AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ, ಮಗ ಸಾವು

ಬೆಂಗಳೂರು-ಮೈಸೂರು ರಸ್ತೆಯ ಜುಡಿಯೋ ಬಳಿ ನಡೆದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗ ದುರ್ಮರಣಕ್ಕೀಡಾಗಿದ್ದಾರೆ. ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೈಕ್​ನಲ್ಲಿ ಬಂದ ಇಬ್ಬರೂ ಕಂಟೈನರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಇದ್ದುದೇ ಸಾವಿಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ, ಮಗ ಸಾವು
ಬೆಂಗಳೂರು-ಮೈಸೂರು ರೋಡಿನಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೃತಪಟ್ಟ ತಾಯಿ, ಮಗ
ಭಾವನಾ ಹೆಗಡೆ
|

Updated on: Nov 30, 2025 | 12:25 PM

Share

ಬೆಂಗಳೂರು, ನವೆಂಬರ್ 30: ಬೆಂಗಳೂರು (Bengaluru) ಮೈಸೂರು ರಸ್ತೆಯ ಜುಡಿಯೋ ಮುಂದೆ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ದುರ್ಮರಣ ಹೊಂದಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತಾಯಿ, ಮಗನ ಬೈಕ್​ಗೆ ಕಂಟೈನರ್‌ ತಗುಲಿದ್ದು, ಬಿದ್ದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ (Mother-Son Death). ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಕಂಟೈನರ್‌ಗೆ ಬೈಕ್ ತಾಕಿ ಅಪಘಾತ

ಅಶ್ವಿನಿ (41) ಮತ್ತು ಅಭಿಲಾಶ್ (19) ಮೃತ ದುರ್ದೈವಿಗಳು. ತಾಯಿ ಮಗ ಇಬ್ಬರೂ ಕೆ.ಆರ್. ಮಾರ್ಕೆಟ್ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಮತ್ತು ಕಂಟೈನರ್ ನಡುವಿನ ಸಣ್ಣ ಜಾಗದಲ್ಲಿ ಬೈಕ್ ಚಲಾಯಿಸಲು ಯತ್ನಿಸಿದಾಗ, ಕಂಟೈನರ್‌ಗೆ ಬೈಕ್ ತಾಕಿ ಇಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ತಲೆಗೆ ತೀವ್ರ ಪೆಟ್ಟು ತಗುಲಿದ್ದು, ಕೆಲವೇ ಕ್ಷಣಗಳಲ್ಲಿ ಉಸಿರುಚೆಲ್ಲಿದ್ದಾರೆ.

ಇದನ್ನೂ ಓದಿ ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ! ಮಗುವಿನ ಮೇಲೆ ಹರಿದ ಕಾರು

ಹೆಲ್ಮೆಟ್ ಇದ್ದರೂ ಧರಿಸಿರದ ತಾಯಿ,ಮಗ

ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಕ್‌ನಲ್ಲಿ ಹೆಲ್ಮೆಟ್ ಇದ್ದರೂ ಧರಿಸದೆ ಚಾಲನೆ ಮಾಡಿರುವುದು ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಮೃತರು ದೊಡ್ಡಗೊಲ್ಲರಹಟ್ಟಿಯವರಾಗಿದ್ದು, ಅಶ್ವಿನಿ ಆಸ್ಪತ್ರೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡನ್ ಆಗಿದ್ದರು. ತಾಯಿಯನ್ನು ಡ್ರಾಪ್ ಮಾಡಲು ಮಗ ಹೊಗುವಾಗ ಈ ಘಟನೆ ನಡೆದಿದೆ. ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದಿದ್ದಾರೆ.

ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ