AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ!

ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಸದಾ ಟ್ರಾಫಿಕ್ ಜಾಮ್ ಗೊಳು ಇದ್ದಿದ್ದೇ. ಆದರೆ, ಇದೀಗ ಸಂಚಾರ ದಟ್ಟಣೆ ಸಮಸ್ಯೆ ಜತೆಗೆ ಹೊಸದೊಂದು ಸೇರಿಕೊಂಡಿದೆ. ಜಯನಗರ, ಜೆಪಿ ನಗರ ವ್ಯಾಪ್ತಿಯಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ವಾಹನ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿದೆ. ಹಾಗಾದರೆ ಏನದು ಸಮಸ್ಯೆ? ತಿಳಿಯಲು ಮುಂದೆ ಓದಿ.

ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ!
ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ! (ಸಾಂದರ್ಭಿಕ ಚಿತ್ರ)
Vinayak Hanamant Gurav
Vinayak Hanamant Gurav| Edited By: |

Updated on: Jul 04, 2024 | 6:51 AM

Share

ಬೆಂಗಳೂರು, ಜುಲೈ 4: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ‌ ಎಲ್ಲಿ ನೋಡಿದರೂ ಟ್ರಾಫಿಕ್ ಸಮಸ್ಯೆ ಇದ್ದಿದ್ದೇ. ಇದರ ನಡುವೆ ಇದೀಗ ಬೀದಿ ದನಗಳಿಂದಾಗಿ ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅತ್ತ ಟ್ರಾಫಿಕ್ ಪೊಲೀಸರು ಕೂಡ ಬೀದಿ ದನಗಳ ನಿಯಂತ್ರಣಕ್ಕೆ ಪಾಲಿಕೆಗೆ ಪತ್ರ ಬರೆದಿದ್ದಾರೆ.

ಈ ಬೀದಿ ಬದಿಯ ದನಗಳು ರಾಜಾರೋಷವಾಗಿ ರಸ್ತೆಯ ಮಧ್ಯೆ ಎಲ್ಲೆಂದರಲ್ಲಿ ಹೇಗೆ ಬೇಕೊ ಹಾಗೇ ಓಡಾಡುವುದರಿಂದ, ಮಲಗುವುದರಿಂದ ಸಾರ್ವಜನಿಕರು, ಶಾಲಾ ಮಕ್ಕಳು, ವಾಹನ ಸವಾರರು ರಸ್ತೆಯಲ್ಲಿ ಓಡಾಡಲು ಕೂಡ ಭಯ ಪಡುವಂತಾಗಿದೆ. ಈ ದನಗಳಿಗೆ ಯಾರು ಇಲ್ಲ ಅಂತ ಅಲ್ಲ, ಇವುಗಳಿಗೆ ಮಾಲೀಕರು ಕೂಡ ಇದ್ದಾರೆ. ಅವರು ಅವುಗಳನ್ನ ಲಂಗು ಲಗಾಮು ಇಲ್ಲದ ಹಾಗೇ ಬಿಟ್ಟು ಬಿಡುತ್ತಾರೆ. ಇದರಿಂದ ದನಗಳು ಆಹಾರ ಅರಸಿ ಮಾರುಕಟ್ಟೆ ಪ್ರದೇಶ, ಸಾರ್ವಜನಿಕರು ಕಸ ಎಸೆಯುವಂತಹ ಪ್ರದೇಶಗಳಲ್ಲಿ ಓಡಾಡುವುತ್ತವೆ.

ರಸ್ತೆಯಲ್ಲಿ ಓಡಾಡುವ ದನಗಳು ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗುವುದಲ್ಲದೇ ಇನ್ನಿತರ ಸಮಸ್ಯೆಗಳಿಗೂ ಕಾರಣವಾಗುತ್ತಿದೆ ಎಂದು ವಾಹನ ಸವಾರ ಮಹೇಶ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಯನಗರ ವ್ಯಾಪ್ತಿಯಲ್ಲಿ ಅಪಘಾತ ಹೆಚ್ಚಳ, ದನಗಳೇ ಕಾರಣ

ಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ಹೆಚ್ಚುತ್ತಿರುವುದರಿಂದ ಪೊಲೀಸರಿಗೆ ಟೆನ್ಷನ್ ಹೆಚ್ಚಾಗಿದೆ. ಈ ಬಗ್ಗೆ ತಲೆ ಕೆಡಿಸಿಕೊಂಡು ರಹಸ್ಯ ಭೇದಿಸಲು ಹೊರಟ ಸಂಚಾರಿ ಪೊಲೀಸರಿಗೆ ಕಂಡಿದ್ದು ದನಗಳ ಕಾಟದ ದೃಶ್ಯ. ರಸ್ತೆಯಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದ್ದು, ಸವಾರರಿಗೆ ತೊಂದರೆಗಳಾಗುತ್ತಿವೆ. ದನಗಳ ಕಾಟ ತಪ್ಪಿಸಲು ಹೋಗಿ ಚಾಲಕರು, ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಇಂತಹ ಬಿಡಾಡಿ ದನಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳುವಂತೆ ಜಯನರ ಟ್ರಾಫಿಕ್ ಇನ್ಸೆಕ್ಟರ್​​ ಪತ್ರ ಮೂಲಕ ಬಿಬಿಎಂಪಿ ಮುಖ್ಯ ಪಶು ವೈಧ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳ ಬೆಲೆ ಹೆಚ್ಚಳಕ್ಕೆ ಕಡಿವಾಣ; ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಟ್ರಾಫಿಕ್ ಸಮಸ್ಯೆ ಮಧ್ಯೆ ಬಿಬಿಎಂಪಿ ಅಧಿಕಾರಿಗಳ ಜಾಣಕುರುಡುತನದಿಂದ ಬೀದಿ ಬದಿಯ ದನಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇನ್ನಾದರೂ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಯಲ್ಲಿ ಓಡಾಡುವ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!