AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್

Pothole: ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರೀಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ; ವಿಡಿಯೋ ವೈರಲ್
ರಸ್ತೆ ಗುಂಡಿಗೆ ಹೂವಿನ ಹಾರ ಹಾಕಿ ಗಣಹೋಮ
TV9 Web
| Edited By: |

Updated on:Nov 30, 2021 | 2:42 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಾರೆ. ರಸ್ತೆ ಮೇಲೆ ಸಂಚಾರ ಮಾಡುವಾಗ ಏನ್ ಆಗುತ್ತೋ ಏನೋ ಎಂಬ ಭಯದಲ್ಲಿರುತ್ತಾರೆ. ಇದಕ್ಕೆ ಕಾರಣ ರಸ್ತೆಗಳ ಮೇಲಿರುವ ಗುಂಡಿಗಳು. ಹಲವು ಬಾರಿ ಬೆಂಗಳೂರಿನ ಜನರು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪ್ರಯೋಜನ ಆಗದಿದ್ದಾಗ ಗುಂಡಿಗಳಲ್ಲಿ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಕೆಲವರು ಪ್ರಾಣ ರಕ್ಷಣೆಗೆ ತಾವೇ ಹೋಗಿ ಗುಂಡಿಗಳನ್ನು ಮುಚ್ಚಿದ್ದಾರೆ. ಆದರೆ ಇದೀಗ ರಸ್ತೆ ಗುಂಡಿಗಳಲ್ಲಿ ಗಣಹೋಮ ಮಾಡಿ ನಾಗರಿಕ ಸಂಘಟನೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ.

ಭಾರತಿನಗರ ರೆಸಿಡೆಂಟ್ಸ್ ಫೋರಮ್ ಎಂಬ ನಾಗರಿಕ ಸಂಘಟನೆ, ಕಾಂಪಬೆಲ್ ರಸ್ತೆಯ ಗುಂಡಿಯೊಂದಕ್ಕೆ ಗಣಹೋಮ ಮಾಡಿಸಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ಒಂದು ರಸ್ತೆ ಕೂಡ ಗುಂಡಿಗಳಿಂದ ಮುಕ್ತವಾಗಿಲ್ಲ. ಬಿಬಿಎಂಪಿ ಗಾಢ ನಿದ್ರೆಯಲ್ಲಿರುವುದರಿಂದ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಬೆಂಗಳೂರಿನಲ್ಲಿ ಗುಂಡಿಗಳು ಅನೇಕ ಜೀವಗಳನ್ನು ಬಲಿ ಪಡೆದಿವೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಾಣಾಪಾಯದಿಂದ ಪಾರಾಗಲು ಗುಂಡಿಯಲ್ಲಿ ಹೋಮ ಮಾಡಿದ್ದೇವೆ ಅಂತ ಭಾರತಿನಗರ ರೆಸಿಡೆಂಟ್ಸ್ ಫೋರಮ್ ತಿಳಿಸಿದೆ.

ಕಾಂಪಬೆಲ್ ರಸ್ತೆ ಗುಂಡಿಗೆ ಇಂದು (ನ.30) 11 ಗಂಟೆ ಸುಮಾರಿಗೆ ಗಣಹೋಮ ಸಲ್ಲಿಸಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಪ್ರತಿಕ್ರಿಯೆ ನೀಡಿರುವ ಭಾರತಿನಗರ ರೆಸಿಡೆಂಟ್ಸ್ ಫೋರಮ್ ಪ್ರಧಾನ ಕಾರ್ಯದರ್ಶಿ ಎನ್ ಎಸ್ ರವಿ, ಪ್ರತಿದಿನ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜೀವ ಕಳೆದುಕೊಳ್ಳುತ್ತಿದ್ದಾರೆ. ಓಡಾಡಲು ಆಗದೇ ಪರದಾಡುವಂತಾಗಿದೆ. ಹೀಗಾಗಿ ರಸ್ತೆಗಳು ಗುಂಡಿಗಳಿಂದ ಮುಕ್ತಿ ಪಡೆಯುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಅಂತ ತಿಳಿಸಿದ್ದಾರೆ.

ನೀರಿನಿಂದ ತುಂಬಿದ್ದ ಕಾಂಪಬೆಲ್ ರಸ್ತೆಯ ಗುಂಡಿಗೆ ಹೂವು ಹಾಕಿ ಗಣಹೋಮ ಮಾಡಿದ್ದಾರೆ. ಪುರೋಹಿತರು ರಸ್ತೆಯಲ್ಲಿ ಕುಳಿತು ವೇದ ಮಂತ್ರ ಪಠಿಸಿ ಪೂಜೆ ನೆರವೇರಿಸಿದ್ದಾರೆ.

ಇದನ್ನೂ ಓದಿ

ಸುಲಿಗೆ ಪ್ರಕರಣದಲ್ಲಿ ಪರಮ್ ಬೀರ್ ಸಿಂಗ್ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದು ಮಾಡಿದ ಮ್ಯಾಜಿಸ್ಟ್ರೇಟ್ ಕೋರ್ಟ್

ಸಂಸತ್​ನಲ್ಲಿ ದೇವೇಗೌಡರ ಕೈ ಹಿಡಿದು ಕೂರಿಸಿ, ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ

Published On - 2:32 pm, Tue, 30 November 21

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!