AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ

ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಯಾಣಿಕರಿಗಾಗಿ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್‌ಗಳನ್ನು ಆರಂಭಿಸಿದೆ. ಮೆಜೆಸ್ಟಿಕ್, ಚಿಕ್ಕಪೇಟೆ ಮತ್ತು ಬೆನ್ನಿಗಾನಹಳ್ಳಿ ನಿಲ್ದಾಣಗಳಲ್ಲಿ ಲಭ್ಯವಿರುವ ಈ ಲಾಕರ್‌ಗಳಲ್ಲಿ, 2 ರಿಂದ 5 ಬ್ಯಾಗ್‌ಗಳನ್ನು ಇಡಲು ಅವಕಾಶ ನೀಡಿದೆ. ಸ್ಮಾರ್ಟ್​ ಡಿಜಿಟಲ್​ ಲಗೇಜ್​ ಲಾಕರ್ ಕಾರ್ಯ, ಇದನ್ನು ಉಯೋಗಿಸುವುದು ಹೇಗೆ? ಲಗೇಜ್​ ಇಡಲು ಎಷ್ಟು ಹಣ ನೀಡಬೇಕು ಎಂಬ ಮಾಹಿತಿ ಇಲ್ಲಿದೆ.

ಪ್ರಯಾಣಿಕರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ
ಸ್ಮಾರ್ಟ್​ ಡಿಜಿಟಲ್​ ​ಲಾಕರ್
ವಿವೇಕ ಬಿರಾದಾರ
|

Updated on:Nov 14, 2024 | 8:39 AM

Share

ಬೆಂಗಳೂರು, ನವೆಂಬರ್​ 14: ನಮ್ಮ ಮೆಟ್ರೋ (Namma Metro) ವೇಗದ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅನುಕೂಲಕಾರಿಯಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್​ ಮುಕ್ತ ಸಂಚಾರ ಸೇವೆಯನ್ನು ನೀಡುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಮಂಡಳಿ (BMRCL) ​​ಸ್ಮಾರ್ಟ್​ ಡಿಜಿಟಲ್​ ಲಗೇಜ್​ ಲಾಕರ್​ ಅನ್ನು ಆರಂಭಿಸಿದೆ. ಮೆಟ್ರೋ ಪ್ರಯಾಣಿಕರು ಸೇಫ್ ಕ್ಲಾಕ್ ಸಂಸ್ಥೆಯ ಸ್ಮಾರ್ಟ್​ ಡಿಜಿಟಲ್​ ​ಲಾಕರ್​ನಲ್ಲಿ ತಮ್ಮ ಲಗೇಜ್​ ಇಟ್ಟು ಬೇರಡೆ ಹೋಗಬೇಕಿದ್ದ ಸ್ಥಳಕ್ಕೆ ತೆರಳಿ ವಾಪಸ್​ ಬರಬಹುದು. ಸ್ಮಾರ್ಟ್​ ಡಿಜಿಟಲ್​ ಲಗೇಜ್​ ಲಾಕರ್ ಕಾರ್ಯ, ಇದನ್ನು ಉಯೋಗಿಸುವುದು ಹೇಗೆ? ಲಗೇಜ್​ ಇಡಲು ಎಷ್ಟು ಹಣ ನೀಡಬೇಕು ಎಂಬ ಮಾಹಿತಿ ಇಲ್ಲಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್​)ನಲ್ಲಿ ಬುಧವಾರ ಸ್ಮಾರ್ಟ್​ ಡಿಜಿಟಲ್​ ಲಾಕರ್​ ಆರಂಭಗೊಂಡಿದೆ. ಮೆಜೆಸ್ಟಿಕ್​ ನಿಲ್ದಾಣದ ‘ಡಿ’ ನಿರ್ಗಮನದಲ್ಲಿ ಸ್ಥಾಪಿಸಲಾಗಿರುವ ಸ್ಮಾರ್ಟ್​ ಡಿಜಿಟಲ್​ ಲಾಕರ್​ಗೆ ಬಿಎಂಆರ್​ಸಿಎಲ್​ ಕಾರ್ಯನಿರ್ವಾಹಕ ನಿರ್ದೇಶಕಿ ಕಲ್ಪನಾ ಕೊಟಾರಿಯಾ ಚಾಲನೆ ನೀಡಿದರು. ಪ್ರಯಾಣಿಕರು 2 ರಿಂದ 5 ಬ್ಯಾಗ್‌ಗಳನ್ನು ಸ್ಮಾರ್ಟ್ ಡಿಜಿಟಲ್‌ ಲಾಕರ್‌ನಲ್ಲಿ ಇಡಬಹುದಾಗಿದೆ.

ಟ್ವಿಟರ್​ ಪೋಸ್ಟ್​

ಡಿಜಿಟಲ್​ ಲಾಕರ್​ ಉಪಯೋಗ

ಸ್ಮಾರ್ಟ್ ಡಿಜಿಟಲ್ ಲಾಕರ್‌ನಲ್ಲಿನ ಕಿಯೋಸ್ಟ್‌ನಲ್ಲಿನ ಆಯ್ಕೆಗಳನ್ನು ಭರ್ತಿ ಮಾಡಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿದರೆ, ಒಟಿಪಿ ಬರಲಿದೆ. ಅದನ್ನು ಕಿಯೋಸ್ಟ್‌ನಲ್ಲಿ ಹಾಕಿದರೆ ಬ್ಯಾಗ್‌ಗಳನ್ನು ಇಡಲು ಲಾಕ‌ರ್ ದೊರೆಯಲಿದೆ. ನಂತರ, ಲಾಕರ್​ನಲ್ಲಿ ಬ್ಯಾಗ್​ ಇಟ್ಟು ಲಾಕ್​ ಮಾಡಬೇಕು. ಅನಂತರ ತೆರೆಯಬೇಕಿದ್ದರೆ ಬ್ಯಾಗ್​ ಮಾಲೀಕರೇ ಬಂದು ಒಟಿಪಿ ಹಾಕಬೇಕು. ಆಗ ಲಾಕರ್​ ತೆರೆಯುತ್ತದೆ. ಹೀಗಾಗಿ, ಬೇರೆಯವರು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ

ಎಷ್ಟು ಹಣ ಪಾವತಿಸಬೇಕು?

2 ರಿಂದ 3 ಬ್ಯಾಗ್‌ಗಳನ್ನು 6 ಗಂಟೆಗಳ ಕಾಲ ಇಡಲು 70 ರೂ. ಹಾಗೂ 4 ರಿಂದ 5 ಬ್ಯಾಗ್‌ಗಳನ್ನು ಇಡಲು 100 ರೂ. ಶುಲ್ಕ ವಿಧಿಸಲಾಗುತ್ತದೆ. ಅದೇ 12 ಗಂಟೆಗಳ ಕಾಲ ಬ್ಯಾಗ್‌ಗಳನ್ನು ಇಟ್ಟರೆ ಕ್ರಮವಾಗಿ 120 ಮತ್ತು 160 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಶ್ರೀಘ್ರದಲ್ಲೇ ಎಲ್ಲ ನಿಲ್ದಾಣಗಳಿಗೂ ವಿಸ್ತರಣೆ

ನೂತನ ಸೇವೆಯು ಸದ್ಯ ಮೆಜೆಸ್ಟಿಕ್ ಕೆಂಪೇಗೌಡ, ಚಿಕ್ಕಪೇಟೆ ಹಾಗೂ ಬೆನ್ನಿಗಾನಹಳ್ಳಿ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆರಂಭಿಸಲಾಗಿದೆ. ಶೀಘ್ರದಲ್ಲೇ ಇತರ ನಿಲ್ದಾಣಗಳಿಗೂ ವಿಸ್ತರಿಸಲು ಸೇಫ್ ಕ್ಲಾಕ್ ಸಂಸ್ಥೆ ಯೋಜಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Thu, 14 November 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ