AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಸಿಎಂಗೆ ಎಚ್ಚರಿಕೆ ನೀಡಿದ ಒಆರ್​ಆರ್​ಸಿಎ

ಬೆಂಗಳೂರಿನಲ್ಲಿ ಮಳೆಯಿಂದಾಗಿ ಐಟಿ ಕಂಪನಿಗಳು ತತ್ತರಿಸಿದ್ದು, ಮೂಲಸೌಕರ್ಯಗಳ ಸುಧಾರಣೆಯಾಗದೆ 225 ಕೋಟಿ ರೂ. ನಷ್ಟ ಅನುಭವಿಸಿದೆ. ಈ ನಿಟ್ಟಿನಲ್ಲಿ ಪತ್ರದ ಮೂಲಕ ಮುಖ್ಯಮಂತ್ರಿಯವರಲ್ಲಿ ಮೂಲಸೌಕರ್ಯ ಸುಧಾರಿಸುವಂತೆ ಕಂಪನಿಗಳ ಸಂಘ ಮನವಿ ಮಾಡಿಕೊಂಡಿದೆ.

ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಸಿಎಂಗೆ ಎಚ್ಚರಿಕೆ ನೀಡಿದ ಒಆರ್​ಆರ್​ಸಿಎ
ಬೆಂಗಳೂರಿನ ಬೆಳ್ಳಂದೂರು ಬಳಿ ಮಳೆಯಿಂದ ಜಲಾವೃತಗೊಂಡ ಹೊರವರ್ತುಲ ರಸ್ತೆImage Credit source: PTI
TV9 Web
| Updated By: Rakesh Nayak Manchi|

Updated on:Sep 03, 2022 | 7:57 AM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳೇ ಸೃಷ್ಟಿಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಳ್ಳುತ್ತಿದೆ. ವರುಣನ ಆರ್ಭಟಕ್ಕೆ ಜನರು ಮಾತ್ರವಲ್ಲದೆ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಬೇಸತ್ತಿದೆ. ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ  ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಒಂದೊಮ್ಮೆ ತಾನು ಸರ್ಕಾರದ ಮುಂದಿಟ್ಟ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಂಪನಿಗಳು ಪರ್ಯಾಯ ಸ್ಥಳಗಳನ್ನು ಹುಡುಕಿಕೊಳ್ಳಲು ನಿರ್ಧರಿಸಿದೆ.

ಐಟಿ ಕಾರಿಡಾರ್ ಪ್ರದೇಶದಲ್ಲಿ ಸಮಪರ್ಕ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸದಿದ್ದರೆ ಐಟಿ ಕಂಪನಿಗಳು ಪರ್ಯಾಯ ಸ್ಥಳ‌ ಹುಡುಕಿಕೊಳ್ಳಲಿವೆ. ಸಪ್ಟೆಂಬರ್1 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹೊರವರ್ತುಲ ರಸ್ತೆಗಳಲ್ಲಿ‌ ಇರುವ ಕಂಪನಿಗಳ ಸಂಘ, ಕೆಲವು ಬೇಡಿಕೆಗಳನ್ನ ಮುಂದಿಟ್ಟಿದೆ.

ಸರ್ಕಾರಕ್ಕೆ ಐಟಿ ಕಂಪನಿಗಳು ಮುಂದಿಟ್ಟ ಮೊದಲ ಬೇಡಿಕೆ ಎಂದರೆ, ಮೂಲಸೌಕರ್ಯಗಳನ್ನು ಸುಧಾರಿಸುವುದು. ನಂತರ ಕೆ.ಆರ್ ಪುರಂ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು, ಬಿಎಂಟಿಸಿಯಿಂದ ವೋಲ್ವೋ ಬಸ್​ಗಳನ್ನು ಬಿಡಬೇಕು, ದಟ್ಟಣೆ ತಡೆಯಲು ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು, ಪಾದಚಾರಿ ಮಾರ್ಗ ಹಾಗೂ ಸೈಕಲ್ ಸವಾರರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಪಾಥ್ ನಿರ್ಮಾಣ ಮಾಡಬೇಕು, ಪಾದಾಚಾರಿಗಳು ರಸ್ತೆ ದಾಟಲು ಅನುಕೂಲವಾಗುವಂತೆ ಪ್ರತಿ 500 ಮೀಟರ್​ಗೆ ಪಾದಚಾರಿ ಮೇಲ್ಸೆತುವೆ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Sat, 3 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?