AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ!

ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಸದಾ ಟ್ರಾಫಿಕ್ ಜಾಮ್ ಗೊಳು ಇದ್ದಿದ್ದೇ. ಆದರೆ, ಇದೀಗ ಸಂಚಾರ ದಟ್ಟಣೆ ಸಮಸ್ಯೆ ಜತೆಗೆ ಹೊಸದೊಂದು ಸೇರಿಕೊಂಡಿದೆ. ಜಯನಗರ, ಜೆಪಿ ನಗರ ವ್ಯಾಪ್ತಿಯಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ವಾಹನ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿದೆ. ಹಾಗಾದರೆ ಏನದು ಸಮಸ್ಯೆ? ತಿಳಿಯಲು ಮುಂದೆ ಓದಿ.

ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ!
ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ! (ಸಾಂದರ್ಭಿಕ ಚಿತ್ರ)
Vinayak Hanamant Gurav
| Edited By: |

Updated on: Jul 04, 2024 | 6:51 AM

Share

ಬೆಂಗಳೂರು, ಜುಲೈ 4: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ಎಲ್ಲಿ ನೋಡಿದರೂ ಟ್ರಾಫಿಕ್ ಸಮಸ್ಯೆ ಇದ್ದಿದ್ದೇ. ಇದರ ನಡುವೆ ಇದೀಗ ಬೀದಿ ದನಗಳಿಂದಾಗಿ ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅತ್ತ ಟ್ರಾಫಿಕ್ ಪೊಲೀಸರು ಕೂಡ ಬೀದಿ ದನಗಳ ನಿಯಂತ್ರಣಕ್ಕೆ ಪಾಲಿಕೆಗೆ ಪತ್ರ ಬರೆದಿದ್ದಾರೆ.

ಈ ಬೀದಿ ಬದಿಯ ದನಗಳು ರಾಜಾರೋಷವಾಗಿ ರಸ್ತೆಯ ಮಧ್ಯೆ ಎಲ್ಲೆಂದರಲ್ಲಿ ಹೇಗೆ ಬೇಕೊ ಹಾಗೇ ಓಡಾಡುವುದರಿಂದ, ಮಲಗುವುದರಿಂದ ಸಾರ್ವಜನಿಕರು, ಶಾಲಾ ಮಕ್ಕಳು, ವಾಹನ ಸವಾರರು ರಸ್ತೆಯಲ್ಲಿ ಓಡಾಡಲು ಕೂಡ ಭಯ ಪಡುವಂತಾಗಿದೆ. ಈ ದನಗಳಿಗೆ ಯಾರು ಇಲ್ಲ ಅಂತ ಅಲ್ಲ, ಇವುಗಳಿಗೆ ಮಾಲೀಕರು ಕೂಡ ಇದ್ದಾರೆ. ಅವರು ಅವುಗಳನ್ನ ಲಂಗು ಲಗಾಮು ಇಲ್ಲದ ಹಾಗೇ ಬಿಟ್ಟು ಬಿಡುತ್ತಾರೆ. ಇದರಿಂದ ದನಗಳು ಆಹಾರ ಅರಸಿ ಮಾರುಕಟ್ಟೆ ಪ್ರದೇಶ, ಸಾರ್ವಜನಿಕರು ಕಸ ಎಸೆಯುವಂತಹ ಪ್ರದೇಶಗಳಲ್ಲಿ ಓಡಾಡುವುತ್ತವೆ.

ರಸ್ತೆಯಲ್ಲಿ ಓಡಾಡುವ ದನಗಳು ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗುವುದಲ್ಲದೇ ಇನ್ನಿತರ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ವಾಹನ ಸವಾರ ಮಹೇಶ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಯನಗರ ವ್ಯಾಪ್ತಿಯಲ್ಲಿ ಅಪಘಾತ ಹೆಚ್ಚಳ, ದನಗಳೇ ಕಾರಣ

ಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ಹೆಚ್ಚುತ್ತಿರುವುದರಿಂದ ಪೊಲೀಸರಿಗೆ ಟೆನ್ಷನ್ ಹೆಚ್ಚಾಗಿದೆ. ಈ ಬಗ್ಗೆ ತಲೆ ಕೆಡಿಸಿಕೊಂಡು ರಹಸ್ಯ ಭೇದಿಸಲು ಹೊರಟ ಸಂಚಾರಿ ಪೊಲೀಸರಿಗೆ ಕಂಡಿದ್ದು ದನಗಳ ಕಾಟದ ದೃಶ್ಯ. ರಸ್ತೆಯಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದ್ದು, ಸವಾರರಿಗೆ ತೊಂದರೆಗಳಾಗುತ್ತಿವೆ. ದನಗಳ ಕಾಟ ತಪ್ಪಿಸಲು ಹೋಗಿ ಚಾಲಕರು, ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಇಂತಹ ಬಿಡಾಡಿ ದನಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳುವಂತೆ ಜಯನರ ಟ್ರಾಫಿಕ್ ಇನ್ಸೆಕ್ಟರ್​​ ಪತ್ರ ಮೂಲಕ ಬಿಬಿಎಂಪಿ ಮುಖ್ಯ ಪಶು ವೈಧ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳ ಬೆಲೆ ಹೆಚ್ಚಳಕ್ಕೆ ಕಡಿವಾಣ; ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಟ್ರಾಫಿಕ್ ಸಮಸ್ಯೆ ಮಧ್ಯೆ ಬಿಬಿಎಂಪಿ ಅಧಿಕಾರಿಗಳ ಜಾಣಕುರುಡುತನದಿಂದ ಬೀದಿ ಬದಿಯ ದನಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇನ್ನಾದರೂ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಯಲ್ಲಿ ಓಡಾಡುವ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?