AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಕ್ರೀದ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಗಲ್ಲಿ ಗಲ್ಲಿಗೆ ತೆರಳಿ ಅನೌನ್ಸ್ ಮಾಡುತ್ತಿರುವ ಪೊಲೀಸರು, ಗೈಡ್​ಲೈನ್ಸ್​ ಏನು?

Bakrid 2022: ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಸರ್ಕಾರ ನಿಗದಿಪಡಿಸಿರುವ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಿದೆ. ಈ ಸಂಬಂಧ ಪೊಲೀಸ್ ಇಲಾಖೆ, ಪಶು ಪಾಲನಾ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ಪಾಲಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸರು ಗಲ್ಲಿ ಗಲ್ಲಿಗೆ ತೆರಳಿ ತಿಳಿಯಹೇಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಬಕ್ರೀದ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಗಲ್ಲಿ ಗಲ್ಲಿಗೆ ತೆರಳಿ ಅನೌನ್ಸ್ ಮಾಡುತ್ತಿರುವ ಪೊಲೀಸರು, ಗೈಡ್​ಲೈನ್ಸ್​ ಏನು?
ಬೆಂಗಳೂರಿನಲ್ಲಿ ಬಕ್ರೀದ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಗಲ್ಲಿ ಗಲ್ಲಿಗೆ ತೆರಳಿ ಅನೌನ್ಸ್ ಮಾಡುತ್ತಿರುವ ಪೊಲೀಸರು
TV9 Web
| Edited By: ಸಾಧು ಶ್ರೀನಾಥ್​|

Updated on: Jul 08, 2022 | 4:16 PM

Share

ಬೆಂಗಳೂರಿನಲ್ಲಿ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆ ಸರ್ಕಾರ ನಿಗದಿಪಡಿಸಿರುವ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಿದೆ. ಈ ಬಗ್ಗೆ, ಬೆಂಗಳೂರಿನಲ್ಲಿ ಪ್ರತಿ ಏರಿಯಾಗಳಿಗೆ ತೆರಳಿ ಪೊಲೀಸರು ಅನೌನ್ಸ್ ಮಾಡುತ್ತಿದ್ದಾರೆ. ಬಕ್ರೀದ್ ಹಬ್ಬ ಆಚರಣೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸರು ತಿಳಿಸುತ್ತಿದ್ದಾರೆ.

ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ಅನೌನ್ಸ್ ನಡೆಯುತ್ತಿದೆ. ಬಕ್ರೀದ್ ಹಬ್ಬ ಆಚರಣೆ ಬಗ್ಗೆ ಹೊರಡಿಸಿರುವ ಸರ್ಕಾರದ ಸುತ್ತೋಲೆಯಲ್ಲಿ ಹಬ್ಬದ ದಿನ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಮಾನಿ (ಪ್ರಾಣಿ ಬಲಿದಾನ) ಮಾಡುವಾಗ ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನಗಳಲ್ಲಿ ಮಾಡುವುದಕ್ಕೆ ನಿಷೇಧ ವಿಧಿಸಲಾಗಿದೆ. ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಮಾನಿ ನಡೆಸಬೇಕು. ಈ ಸಂಬಂಧ ಪೊಲೀಸ್ ಇಲಾಖೆ, ಪಶು ಪಾಲನಾ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ಪಾಲಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸರು ಗಲ್ಲಿ ಗಲ್ಲಿಗೆ ತೆರಳಿ ತಿಳಿಯಹೇಳುತ್ತಿದ್ದಾರೆ.

ಜುಲೈ 10ರಂದು ಬಕ್ರೀದ್​ ಹಬ್ಬಕ್ಕೆ ಸರ್ಕಾರದಿಂದ ಗೈಡ್​ಲೈನ್ಸ್​ ಬಿಡುಗಡೆಯಾಗಿದ್ದು, ಅವು ಹೀಗಿವೆ:

ಬಕ್ರೀದ್ ದಿನ ಖುರ್ಬಾನಿ ನೆರವೇರಿಸಲು ಸರ್ಕಾರದ ಕಂಡಿಷನ್ ಹೀಗಿದೆ- ಜಾನುವಾರು ಹತ್ಯೆ ಪ್ರತಿಬಂಧಕ ನಿಯಮ ಉಲ್ಲಂಘಿಸುವಂತಿಲ್ಲ. ಗೋಹತ್ಯೆ ನಿಷೇಧ ಕಾನೂನು ಪಾಲಿಸುವಂತೆ ಸರ್ಕಾರ ಸೂಚನೆ. ಎಲ್ಲೆಂದರಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಮಾಡುವಂತಿಲ್ಲ. ಕೊವಿಡ್ ಮಾರ್ಗಸೂಚಿ ಅನ್ವಯದಂತೆ ಪ್ರಾರ್ಥನೆ ಸಲ್ಲಿಸಬೇಕು. ಸಾರ್ವಜನಿಕ ಪ್ರದೇಶದಲ್ಲಿ ಕುರ್ಬಾನಿ ನಿಷೇಧಿಸಿದ ಸರ್ಕಾರ. ಜಿಲ್ಲಾಡಳಿತ, ಸ್ಥಳೀಯ ಆಡಳಿತ ತಿಳಿಸಿದ ಜಾಗದಲ್ಲೇ ಪ್ರಾರ್ಥನೆ. ಅಧಿಕಾರಿಗಳು ನಿಗದಿಪಡಿಸಿದ ಜಾಗದಲ್ಲೇ ಪ್ರಾರ್ಥನೆ ಮಾಡಬೇಕು. ಪ್ರಾಣಿ ತ್ಯಾಜ್ಯ ಸಾರ್ವಜನಿಕ ಸ್ಥಳದಲ್ಲಿ ವಿಲೇವಾರಿ ಮಾಡಬಾರದು ಎಂದು ಸರ್ಕಾರದ ಉಪ ಕಾರ್ಯದರ್ಶಿ ಮೆಹಬೂಬ್ ಸಾಬ್​​ ಆದೇಶ ಹೊರಡಿಸಿದ್ದಾರೆ.

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು