂಟ್ಯೂಬ್​ ವಿಡಿಯೋಸ್​​, ಶಾರ್ಟ್ಸ್​​​​ ನೋಡುತ್ತಾ ಚಾಲನೆ ಮಾಡುವ ಪ್ರವೃತ್ತಿ ಅತಿಯಾಗಿರುವುದು ರಸ್ತೆ ಸುರಕ್ಷತೆ ಬಗ್ಗೆ ಆತಂಕ ಮೂಡಿಸಿದೆ.

ಇದನ್ನೂ ಓದಿ ಬೆಂಗಳೂರು ಟ್ರಾಫಿಕ್ ನಿಭಾಯಿಸಲು ‘ಕೋಬ್ರಾ ಬೀಟ್’! ಏನಿದು ಹೊಸ ವ್ಯವಸ್ಥೆ?

ಕಠಿಣ ಕ್ರಮ ಜಾರಿಗೆ ಆಗ್ರಹ

ಬೆಂಗಳೂರಿನ ಸಂಚಾರ ಸಮಸ್ಯೆಗಳು ವಾಹನ ನೋಂದಣಿಯಲ್ಲಿನ ತೀವ್ರ ಏರಿಕೆಯಿಂದ ಮತ್ತಷ್ಟು ಜಟಿಲಗೊಂಡಿವೆ. ಈ ಏರಿಕೆಯು ಅಸ್ತಿತ್ವದಲ್ಲಿರುವ ರಸ್ತೆ ಸುರಕ್ಷತಾ ಸವಾಲುಗಳನ್ನು ಇನ್ನಷ್ಟು ಉಲ್ಬಣಗೊಳಿಸುತ್ತಿದೆ. ಇದರ ಮಧ್ಯೆ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಚಾಲಕರು ಪಾದಾಚಾರಿಗಳ ಸಂಚಕಾರಕ್ಕೂ ಕಾರಣರಾಗುತ್ತಿದ್ದಾರೆ. ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳ ಜಾರಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:33 am, Tue, 11 November 25

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!