AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನಗಳ ಮಳೆಗೆ ಬೆಂಗಳೂರಿನಲ್ಲಿ 800 ವಿದ್ಯುತ್ ಕಂಬ ಧರೆಗೆ! ವಾಲಿವೆ ಹಲವಾರು ಕಂಬ

ಬೆಂಗಳೂರಿನ ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ವಾಲಿದ್ದು, ಮಳೆಯಾಗುತ್ತಿರುವ ಈ ಸಂದರ್ಭದಲ್ಲಿ ಜನ ಆತಂಕಕ್ಕೀಡಾಗುವಂತೆ ಮಾಡಿದೆ. ಈಗಾಗಲೇ ಗಾಳಿ, ಮಳೆಗೆ ಸುಮಾರು 800 ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಉಳಿದವುಗಳನ್ನು ಸರಿಪಡಿಸುವಂತೆ ಜನರು ಬೆಸ್ಕಾಂಗೆ ಆಗ್ರಹಿಸುತ್ತಿದ್ದಾರೆ.

ಕೆಲವೇ ದಿನಗಳ ಮಳೆಗೆ ಬೆಂಗಳೂರಿನಲ್ಲಿ 800 ವಿದ್ಯುತ್ ಕಂಬ ಧರೆಗೆ! ವಾಲಿವೆ ಹಲವಾರು ಕಂಬ
ಕೆಲವೇ ದಿನಗಳ ಮಳೆಗೆ ಬೆಂಗಳೂರಿನಲ್ಲಿ 800 ವಿದ್ಯುತ್ ಕಂಬ ಧರೆಗೆ! ವಾಲಿವೆ ಹಲವಾರು ಕಂಬ
Follow us
ಶಾಂತಮೂರ್ತಿ
| Updated By: Ganapathi Sharma

Updated on: May 22, 2024 | 7:00 AM

ಬೆಂಗಳೂರು, ಮೇ 21: ಮಳೆ (Rain) ಬಂದರೆ ಸಾಕು ಎನ್ನುತ್ತಿದ್ದ ಬೆಂಗಳೂರಿನ (Bengaluru) ಜನರು ಇದೀಗ ಮಳೆ ಬಂದಾಗ ರಸ್ತೆಗಿಳಿಯಲು ಯೋಚಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗಾಳಿ-ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳಿಂದ ವಾಹನಗಳಿಗೆ ಹಾನಿಯಾದರೂ ಬೆಸ್ಕಾಂ (BESCOM) ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು (Electric Poles) ಬೀಳುವ ಸ್ಥಿತಿ ತಲುಪಿದ್ದು ಜನ ಆತಂಕಕ್ಕೀಡಾಗುವಂತೆ ಮಾಡಿದೆ.

ಮೆಜೆಸ್ಟಿಕ್​ನಿಂದ ರಾಜಾಜಿನಗರ ಕಡೆ ತೆರಳುವ ರಸ್ತೆಯಲ್ಲಿ ಬಸ್ ನಿಲ್ದಾಣದ ಪಕ್ಕವೇ ವಿದ್ಯುತ್ ಕಂಬ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ವಿದ್ಯುತ್ ಕಂಬದ ಕೆಳಭಾಗದಲ್ಲಿ ಬಹತೇಕ ಓಪನ್ ಆಗಿದ್ದು ಎರಡೇ ಎರಡು ಕಂಬಿಗಳ ಮೇಲೆ ಇಡೀ ಕಂಬ ನಿಂತಿದೆ. ಪಕ್ಕದಲ್ಲೇ ಇರೋ ಮತ್ತೊಂದು ಕಂಬದಲ್ಲಿ ಜಂಕ್ಷನ್ ಬಾಕ್ಸ್ ಬಾಯ್ದೆರೆದಿದ್ದು ಅಪಾಯದ ಸೂಚನೆ ನೀಡ್ತಿದೆ. ಪ್ರತಿನಿತ್ಯ ನೂರಾರು ಜನ ಓಡಾಡೋ ಈ ರಸ್ತೆಯಲ್ಲಿ ಯಾವುದೇ ಕ್ಷಣದಲ್ಲಿ ಅಪಾಯ ಎದುರಾಗೋ ಲಕ್ಷಣ ಎದ್ದು ಕಾಣುತ್ತಿದೆ.

ಅತ್ತ ಮಹಾಲಕ್ಷ್ಮೀ ಲೇ ಔಟ್, ನಂದಿನಿ ಲೇ ಔಟ್ ಸುತ್ತಮುತ್ತ ಮೂರ್ನಾಲ್ಕು ಕಡೆ ವಿದ್ಯುತ್ ಕಂಬ ವಾಲಿದ್ದು, ಜನರ ಜೀವ ಬಲಿ ಪಡೆಯುವ ಮೊದಲೇ ಎಚ್ಚೆತ್ತುಕೊಳ್ಳಿ ಎಂದು ಜನರು ಬೆಸ್ಕಾಂಗೆ ಮನವಿ ಮಾಡಿದ್ದಾರೆ.

ಇತ್ತ ವಿದ್ಯುತ್ ಕಂಬಗಳು ವಾಲಿರೋದನ್ನು ಒಪ್ಪಿಕೊಂಡಿರುವ ಬೆಸ್ಕಾಂ, ಮಳೆ ಇರುವುದರಿಂದ ಒಂದಷ್ಟು ಕಡೆ ಹೀಗಾಗೊದೆ. ಈಗ ಸಮಸ್ಯೆ ಬಗೆಹರಿಸುತ್ತಿದ್ದೇವೆ ಎಂದಿದೆ. ಅಲ್ಲದೆ ಮಳೆ-ಗಾಳಿಗೆ 9. 19 ಕೋಟಿ ರೂ. ನಷ್ಟವಾಗಿದೆ. ಗ್ರಾಹಕರಿಗೆ ವಿದ್ಯುತ್ ನೀಡಬೇಕಿರುವುದರಿಂದ ಮಳೆ ಕಡಿಮೆಯಾದಾಗ ಸರಿಪಡಿಸುತ್ತೇವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

ಒಟ್ಟಿನಲ್ಲಿ ರಸ್ತೆಗುಂಡಿ, ಮರಗಳ ಕಂಟಕ ಸೇರಿ ಹಲವು ಅವಾಂತರಗಳಿಂದ ಸುಸ್ತಾಗಿದ್ದ ಬೆಂಗಳೂರು ಮಂದಿಗೆ ಈಗ ವಿದ್ಯುತ್ ಕಂಬಗಳಿಂದ ಸಂಕಷ್ಟ ಎದುರಾಗುವ ಭೀತಿ ಕಾಡುತ್ತಿದೆ. ಮಳೆಗಾಲ ಶುರುವಾಗುತ್ತಿದ್ದು, ಆಪತ್ತು ಎದುರಾಗುವ ಮೊದಲೇ ನಗರದಲ್ಲಿರುವ ವಾಲಿದ ಕಂಬಗಳು, ಅಪಾಯಕ್ಕೆ ಆಹ್ವಾನ ನೀಡುತ್ತಿರೋ ಟ್ರಾನ್ಸ್​​ಫಾರ್ಮರ್​​ಗಳ ಬಗ್ಗೆ ಬೆಸ್ಕಾಂ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!