AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್

ಬೆಂಗಳೂರು ಪವರ್ ಕಟ್: ಕೇಬಲ್ ನಿರ್ವಹಣಾ ಕಾರ್ಯ ಮತ್ತು ಇತರ ನಿರ್ವಹಣಾ ಕಾಮಗಾರಿಗಳ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಕಡಿತ ಇರಲಿದೆ. ಯಾವ ಪ್ರದೇಶಗಳಲ್ಲಿ ಪವರ್ ಕಟ್, ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್
ಸಾಂದರ್ಭಿಕ ಚಿತ್ರ
Ganapathi Sharma
|

Updated on:Dec 26, 2025 | 7:11 AM

Share

ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ಇಂದು (ಡಿಸೆಂಬರ್ 26, 2025) ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. 66/11 ಕೆವಿ ಕಗ್ಗೇನಹಳ್ಳಿ ಸಬ್‌ಸ್ಟೇಷನ್ ಕೇಬಲ್ ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಈ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜತೆಗೆ, ಎಕ್ಸ್​ ಸಂದೇಶದ ಮೂಲಕವೂ ಮಾಹಿತಿ ನೀಡಿದೆ.

ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ಪವರ್ ಕಟ್?

ಬೆಸ್ಕಾಂ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕಗ್ಗೇನಹಳ್ಳಿ ಸಬ್‌ಸ್ಟೇಷನ್‌ನ 9-7 ಫೀಡರ್ ವ್ಯಾಪ್ತಿಯಲ್ಲಿ ಕೇಬಲ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವುದರಿಂದ ಈ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರದು.

ಯಾವೆಲ್ಲ ಏರಿಯಾಗಳಲ್ಲಿ ಪವರ್ ಕಟ್?

ವಿದ್ಯುತ್ ವ್ಯತ್ಯಯಕ್ಕೆ ಒಳಪಡುವ ಪ್ರದೇಶಗಳಲ್ಲಿ ನಾರ್ಥ್ ಗೇಟ್ 1, 2, 3, ಎಂಬಾಸಿ, ಫೀಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಗ್ಗೇನಹಳ್ಳಿ ಸುತ್ತಮುತ್ತಲ ಪ್ರದೇಶಗಳು, ಬಾಗಲೂರು ಕ್ರಾಸ್, ಮಟ್ಟು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ಇದನ್ನೂ ಓದಿ: Viral: ಪವರ್ ಕಟ್ ನೆಪ ಹೇಳಿ ಕಚೇರಿ ಕೆಲಸದಿಂದ ತಪ್ಪಿಸಿಕೊಂಡ ಉದ್ಯೋಗಿಯನ್ನು ತರಾಟೆಗೆ ತೆಗೆದುಕೊಂಡ ಮ್ಯಾನೇಜರ್

ನಿರ್ವಹಣಾ ಕಾರ್ಯ ಪೂರ್ಣಗೊಂಡ ನಂತರ ವಿದ್ಯುತ್ ಸರಬರಾಜು ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Thu, 25 December 25

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ