AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಸಂಚಾರ ವ್ಯತ್ಯಯ

Namma Metro Yellow Line: ಕೆಲವು ದಿನಗಳ ಹಿಂದಷ್ಟೇ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಟ ಪಡುವಂತಾಗಿತ್ತು. ಇದೀಗ ಹಳದಿ ಮಾರ್ಗದ ಸರದಿ. ಯೆಲ್ಲೋ ಲೈನ್ ಮೆಟ್ರೋದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ತೊಂದರೆಯಾಗಿದ್ದು, ಈ ಕಾರಣ ಸಂಚಾರದಲ್ಲಿ ವ್ಯತ್ಯಾಸವಾಗಿದೆ.

Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಸಂಚಾರ ವ್ಯತ್ಯಯ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Nov 12, 2025 | 10:12 AM

Share

ಬೆಂಗಳೂರು, ನವೆಂಬರ್ 12: ನಮ್ಮ ಮೆಟ್ರೋ ಹಳದಿ ಮಾರ್ಗದ (Namma Metro Yellow Line) ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು, ಪರಿಣಾಮವಾಗಿ ಈ ಮಾರ್ಗದಲ್ಲಿ ಸಂಚಾರ ವಿಳಂಬವಾಗುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ. ಬುಧವಾರ ಬೆಳಗ್ಗೆ ಜನರು ಕಚೇರಿ, ಕೆಲಸ ಕಾರ್ಯಗಳಿಗೆ ತೆರಳುವ ಸಮಯದಲ್ಲೇ ಈ ಅನಾನುಕೂಲತೆ ಉಂಟಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಬಿಎಂಆರ್ ಮಾಹಿತಿ ನೀಡಿದೆ.

‘ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ತಿಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ’ ಎಂದು ನಮ್ಮ ಮೆಟ್ರೋ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ನಮ್ಮ ಮೆಟ್ರೋ ಎಕ್ಸ್ ಸಂದೇಶ

ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಇತ್ತೀಚೆಗಷ್ಟೇ ಐದನೇ ರೈಲು ಸಂಚಾರ ಶುರುವಾಗಿತ್ತು. ಇದರಿಂದಾಗಿ ಪ್ರತಿ 15 ನಿಮಿಷಕ್ಕೆ ಒಂದು ರೈಲು ಸಂಚಾರ ಮಾಡುವಂತೆ ಆಗಿದ್ದು, ಪ್ರಯಾಣಿಕರಿಗೂ ಅನುಕೂಲವಾಗಿತ್ತು.

ಮೆಟ್ರೋ ನೇರಳೆ ಮಾರ್ಗದಲ್ಲೂ ಉಂಟಾಗಿತ್ತು ಸಂಚಾರ ವ್ಯತ್ಯಯ

ಚಲ್ಲಘಟ್ಟದಿಂದ ವೈಟ್ ಫೀಲ್ಡ್ ವರೆಗಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇತ್ತೀಚೆಗೆ ಇದೇ ರೀತಿ ಬೆಳಗ್ಗೆ ಸಂಚಾರ ವ್ಯತ್ಯಯವಾಗಿತ್ತು. ಪ್ರಯಾಣಿಕರು ಸುಮಾರು ಹೊತ್ತು ಕಾಯುವಂತಾಗಿತ್ತು.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್: ಸಿದ್ದರಾಮಯ್ಯ, ಖರ್ಗೆ ಇದನ್ನು ಒಪ್ಪುತ್ತಾರೆಯೇ? ಬಿಜೆಪಿ ಪ್ರಶ್ನೆ 

ತಾಂತ್ರಿಕ ಸಮಸ್ಯೆಯಿಂದಾಗಿ ವಿಜಯನಗರ -ಹೊಸಹಳ್ಳಿ ನಿಲ್ದಾಣಗಳ ನಡುವೆ ರೈಲೊಂದು ಕೆಟ್ಟು ನಿಂತಿದ್ದರ ಪರಿಣಾಮ ಸಮಸ್ಯೆ ಆಗಿತ್ತು. ಕೆಟ್ಟುನಿಂತ ರೈಲನ್ನು ಚಲ್ಲಘಟ್ಟ ನಿಲ್ದಾಣಕ್ಕೆ ಸ್ಥಳಾಂತರ ಮಾಡಿದ ನಂತರ ಪ್ರಯಾಣ ಮಾಮೂಲಿಯಂತೆ ಆರಂಭವಾಗಿತ್ತು. ಆದರೆ, ಪೀಕ್ ಅವರ್ ಆದ್ದರಿಂದ ಜನ ಮೆಟ್ರೋ ಸ್ಟೇಷನ್​ಗಳಲ್ಲಿ ಕಿಕ್ಕಿರಿದು ತುಂಬಿದ್ದರಿಂದ ಸಮಸ್ಯೆ ಆಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 am, Wed, 12 November 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ