AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬ್ದಮಾಲಿನ್ಯ: ಹೈಕೋರ್ಟ್ ಆದೇಶ ಉಲ್ಲಂಘಿಸಿದ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ನೋಟಿಸ್, ಇಲ್ಲಿದೆ ಪಟ್ಟಿ

sound pollution: ನೋಟಿಸ್ ಕೊಟ್ಟು ಶಬ್ಧ ಮಾಲಿನ್ಯ ನಿಯಮ ಪಾಲಿಸದ ಪ್ರಾರ್ಥನಾ ಮಂದಿರಗಳ ಮೇಲೆ ಪೋಲಿಸರು ನಿಗಾ ಇಟ್ಟಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆ ಪ್ರಾರ್ಥನಾ ಮಂದಿರಗಳಿಗೆ ಪೊಲೀಸರು ವಿಸಿಟ್ ಹಾಕ್ತಿದಾರೆ.

ಶಬ್ದಮಾಲಿನ್ಯ: ಹೈಕೋರ್ಟ್ ಆದೇಶ ಉಲ್ಲಂಘಿಸಿದ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ನೋಟಿಸ್, ಇಲ್ಲಿದೆ ಪಟ್ಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 22, 2022 | 6:47 PM

Share

ಬೆಂಗಳೂರು: ಪ್ರಾರ್ಥನಾ ಮಂದಿರಗಳ ಮೈಕ್​​ಗಳಿಂದ ಹೊರಹೊಮ್ಮುವ ಶಬ್ದಮಾಲಿನ್ಯದ (Azaan, sound pollution) ವಿಚಾರವಾಗಿ ಹೈಕೋರ್ಟ್ ಆದೇಶ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸರಿಂದ ನೋಟಿಸ್ (Bangalore police) ಜಾರಿಯಾಗಿದೆ. ಪ್ರಾರ್ಥನಾ ಮಸೀದಿಗಳು, ಚರ್ಚ್ ಮತ್ತು ಮಂದಿರಗಳಿಗೆ ನೋಟಿಸ್ ನೀಡಲಾಗಿದೆ. ಬೆಂಗಳೂರಲ್ಲಿ ಕಳೆದ 15 ದಿನಗಳಲ್ಲಿ ಹೀಗೆ ನೋಟಿಸ್ ನೀಡಿದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ನಿಯಮ ಪಾಲಿಸದ ಧಾರ್ಮಿಕ ಸ್ಥಳಗಳ ಮೇಲೆ ಪೊಲೀಸರು ಕಣ್ಣು ಇಟ್ಟಿದ್ದು, ಈವರೆಗೆ ಒಟ್ಟು 318 ಮಸೀದಿ, 98 ಚರ್ಚ್​ಗಳಿಗೆ ನೋಟಿಸ್​​​​​​​ ನೀಡಲಾಗಿದೆ. ಒಟ್ಟು 396 ಮಂದಿರಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಗಮನಾರ್ಹವೆಂದರೆ 34 ರೆಸ್ಟೋರೆಂಟ್‌ಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ.

ಹೈಕೋರ್ಟ್ ಆದೇಶ ಉಲ್ಲಂಘಿಸೋ ಮಂದಿರಗಳ ವಿರುದ್ಧ FIR ಹಾಕುವಂತೆಯೂ ಹಿರಿಯ ಪೊಲೀಸ್​ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನೋಟಿಸ್ ಬಳಿಕವೂ ನಿಯಮ ಪಾಲಿಸದಿದ್ದರೆ ಆ ಕ್ರಮದ ಬಗ್ಗೆ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್​ನಲ್ಲಿ ವಿಚಾರಣೆಗೆ ಬರಲಿರುವ ಮೈಕ್ ಬಳಕೆ ವಿಚಾರ ರಜಾ ಕಾಲದ ಅವಧಿ ಮುಗಿದ ಬಳಿಕ ಕೋರ್ಟ್ ವಿಚಾರಣೆ ನಡೆಯಲಿದೆ.

ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸರಿಂದ ನೋಟಿಸ್ -ಏನಿದೆ ಅಂಕಿ ಅಂಶ:

ಮಸೀದಿಗಳು ಹಿಂದೆ – 125 ಈಗ – 193 ಒಟ್ಟು – 318

ಮಂದಿರಗಳು ಹಿಂದೆ – 83 ಈಗ – 313 ಒಟ್ಟು – 396

ಚರ್ಚ್ ಗಳು ಹಿಂದೆ – 22 ಈಗ – 76 ಒಟ್ಟು – 98

ರೆಸ್ಟೋರೆಂಟ್ – 34 ಇತರೆ – 74

ಕಳೆದ 15 ದಿನಗಳಲ್ಲಿ ದುಪ್ಪಟ್ಟು ನೋಟಿಸ್ ನೀಡಿರುವ ಪೊಲೀಸ್ ಇಲಾಖೆ ಈ ಹಿಂದೆ ಕೇವಲ 125 ಮಸೀದಿಗಳಿಗೆ ನೋಟಿಸ್ ನೀಡಿತ್ತು. ಇದೀಗ ಒಟ್ಟಾರೆ 318 ಮಸೀದಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನು ಈ ಹಿಂದೆ ಕೇವಲ 83 ಮಂದಿರಗಳಿಗೆ ನೋಟಿಸ್ ನೀಡಲಾಗಿತ್ತು. ಇದೀಗ ಮಂದಿರಗಳಿಗೆ ನೀಡಿರುವ ನೋಟಿಸ್ ಗಳ ಸಂಖ್ಯೆ 396 ಆಗಿದೆ. ಕೇವಲ 22 ಚರ್ಚ್ ಗೆ ನೀಡಿದ್ದ ನೋಟಿಸ್ ಇದೀಗ 98 ಚರ್ಚ್ ಗಳಿಗೇರಿದೆ. ನೋಟಿಸ್ ಕೊಟ್ಟು ಶಬ್ಧ ಮಾಲಿನ್ಯ ನಿಯಮ ಪಾಲಿಸದ ಪ್ರಾರ್ಥನಾ ಮಂದಿರಗಳ ಮೇಲೆ ಪೋಲಿಸರು ನಿಗಾ ಇಟ್ಟಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆ ಪ್ರಾರ್ಥನಾ ಮಂದಿರಗಳಿಗೆ ಪೊಲೀಸರು ವಿಸಿಟ್ ಹಾಕ್ತಿದಾರೆ.

ಇದೂ ಓದಿ: ಶಿಕ್ಷಕಿಯ ಅಪಹರಿಸಿ ಲವ್ ಜಿಹಾದ್ ಆರೋಪ: ಪೊಲೀಸರು ಮತ್ತು ಅನ್ಯಕೋಮಿನ ಯುವಕನ ವಿರುದ್ಧ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ ಇದೂ ಓದಿ: ಹುಬ್ಬಳ್ಳಿ ಕೋಮುಗಲಭೆ ಪ್ರಕರಣ: ಮಾಸ್ಟರ್​ಮೈಂಡ್ ಮೌಲ್ವಿ ವಸೀಂ ಪಠಾಣ್​ಗೆ ಖಾಕಿ ಪಡೆಯಿಂದ ಸಖತ್ ಗ್ರಿಲ್; ನ್ಯಾಯಾಲಯಕ್ಕೆ ಹಾಜರ

Published On - 6:44 pm, Fri, 22 April 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!