Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಆರ್ ಕೋಡ್​ನಲ್ಲೇ ಸಿಗಲಿದೆ ನಮ್ಮ ಕ್ಲಿನಿಕ್ ಮಾಹಿತಿ: ಬಿಬಿಎಂಪಿ ಹೊಸ ಪ್ಲಾನ್

ಇತ್ತೀಚೆಗಷ್ಟೇ ಬೆಂಗಳೂರಿನ ‘ನಮ್ಮ ಕ್ಲಿನಿಕ್’ಗಳು ಸರಿಯಾದ ರೀತಿಯಲ್ಲಿ ಸೇವೆ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ನಮ್ಮ ಕ್ಲಿನಿಕ್​ಗಳ ಬಗ್ಗೆ ಜನರಿಗೆ ಅರಿವು ಕೂಡ ಕಡಿಮೆ ಇರುವುದರಿಂದ ಅವುಗಳತ್ತ ಜನ ಹೋಗುವುದು ಕೂಡ ಕಡಿಮೆಯಾಗಿತ್ತು. ಸದ್ಯ ನಮ್ಮ ಕ್ಲಿನಿಕ್ ವಿರುದ್ಧ ಕೇಳಿಬಂದಿರೋ ಆರೋಪಗಳಿಗೆ ಫುಲ್ ಸ್ಟಾಪ್ ಇಡಲು ಬಿಬಿಎಂಪಿ ಹೊಸ ಪ್ಲಾನ್ ಜಾರಿಗೊಳಿಸಲು ಮುಂದಾಗಿದೆ.

ಕ್ಯೂಆರ್ ಕೋಡ್​ನಲ್ಲೇ ಸಿಗಲಿದೆ ನಮ್ಮ ಕ್ಲಿನಿಕ್ ಮಾಹಿತಿ: ಬಿಬಿಎಂಪಿ ಹೊಸ ಪ್ಲಾನ್
ನಮ್ಮ ಕ್ಲಿನಿಕ್
Follow us
ಶಾಂತಮೂರ್ತಿ
| Updated By: Ganapathi Sharma

Updated on: Feb 04, 2025 | 9:17 AM

ಬೆಂಗಳೂರು, ಫೆಬ್ರವರಿ 4: ‘ನಮ್ಮ ಕ್ಲಿನಿಕ್’ಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, ಅವುಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದಕ್ಕಾಗಿ ಹೊಸ ತಂತ್ರವನ್ನೂ ಪಾಲಿಕೆ ಅನುಸರಿಸಲಿದೆ. ಸದ್ಯ ಬೆಂಗಳೂರಿನ ಎಂಟು ವಲಯಗಳಲ್ಲಿ ನಮ್ಮ ಕ್ಲಿನಿಕ್​ಗಳನ್ನ ಜನರ ಬಳಕೆಗೆ ಸಿಗುವಂತೆ ಮಾಡಲು ಚಿಂತನೆ ನಡೆಸಿರುವ ಬಿಬಿಎಂಪಿಯ ಆರೋಗ್ಯ ವಿಭಾಗ, ಪ್ರತಿ ವಾರ್ಡ್​ನಲ್ಲೂ ಕ್ಯೂಆರ್ ಕೋಡ್ ಅಳವಡಿಸಲು ಸಜ್ಜಾಗಿದೆ.

ಕ್ಯೂಆರ್ ಕೋಡ್ ಮೂಲಕ ಆಯಾ ವಾರ್ಡ್​ಗಳಲ್ಲಿ ನಮ್ಮ ಕ್ಲಿನಿಕ್ ಎಲ್ಲಿದೆ, ಅಲ್ಲಿ ಸಿಗೋ ಸೌಲಭ್ಯಗಳೇನು ಎಂಬ ಬಗ್ಗೆ ಜನರಿಗೆ ಮಾಹಿತಿ ಒದಗಿಸಲು ಪಾಲಿಕೆ ಸಿದ್ಧತೆ ನಡೆಸಿದೆ.

ಕ್ಯೂಆರ್ ಕೋಡ್​ನಲ್ಲಿ ಏನೇನು ಮಾಹಿತಿ ಸಿಗಲಿದೆ?

ರಾಜಧಾನಿಯ ವಾರ್ಡ್​ಗಳಲ್ಲಿರುವ ನಮ್ಮ ಕ್ಲಿನಿಕ್​ಗಳಲ್ಲಿ ಏನೆಲ್ಲ ಸೌಲಭ್ಯ ಸಿಗಲಿದೆ ಎಂಬ ಬಗ್ಗೆ ಪಾಲಿಕೆ ಜನರಿಗೆ ಮಾಹಿತಿ ಒದಗಿಸಲಿದೆ. ಕ್ಯೂಆರ್ ಕೋಡ್ ಜೊತೆಗೆ ಆಯಾ ವಲಯದಲ್ಲಿರುವ ನಮ್ಮ ಕ್ಲಿನಿಕ್​ಗಳಲ್ಲಿ ಇರುವ ವೈದ್ಯರ ಮಾಹಿತಿ, ವೈದ್ಯರ ಫೋಟೋವನ್ನು ಕೂಡ ಪ್ರಕಟಿಸುವ ಮೂಲಕ ಜನರಿಗೆ ನಮ್ಮ ಕ್ಲಿನಿಕ್ ಬಳಕೆ ಮಾಡಿಕೊಳ್ಳುವಂತೆ ಜಾಗೃತಿ ನೀಡಲು ಮುಂದಾಗಿದೆ.

ಬಿಬಿಎಂಪಿ ವಿಶೇಷ ಆಯುಕ್ತರು ಹೇಳಿದ್ದೇನು?

ಜನರಲ್ಲಿ ನಮ್ಮ ಕ್ಲಿನಿಕ್​ಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯ ಸೌಲಭ್ಯಗಳನ್ನು ಜನರಿಗೆ ತಲುಪಿಸುವುದು ಬಿಬಿಎಂಪಿ ಆರೋಗ್ಯ ವಿಭಾಗದ ಉದ್ದೇಶವಾಗಿದೆ ಎಂದು ವಿಶೇಷ ಆಯುಕ್ತ ಸೂರಲ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಈಗಾಗಲೇ ನಮ್ಮ ಕ್ಲಿನಿಕ್​ಗಳಲ್ಲಿ ವಾರಕ್ಕೊಮ್ಮೆ ಯೋಗ ನಡೆಸುವ ಮೂಲಕ ಜನರ ಗಮನ ಸೆಳೆಯಲು ಕೂಡ ಪಾಲಿಕೆ ಯೋಜನೆ ರೂಪಿಸಿತ್ತು. ಇದಾದ ಬಳಿಕ ಇದೀಗ ಕ್ಯೂಆರ್ ಕೋಡ್ ಮೂಲಕ ನಮ್ಮ ಕ್ಲಿನಿಕ್​ಗಳನ್ನ ಸಮರ್ಪಕವಾಗಿ ಜನರ ಬಳಕೆಗೆ ಸಿಗುವಂತೆ ಮಾಡಲು ಪಾಲಿಕೆ ಹೆಜ್ಜೆ ಇಟ್ಟಿದೆ. ಬಿಬಿಎಂಪಿಯ ಈ ಹೊಸ ಪ್ಲಾನ್ ಎಷ್ಟರಮಟ್ಟಿಗೆ ಫಲ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ನಮ್ಮ ಕ್ಲಿನಿಕ್​ಗಳು ಎಂದರೇನು?

ಬಡವರು, ದಿನಗೂಲಿ ಕಾರ್ಮಿಕರು, ಕೊಳಗೇರಿ ನಿವಾಸಿಗಳು ಮತ್ತು ಸಮಾಜದ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ಒದಗಿಸಬೇಕು ಎನ್ನುವ ಉದ್ದೇಶದೊಂದಿಗೆ 2022ರ ಡಿಸೆಂಬರ್ 14 ರಂದು ಕರ್ನಾಟಕದಾದ್ಯಂತ ನಮ್ಮ ಕ್ಲಿನಿಕ್​ಗಳನ್ನು ಆರಂಭಿಸಲಾಗಿತ್ತು. ಅದರಂತೆ, ಬೆಂಗಳೂರಿನ ವಾರ್ಡ್​ಗಳಲ್ಲಿಯೂ ನಮ್ಮ ಕ್ಲಿನಿಕ್​ಗಳು ಕಾರ್ಯಾಚರಿಸುತ್ತಿವೆ.

ಇದನ್ನೂ ಓದಿ: ನಮ್ಮ ಕ್ಲಿನಿಕ್ ಎಂದರೇನು? ಆರೋಗ್ಯ ಕೇಂದ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ