AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ

Bangalore Power Cut Today: ನಿರ್ವಹಣಾ ಕಾಮಗಾರಿ ಪ್ರಯುಕ್ತ ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯ ನೂರಾರು ಏರಿಯಾಗಳಲ್ಲಿ ಇಂದು (ಡಿಸೆಂಬರ್ 20) ಪವರ್ ಕಟ್ ಇರಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇರಲಿದೆ?ಎಷ್ಟು ಗಂಟೆಯಿಂದ ಎಷ್ಟು ಗಂಟೆ ವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂಬ ವಿವರ ಇಲ್ಲಿದೆ.

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Dec 20, 2025 | 8:02 AM

Share

ಬೆಂಗಳೂರು, ಡಿಸೆಂಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಸ್ಕಾಂ (BESCOM) ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಹಾಗೂ ಇನ್ನು ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಪವರ್ ಕಟ್ ಇರಲಿದೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಪವರ್ ಕಟ್?

ಎಸ್1-ನಿಮ್ಹಾನ್ಸ್ ಕಿದ್ವಾಯಿ, ಜಯದೇವ, ರಾಜೀವ್‌ಗಾಂಧಿ, ಸಂಜಯಗಾಂಧಿ ಮತ್ತು ಇಂದಿರಾ ಗಾಂಧಿ ಆಸ್ಪತ್ರೆ, 1, 2, 3, 4, 9 ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್ ರಸ್ತೆ, ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ, ಐಎಎಸ್ ಕಾಲೊನಿ, ಕೆಎಎಸ್ ಕಾಲೊನಿ, ಎನ್.ಎನ್.ಪಾಳ್ಯ ಕೈಗಾರಿಕಾ ಪ್ರದೇಶ, ಬಿಎಚ್​ಇಎಲ್ ಲೇಔಟ್, ಎಸ್​​ಆರ್‌ಕೆ ಗಾರ್ಡನ್ಸ್ ತಿಲಕ್ ನಗರ, ಶಾಂತಿ ವಾರ್ಕ್ ಮತ್ತು ಅಪಾರ್ಟ್ ಮೆಂಟ್, ರಂಕಾ ಕಾಲೊನಿ ರಸ್ತೆ, ಜಿಆರ್‌ಬಿ ಮುಖ್ಯರಸ್ತೆ, ಜೈನ ದೇವಾಲಯ ರಸ್ತೆ, ಬಿಟಿಎಂ 4ನೇ ಹಂತದ ಕೆಲವು ಭಾಗಗಳು, ಬಿಟಿಎಂ 2ನೇ ಹಂತ, ಮಂತ್ರಿ ಅಪಾರ್ಟ್ ಮೆಂಟ್, ಶೋಭಾ ಅಪಾರ್ಟ್ ಮೆಂಟ್, ವೆಗಾಸಿಟಿ ಮಾಲ್, ಬನ್ನೇರುಘಟ್ಟ ಮುರುಗುರಪ್ಪನ ಪಾಳ್ಯ, ಉತ್ತರಹಳ್ಳಿ ಪೂರ್ಣ ಪ್ರಜ್ಞಾ ಲೇಔಟ್, ಬನಶಂಕರಿ 6ನೇ ಹಂತ, ಶ್ರೀನಗರ, ಹೊಸಕರಹಳ್ಳಿ, ತ್ಯಾಗರಾಜನಗರ, ಬಸವನಗುಡಿ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಔಟ್, 100 ಆಡಿ ವರ್ಮುಲ ರಸ್ತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಕಡಿತ ಇರಲಿದೆ.

ಬ್ರಿಗೇಟ್ ರಸ್ತೆ, ಕೇಂಬ್ರಿಡ್ಜ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಚರ್ಚ್ ಸ್ಟ್ರೀಟ್, ಕಮರ್ಶಿಯಲ್ ಸ್ಟ್ರೀಟ್, ಡಿಕನ್ಸನ್ ರಸ್ತೆ, ಇನ್‌ಫೆಂಟ್ರಿ ರಸ್ತೆ, ಈಶ್ವರ ಲೇಔಟ್, ಜೋಗುಪಾಳ್ಯ, ಕಾಮರಾಜ ರಸ್ತೆ, ಎಂ.ಜಿ.ರಸ್ತೆ (ಚಿನ್ನಸ್ವಾಮಿ ಸೇಡಿಯಂ ಸಮೀಪದ ಭಾಗ ಸಹಿತ). ಮ್ಯೂಸಿಯಂ ರಸ್ತೆ, ಪ್ಲೇನ್ ಸ್ಟ್ರೀಟ್, ಪ್ರೆಸ್ಟೀಜ್ ಹೆರ್ಮಿಟೇಜ್ ಅಪಾರ್ಟ್‌ಮೆಂಟ್, ರಿಚ್ಯಂಡ್ ಟೌನ್, ಯೂನಿಯನ್ ಸ್ಟ್ರೀಟ್, ವೆಲಿಂಗ್ಟನ್ ರಸ್ತೆ, ವುಡ್ ಸ್ಟ್ರೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು

ಭಾರತೀಯ ಸಿಟಿ ಸ್ಟೇಷನ್ ವ್ಯಾಪ್ತಿಯ – ಭಾರತೀಯ ಸಿಟಿ ಎಂಟ್ರೆನ್ಸ್ / ಮುಖ್ಯರಸ್ತೆ, ಭಾರತೀಯ ಸಿಟಿ ಬ್ಯಾಕ್ ಗೇಟ್, ಆರ್ಮಿ ಕಾಲೇಜ್, ಸ್ಟಮ್ ಬೋರ್ಡ್, ಕೆಎಂಪಿ ಲೇಔಟ್, ಕಿಂಗ್‌ಸ್ಟನ್ ರೆಸಿಡೆನ್ಸಿ, ಮದರ್ ಥೆರೇಸಾ ಲೇಔಟ್, ನಾಗೇನಹಳ್ಳಿ ಕೆರೆ, ರೀಜೆನ್ಸಿ ಪಾರ್ಕ್ ಲೇಔಟ್, ಅಂಜನಪ್ಪ ಲೇಔಟ್, ಸಿಎಸ್‌ಐ ಲೇಔಟ್, ನಕ್ಷತ್ರ ಲೇಔಟ್, ಲಾಯರ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 am, Sat, 20 December 25

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ