AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್​​ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು

ಬೆಂಗಳೂರಿನ ಇಂದಿರಾನಗರದ ಚಿನ್ಮಯ್ ಮಿಷನ್ ಆಸ್ಪತ್ರೆಯಲ್ಲಿ 6 ತಿಂಗಳ ಮಗುವಿನ ಬೆರಳನ್ನು ನರ್ಸ್ ನಿರ್ಲಕ್ಷ್ಯದಿಂದ ಕತ್ತರಿಸಿರುವ ಆರೋಪ ಕೇಳಿಬಂದಿದೆ. ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದಾಗ ಡ್ರೆಸ್ಸಿಂಗ್ ತೆಗೆಯುವಾಗ ಈ ಘಟನೆ ನಡೆದಿದೆ. ಪೋಷಕರು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಆಸ್ಪತ್ರೆಯು ಸತ್ಯ ಮರೆಮಾಚಲು ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.

ನರ್ಸ್​​ ನಿರ್ಲಕ್ಷ್ಯಕ್ಕೆ  6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on:Feb 25, 2026 | 12:35 PM

Share

ಬೆಂಗಳೂರು, ಫೆಬ್ರವರಿ 25: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್​​ ಕತ್ತರಿಸಿರುವ ಘಟನೆ ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಮಗುವನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್​​ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಬಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ ಎಳೆಯ ಕಂದಮ್ಮ ನರಳಾಡುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ?

6 ತಿಂಗಳ ತಮ್ಮ ಗಂಡು ಮಗು ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಹಿನ್ನೆಲೆ ಇಂದಿರಾನಗರದಲ್ಲಿರುವ ಚಿನ್ಮಯ ಮಿಷನ್ ಆಸ್ಪತ್ರೆಗೆ ಆತನನ್ನು ಕರೆತಂದು ವೈದ್ಯರನ್ನು ಸಂಪರ್ಕಿಸಿದ್ದೆವು. ಮಗುವಿಗೆ ತೀವ್ರ ಅನಾರೋಗ್ಯದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲು ಅವರು ಸೂಚಿಸಿದ್ದರು. 5-6 ದಿನಗಳ ಚಿಕಿತ್ಸೆ ಬಳಿಕ ಫೆಬ್ರವರಿ 24ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಡಿಸ್ಚಾರ್ಜ್​​ಗೆ ನಿರ್ಧರಿಸಲಾಗಿತ್ತು. ನಾವು ಬಿಲ್ಲಿಂಗ್​​ ಕೌಂಟರ್​​ಗೆ ಹಣ ಪಾವತಿ ಮಾಡಲು ಹೋಗಿದ್ದ ಸಂದರ್ಭ, ನರ್ಸ್​​ ನಿರ್ಲಕ್ಷ್ಯಕ್ಕೆ ಮಗುವಿನ ಎಡಗೈ ಕಿರು ಬೆರಳು ಕಟ್​​ ಆಗಿದೆ. ಹೀಗಾಗಿ ವೈದ್ಯರು, ಸಿಬ್ಬಂದಿ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಂದೆ ವಿಜಯ್​​ ಕುಮಾರ್​​ ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ!

ಸತ್ಯ ಮರೆಮಾಚಲು ಯತ್ನ?

ಘಟನೆ ಬಳಿಕ ತುರ್ತು ಚಿಕಿತ್ಸಾ ಘಟಕಕ್ಕೆ ಮಗುವನ್ನು ಕರೆದುಕೊಂಡು ಹೋಗಲಾಗಿದ್ದು, ಗಾಯಕ್ಕೆ ಡ್ರೆಸ್ಸಿಂಗ್​​ ಮಾಡಲಾಗಿದೆ. ಹೀಗಿದ್ದರೂ ಯಾವುದೇ ದೊಡ್ಡ ಗಾಯವಾಗಿಲ್ಲ. ಮಗು ಚಿಕ್ಕದಾಗಿರುವ ಕಾರಣ ಗಾಯ ಅದಾಗೇ ಗುಣವಾಗುತ್ತದೆ ಎಂದು ತಿಳಿಸಿದ್ದಾರೆ. ಆದರೆ ಘಟನೆಯಲ್ಲಿ ಮಗುವಿನ ಅರ್ಧ ಬೆರಳು ಕಟ್​​ ಆಗಿದೆ ಎಂದು ವಿಜಯ್​​ ಕುಮಾರ್​​ ದೂರಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:34 pm, Wed, 25 February 26

Follow Us
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್