AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ, ಮಗ ಸಾವು

ಬೆಂಗಳೂರು-ಮೈಸೂರು ರಸ್ತೆಯ ಜುಡಿಯೋ ಬಳಿ ನಡೆದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ದುರ್ಮರಣಕ್ಕೀಡಾಗಿದ್ದಾರೆ. ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೈಕ್​ನಲ್ಲಿ ಬಂದ ಇಬ್ಬರೂ ಕಂಟೈನರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಇದ್ದುದೇ ಸಾವಿಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ, ಮಗ ಸಾವು
ಬೆಂಗಳೂರು-ಮೈಸೂರು ರೋಡಿನಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೃತಪಟ್ಟ ತಾಯಿ, ಮಗ
ಭಾವನಾ ಹೆಗಡೆ
|

Updated on: Nov 30, 2025 | 12:25 PM

Share

ಬೆಂಗಳೂರು, ನವೆಂಬರ್ 30: ಬೆಂಗಳೂರು (Bengaluru) ಮೈಸೂರು ರಸ್ತೆಯ ಜುಡಿಯೋ ಮುಂದೆ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ದುರ್ಮರಣ ಹೊಂದಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತಾಯಿ, ಮಗನ ಬೈಕ್​ಗೆ ಕಂಟೈನರ್‌ ತಗುಲಿದ್ದು, ಬಿದ್ದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ (Mother-Son Death). ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕಂಟೈನರ್‌ಗೆ ಬೈಕ್ ತಾಕಿ ಅಪಘಾತ

ಅಶ್ವಿನಿ (41) ಮತ್ತು ಅಭಿಲಾಶ್ (19) ಮೃತ ದುರ್ದೈವಿಗಳು. ತಾಯಿ ಮಗ ಇಬ್ಬರೂ ಕೆ.ಆರ್. ಮಾರ್ಕೆಟ್ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಮತ್ತು ಕಂಟೈನರ್ ನಡುವಿನ ಸಣ್ಣ ಜಾಗದಲ್ಲಿ ಬೈಕ್ ಚಲಾಯಿಸಲು ಯತ್ನಿಸಿದಾಗ, ಕಂಟೈನರ್‌ಗೆ ಬೈಕ್ ತಾಕಿ ಇಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ತಲೆಗೆ ತೀವ್ರ ಪೆಟ್ಟು ತಗುಲಿದ್ದು, ಕೆಲವೇ ಕ್ಷಣಗಳಲ್ಲಿ ಉಸಿರುಚೆಲ್ಲಿದ್ದಾರೆ.

ಇದನ್ನೂ ಓದಿ ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ! ಮಗುವಿನ ಮೇಲೆ ಹರಿದ ಕಾರು

ಹೆಲ್ಮೆಟ್ ಇದ್ದರೂ ಧರಿಸಿರದ ತಾಯಿ,ಮಗ

ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಕ್‌ನಲ್ಲಿ ಹೆಲ್ಮೆಟ್ ಇದ್ದರೂ ಧರಿಸದೆ ಚಾಲನೆ ಮಾಡಿರುವುದು ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಮೃತರು ದೊಡ್ಡಗೊಲ್ಲರಹಟ್ಟಿಯವರಾಗಿದ್ದು, ಅಶ್ವಿನಿ ಆಸ್ಪತ್ರೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡನ್ ಆಗಿದ್ದರು. ತಾಯಿಯನ್ನು ಡ್ರಾಪ್ ಮಾಡಲು ಮಗ ಹೊಗುವಾಗ ಈ ಘಟನೆ ನಡೆದಿದೆ. ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದಿದ್ದಾರೆ.

ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು