AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್

Pothole: ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರೀಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್
ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ
TV9 Web
| Edited By: sandhya thejappa|

Updated on:Nov 30, 2021 | 2:42 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಾರೆ. ರಸ್ತೆ ಮೇಲೆ ಸಂಚಾರ ಮಾಡುವಾಗ ಏನ್ ಆಗುತ್ತೋ ಏನೋ ಎಂಬ ಭಯದಲ್ಲಿರುತ್ತಾರೆ. ಇದಕ್ಕೆ ಕಾರಣ ರಸ್ತೆಗಳ ಮೇಲಿರುವ ಗುಂಡಿಗಳು. ಹಲವು ಬಾರಿ ಬೆಂಗಳೂರಿನ ಜನರು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪ್ರಯೋಜನ ಆಗದಿದ್ದಾಗ ಗುಂಡಿಗಳಲ್ಲಿ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಕೆಲವರು ಪ್ರಾಣ ರಕ್ಷಣೆಗೆ ತಾವೇ ಹೋಗಿ ಗುಂಡಿಗಳನ್ನು ಮುಚ್ಚಿದ್ದಾರೆ. ಆದರೆ ಇದೀಗ ರಸ್ತೆ ಗುಂಡಿಗಳಲ್ಲಿ ಗಣಹೋಮ ಮಾಡಿ ನಾಗರಿಕ ಸಂಘಟನೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.

ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರಿಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ಒಂದು ರಸ್ತೆ ಕೂಡ ಗುಂಡಿಗಳಿಂದ ಮುಕ್ತವಾಗಿಲ್ಲ. ಬಿಬಿಎಂಪಿ ಗಾಢ ನಿದ್ರೆಯಲ್ಲಿರುವುದರಿಂದ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಬೆಂಗಳೂರಿನಲ್ಲಿ ಗುಂಡಿಗಳು ಅನೇಕ ಜೀವಗಳನ್ನು ಬಲಿ ಪಡೆದಿವೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪಾರಾಗಲು ಗುಂಡಿಯಲ್ಲಿ ಹೋಮ ಮಾಡಿದ್ದೇವೆ ಅಂತ ಭಾರತಿನಗರ ರೆಸಿಡೆಂಟ್ಸ್ ಫೋರಮ್ ತಿಳಿಸಿದೆ.

ಕಾಂಪಬೆಲ್ ರಸ್ತೆ ಗುಂಡಿಗೆ ಇಂದು (ನ.30) 11 ಗಂಟೆ ಸುಮಾರಿಗೆ ಗಣಹೋಮ ಸಲ್ಲಿಸಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಪ್ರತಿಕ್ರಿಯೆ ನೀಡಿರುವ ಭಾರತಿನಗರ ರೆಸಿಡೆಂಟ್ಸ್ ಫೋರಮ್ ಪ್ರಧಾನ ಕಾರ್ಯದರ್ಶಿ ಎನ್ ಎಸ್ ರವಿ, ಪ್ರತಿದಿನ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜೀವ ಕಳೆದುಕೊಳ್ಳುತ್ತಿದ್ದಾರೆ. ಓಡಾಡಲು ಆಗದೇ ಪರದಾಡುವಂತಾಗಿದೆ. ಹೀಗಾಗಿ ರಸ್ತೆಗಳು ಗುಂಡಿಗಳಿಂದ ಮುಕ್ತಿ ಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಅಂತ ತಿಳಿಸಿದ್ದಾರೆ.

ನೀರಿನಿಂದ ತುಂಬಿದ್ದ ಕಾಂಪಬೆಲ್ ರಸ್ತೆಯ ಗುಂಡಿಗೆ ಹೂವು ಹಾಕಿ ಗಣಹೋಮ ಮಾಡಿದ್ದಾರೆ. ಪುರೋಹಿತರು ರಸ್ತೆಯಲ್ಲಿ ಕುಳಿತು ವೇದ ಮಂತ್ರ ಪಠಿಸಿ ಪೂಜೆ ನೆರವೇರಿಸಿದ್ದಾರೆ.

ಇದನ್ನೂ ಓದಿ

ಸುಲಿಗೆ ಪ್ರಕರಣದಲ್ಲಿ ಪರಮ್ ಬೀರ್ ಸಿಂಗ್ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದು ಮಾಡಿದ ಮ್ಯಾಜಿಸ್ಟ್ರೇಟ್ ಕೋರ್ಟ್

ಸಂಸತ್​ನಲ್ಲಿ ದೇವೇಗೌಡರ ಕೈ ಹಿಡಿದು ಕೂರಿಸಿ, ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ

Published On - 2:32 pm, Tue, 30 November 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ